ಆದರೆ ಮನುಷ್ಯಕುಮಾರನಿಗೆ ಪಾಪ ಗಳನ್ನು ಕ್ಷಮಿಸಿಬಿಡುವದಕ್ಕೆ ಭೂಮಿಯ ಮೇಲೆ ಅಧಿಕಾರ ಉಂಟೆಂದು ನೀವು ತಿಳಿಯಬೇಕು ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ--ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ಹೇಳಿದನು.
Cross references
ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
ಯಾವದು ಸುಲಭ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಡೆ ಅನ್ನುವದೋ?
ಈ ಮನುಷ್ಯನು ಯಾಕೆ ಹೀಗೆ ದೇವದೂಷಣೆಗಳನ್ನು ಮಾಡುತ್ತಾನೆ? ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು ಎಂದು ತಮ್ಮ ಹೃದಯ ಗಳಲ್ಲಿ ಅಂದುಕೊಂಡರು.
ಆದರೆ ಪಾಪಗಳನ್ನು ಕ್ಷಮಿಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ (ಪಾರ್ಶ್ವವಾಯು ರೋಗಿಗೆ)--
ಆಗ ಶಾಸ್ತ್ರಿಗಳೂ ಫರಿ ಸಾಯರೂ--ದೇವದೂಷಣೆಗಳನ್ನು ಮಾಡುವದಕ್ಕೆ ಇವನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು ಎಂದು ತಮ್ಮಲ್ಲಿ ಮಾತನಾಡಿಕೊಂಡರು.
ಆಗ ಇಗೋ, ಹದಿನೆಂಟು ವರುಷ ಗಳಿಂದಲೂ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬೊಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು; ಅವಳು ಯಾವ ರೀತಿಯಲ್ಲಿಯೂ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು.
ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ.
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ.
ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.
ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ,ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
ಪೇತ್ರನು ಅವನಿಗೆ--ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡು ತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು; ಕೂಡಲೆ ಅವನು ಎದ್ದನು.
ನೀವು ಯಾರಿಗೆ ಯಾವದನ್ನು ಮನ್ನಿಸುತ್ತೀರೋ ನಾನು ಸಹ ಮನ್ನಿಸುತ್ತೇನೆ; ನಾನು ಯಾವದನ್ನಾದರೂ ಮನ್ನಿಸಿದ್ದರೆ ಕ್ರಿಸ್ತನ ಸನ್ನಿಧಾನದಲ್ಲಿ ನಿಮ್ಮ ನಿಮಿತ್ತವೇ ಮನ್ನಿಸಿದೆನು.
ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ.