ಹೀಗಿರುವದರಿಂದ ನಾನು ಸಮಾರ್ಯವನ್ನು ಹೊಲದ ದಿಬ್ಬೆಯಾಗಿಯೂ ದ್ರಾಕ್ಷೇ ಬಳ್ಳಿ ನೆಡುವ ಸ್ಥಳವಾಗಿಯೂ ಮಾಡುವೆನು; ಅದರ ಕಲ್ಲುಗಳನ್ನು ತಗ್ಗಿನಲ್ಲಿ ಸುರಿದುಬಿಟ್ಟು; ಅದರ ಅಸ್ತಿವಾರಗಳನ್ನು ಹೊರ ಗೆಡುವೆನು.
Cross references
ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ನಾದ ಹೋಶೇಯನ ಆಳ್ವಿಕೆಯ ಏಳನೇ ವರುಷದಲ್ಲಿ, ಅರಸನಾಗಿರುವ ಹಿಜ್ಕೀಯನ ನಾಲ್ಕನೇ ವರುಷದಲ್ಲಿ ಏನಾಯಿತಂದರೆ, ಅಶ್ಶೂರಿನ ಅರಸನಾದ ಶಲ್ಮನೆಸೆರನು ಸಮಾರ್ಯದ ಮೇಲೆ ಬಂದು ಅದನ್ನು ಮುತ್ತಿಗೆ ಹಾಕಿದನು.
ಮೂರು ವರುಷವಾದ ತರುವಾಯ ಅವರು ಅದನ್ನು ತೆಗೆದುಕೊಂಡರು. ಇಸ್ರಾಯೇಲಿನ ಅರಸನಾಗಿರುವ ಹೋಶೇಯನ ಆಳ್ವಿಕೆಯ ಒಂಭತ್ತನೇ ವರುಷವಾದ ಹಿಜ್ಕೀಯನ ಆರನೇ ವರುಷದಲ್ಲಿ ಸಮಾ ರ್ಯವು ತೆಗೆದುಕೊಳ್ಳಲ್ಪಟ್ಟಿತು.
ನಾನು ಅದನ್ನು ಮಾಡಿದೆನೆಂದು ನೀನು ಬಹುಕಾಲದಿಂದಲೂ ನಾನು ಅದನ್ನು ನಿರೂಪಿಸಿದ್ದೇ ನೆಂದು ನೀನು ಪೂರ್ವದ ದಿವಸಗಳಿಂದಲೂ ಕೇಳ ಲಿಲ್ಲವೋ? ಈಗ ಅದನ್ನು ನಾನು ಅನುಭವಿಸುವಂತೆ ಮಾಡಿದ್ದೇನೆ, ನೀನು ಬಲವಾದ ಪಟ್ಟಣಗಳನ್ನು ಹಾಳಾದ ದಿಬ್ಬೆಗಳಾಗಿ ಮಾಡಿಬಿಡುವ ಹಾಗೆ ಇರು ವದೇ.
ನೀನು ದುರ್ಗವನ್ನು ನಾಶಪಡಿಸಿ ಪಟ್ಟಣ ವನ್ನು ಹಾಳುದಿಬ್ಬವನ್ನಾಗಿಯೂ ಅನ್ಯರ ಅರಮನೆಯನ್ನು ಯಾರೂ ಎಂದಿಗೂ ಕಟ್ಟಬಾರದಂತೆ ಮಾಡಿದ್ದೀ.
ದುರ್ಗಮವಾಗಿಯೂ ಎತ್ತರವಾಗಿ ಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲಸಮಮಾಡಿ ದೂಳಿಗೆ ತರುವನು.
ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು.
ಯುದ್ಧಸ್ಥರ ಮೇಲೆ ನೇಮಿಸಲ್ಪಟ್ಟಿದ್ದ ಒಬ್ಬ ಮನೇವಾರ್ತೆಯವನನ್ನೂ ಅರಸನ ಸನ್ನಿಧಾನದಲ್ಲಿ ನಿಂತವರೊಳಗೆ ಪಟ್ಟಣದಲ್ಲಿ ಸಿಕ್ಕಿದ ಏಳು ಮನುಷ್ಯರನ್ನೂ ದೇಶಸ್ಥರನ್ನೂ ದಂಡಿನವರ ಲೆಕ್ಕದಲ್ಲಿ ಸೇರಿಸಿದ ಸೈನ್ಯಾಧಿಪತಿಯ ಲೇಖಕನನ್ನೂ ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶಸ್ಥರಲ್ಲಿ ಅರುವತ್ತು ಮನುಷ್ಯರನ್ನೂ ಪಟ್ಟಣದೊಳಗಿಂದ ತಕ್ಕೊಂಡನು.
ಬಂಗಾರವು ಹೇಗೆ ಮುಸುಕಾಯಿತು! ಬಹಳ ಶುದ್ಧವಾದ ಬಂಗಾರವು ಹೇಗೆ ಬದಲಾಯಿತು! ಪರಿಶುದ್ಧ ಸ್ಥಳದ ಕಲ್ಲುಗಳು ಪ್ರತಿಯೊಂದು ಬೀದಿಯ ಬದಿಯಲ್ಲಿ ಸುರಿಯಲ್ಪಟ್ಟಿವೆ.
ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ ನೆಲಸಮ ಮಾಡಿ ಅದರ ಅಸ್ತಿವಾರ ವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವದು, ನೀವು ಅದರಲ್ಲಿ ನಾಶ ಮಾಡಲ್ಪಡು ವಿರಿ. ಆಗ ನಾನೇ ಕರ್ತನೆಂದು ನಿಮಗೆ ತಿಳಿದು ಬರುವದು.
ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.
ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ದೇವರಾದ ಕರ್ತನು ತನ್ನ ಮೇಲೆ ಆಣೆಯಿಟ್ಟುಕೊಂಡಿ ದ್ದಾನೆ; ಅದೇನಂದರೆ--ನಾನು ಯಾಕೋಬಿನ ಹೆಚ್ಚಳ ವನ್ನು ಅಸಹ್ಯಿಸಿಕೊಂಡು ಅವನ ಅರಮನೆಗಳನ್ನು ಹಗೆ ಮಾಡುತ್ತೇನೆ; ಅದಕಾರಣ ಪಟ್ಟಣವನ್ನೂ ಅದರಲ್ಲಿ ರುವ ಸಮಸ್ತವನ್ನೂ ನಾನು ಒಪ್ಪಿಸಿಬಿಡುತ್ತೇನೆ.
ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
ನಿನ್ನ ಜನರ ರಕ್ಷಣೆಗೋಸ್ಕರವೂ ನಿನ್ನ ಅಭಿಷಿಕ್ತರ ರಕ್ಷಣೆಗೊಸ್ಕರವೂ ನೀನು ಹೊರಟು ಹೋಗಿ ಕುತ್ತಿಗೆಯ ವರೆಗೂ ಆಸ್ತಿವಾರವನ್ನು ಬರಿದು ಮಾಡಿದ ಹಾಗೆ ದುಷ್ಟರ ಮನೆಯ ತಲೆಯನ್ನು ಗಾಯ ಮಾಡಿಬಿಟ್ಟಿದ್ದೀ. ಸೆಲಾ.
ಆಗ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ. ಎಲ್ಲಾ ಕೆಡವ ಲ್ಪಡದು ಕಲ್ಲಿನ ಮೇಲೆ ಕಲ್ಲು ಒಂದು ಇಲ್ಲಿ ಬಿಡಲ್ಪ ಡುವದಿಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳು ತ್ತೇನೆ ಅಂದನು.