ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.
Cross references
ನಿನಗೆ ಕೇಡುಮಾಡುವದಕ್ಕೆ ನನ್ನ ಕೈಯಲ್ಲಿ ಸಾಮರ್ಥ್ಯ ಇದೆ. ಆದರೆ ನಿನ್ನ ತಂದೆಯ ದೇವರು ನಿನ್ನೆ ರಾತ್ರಿ ನನ್ನ ಸಂಗಡ ಮಾತನಾಡಿ--ನೀನು ಯಾಕೋಬನಿಗೆ ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಹೇಳದ ಹಾಗೆ ಎಚ್ಚರಿಕೆಯಾಗಿರು ಎಂದು ಹೇಳಿದನು.
ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು.
ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ--ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೊ? ಎದ್ದು ರೊಟ್ಟಿತಿನ್ನು; ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೇಲ್ಯನಾದ ನಾಬೋತನ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು ಅಂದಳು.
ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.
ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.
ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು;
ಅವರು ಕೇಡಿನಿಂದ ಬಸುರಾಗಿ ವ್ಯರ್ಥತ್ವ ವನ್ನು ಹೆರುವರು; ಅವರ ಗರ್ಭವು ಮೋಸವನ್ನು ಸಿದ್ಧಮಾಡುವದು.
ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು.
ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ.
ಓ ಕರ್ತನೇ, ಆಕಾಶದಲ್ಲಿ ನಿನ್ನ ಕರುಣೆಯು ಅದೆ; ನಿನ್ನ ನಂಬಿಗಸ್ತಿಕೆಯು ಮೇಘಗಳ ವರೆಗೆ ಮುಟ್ಟಿದೆ.
ದುಷ್ಟರು ಗರ್ಭದಿಂದಲೇ ದೂರವಾಗುತ್ತಾರೆ; ಹುಟ್ಟಿದಾಗಲೇ ಸುಳ್ಳಾಡುವವರಾಗಿ ತಪ್ಪಿಹೋಗುತ್ತಾರೆ.
ಓ ಕರ್ತನೇ, ಕೆಡುಕರಿಂದ ನನ್ನನ್ನು ಬಿಡಿಸು; ಬಲಾತ್ಕಾರಿಗಳಿಂದ ತಪ್ಪಿಸಿ ನನ್ನನ್ನು ಕಾಪಾಡು.
ನಿನಗೆ ಸಾಧ್ಯವಿರುವಾಗ ಹೊಂದತಕ್ಕವರಿಗೆ ಒಳ್ಳೆ ಯದು ಮಾಡುವದನ್ನು ತಪ್ಪಿಸಬೇಡ.
ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು.
ದುಷ್ಟನೂ ಕೆಡುಕನೂ ವಕ್ರಬಾಯಿಂದ ನಡೆದು ಕೊಳ್ಳುವನು.
ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ.
ಒಳ್ಳೆ ಯವನು ಕರ್ತನ ದಯೆಯನ್ನು ಹೊಂದುತ್ತಾನೆ; ಕುಯುಕ್ತಿ ಮಾಡುವವನನ್ನು ಆತನು ದುಷ್ಟನೆಂದು ಖಂಡಿಸುತ್ತಾನೆ.
ಕರ್ತನು ತನ್ನ ಪ್ರಜೆಯಾದ ಪೂರ್ವಿಕರ ಸಂಗಡಲೂ ಅವರ ಅಧಿ ಪತಿಗಳ ಸಂಗಡಲೂ ನ್ಯಾಯತೀರಿಸಲು ಪ್ರವೇಶಿಸು ವನು; ನೀವು ದ್ರಾಕ್ಷೇ ತೋಟವನ್ನು ತಿಂದುಬಿಟ್ಟಿದ್ದೀರಿ; ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.
ಸ್ಥಳ ಮಿಗಿಸದೆ ನೀವು ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ ಹೊಲಕ್ಕೆ ಹೊಲ ಸೇರಿಸುವವರಿಗೆ ಅಯ್ಯೋ!
ಭಯಂಕರನು ಇಲ್ಲವಾಗುತ್ತಾನೆ, ಹಾಸ್ಯಗಾ ರನು ದಹಿಸಲ್ಪಡುವನು, ಕೇಡಿಗೆ ಕಾಯುವವರೆಲ್ಲರು ಕಡಿದು ಹಾಕಲ್ಪಡುವರು.
ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು.
ನಿಮ್ಮ ಕೈಗಳು ರಕ್ತದಿಂದಲೂ ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ; ನಿಮ್ಮ ತುಟಿಗಳು ಸುಳ್ಳನ್ನು ಮಾತಾಡುತ್ತವೆ; ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ.
ಆಮೇಲೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಈ ಪಟ್ಟಣದಲ್ಲಿ ಕುತಂತ್ರಗ ಳನ್ನು ಕಲ್ಪಿಸಿ ದುರಾಲೋಚನೆಗಳನ್ನು ಹೇಳಿ ಕೊಡುವ ವರಾದ ಈ ಜನರು--
ಅವರು ಹೊಂಚು ಹಾಕಿಕೊಂಡಿ ರುವಾಗ ತಮ್ಮ ಹೃದಯವನ್ನು ಅವರು ಒಲೆಯ ಹಾಗೆ ಸಿದ್ಧಮಾಡಿದ್ದಾರೆ; ಅವರ ರೊಟ್ಟಿಗಾರನು ರಾತ್ರಿ ಯೆಲ್ಲಾ ನಿದ್ರೆ ಮಾಡುತ್ತಾನೆ, ಬೆಳಿಗ್ಗೆ ಅದು ಪ್ರಜ್ವಲಿ ಸುವ ಬೆಂಕಿಯ ಹಾಗೆ ಉರಿಯುತ್ತದೆ.
ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿ ದ್ದಾರೆ, ಅದರ ನಿವಾಸಿಗಳು ಸುಳ್ಳುಗಳನ್ನು ಹೇಳುವವ ರಾಗಿದ್ದಾರೆ; ಅವರ ನಾಲಿಗೆ ಅವರ ಬಾಯಿಯಲ್ಲಿ ಕಪಟವುಳ್ಳದ್ದೇ.
ಕರ್ತನಿಗೆ ವಿರೋಧವಾಗಿ ದುರಾ ಲೋಚನೆ ಮಾಡಿ ಕೇಡನ್ನು ಯೋಚಿಸುವವನು ನಿನ್ನೊಳ ಗಿಂದ ಹೊರಟಿದ್ದಾನೆ.
ವಿಧವೆಗೂ ದಿಕ್ಕಿಲ್ಲದವನಿಗೂ ಅನ್ಯ ನಿಗೂ ಬಡವನಿಗೂ ಬಲಾತ್ಕಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ ಎಂಬದು.
ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.
ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು.
ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು.
ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಆತನನ್ನು ಹೇಗೆ ಕೊಲ್ಲ ಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.
ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.
ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು.
ಆದ ಕಾರಣ ಈಗ ನೀವು ಪೌಲನ ವಿಷಯದಲ್ಲಿ ಇನ್ನೂ ಸಂಪೂರ್ಣವಾಗಿ ವಿಚಾರಿಸುವವರೋ ಎಂಬಂತೆ ಮುಖ್ಯನಾಯಕನು ಅವನನ್ನು ಮಾರನೆಯ ದಿನದಲ್ಲಿ ನಿಮ್ಮ ಬಳಿಗೆ ತರುವ ಹಾಗೆ ನೀವು ಆಲೋಚನಾ ಸಭೆಯೊಂದಿಗೆ ಅವನಿಗೆ ಸೂಚಿಸಿರಿ; ಅವನು ಹತ್ತಿರಕ್ಕೆ ಬರುವ ಮುಂಚೆಯೇ ನಾವು ಅವನನ್ನು ಕೊಲ್ಲುವದಕ್ಕೆ ಸಿದ
ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ