Home Bibles ಮೀಕ 2:1 · ಕನ್ನಡ ಬೈಬಲ್
ಮೀಕ 2:1 · ಕನ್ನಡ ಬೈಬಲ್

ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.

Cross references

ಆದಿಕಾಂಡ 31:29

ನಿನಗೆ ಕೇಡುಮಾಡುವದಕ್ಕೆ ನನ್ನ ಕೈಯಲ್ಲಿ ಸಾಮರ್ಥ್ಯ ಇದೆ. ಆದರೆ ನಿನ್ನ ತಂದೆಯ ದೇವರು ನಿನ್ನೆ ರಾತ್ರಿ ನನ್ನ ಸಂಗಡ ಮಾತನಾಡಿ--ನೀನು ಯಾಕೋಬನಿಗೆ ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಹೇಳದ ಹಾಗೆ ಎಚ್ಚರಿಕೆಯಾಗಿರು ಎಂದು ಹೇಳಿದನು.

ದ್ವಿತೀಯೋಪದೇಶಕಾಂಡ 28:32

ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು.

1 ಅರಸುಗಳು 21:7

ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ--ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೊ? ಎದ್ದು ರೊಟ್ಟಿತಿನ್ನು; ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೇಲ್ಯನಾದ ನಾಬೋತನ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು ಅಂದಳು.

ಎಸ್ತೇರ್ 3:8

ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.

ಎಸ್ತೇರ್ 5:14

ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.

ಎಸ್ತೇರ್ 9:25

ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು;

ಯೋಬ 15:35

ಅವರು ಕೇಡಿನಿಂದ ಬಸುರಾಗಿ ವ್ಯರ್ಥತ್ವ ವನ್ನು ಹೆರುವರು; ಅವರ ಗರ್ಭವು ಮೋಸವನ್ನು ಸಿದ್ಧಮಾಡುವದು.

ಕೀರ್ತನೆಗಳು 7:14

ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು.

ಕೀರ್ತನೆಗಳು 36:4

ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ.

ಕೀರ್ತನೆಗಳು 36:5

ಓ ಕರ್ತನೇ, ಆಕಾಶದಲ್ಲಿ ನಿನ್ನ ಕರುಣೆಯು ಅದೆ; ನಿನ್ನ ನಂಬಿಗಸ್ತಿಕೆಯು ಮೇಘಗಳ ವರೆಗೆ ಮುಟ್ಟಿದೆ.

ಕೀರ್ತನೆಗಳು 58:3

ದುಷ್ಟರು ಗರ್ಭದಿಂದಲೇ ದೂರವಾಗುತ್ತಾರೆ; ಹುಟ್ಟಿದಾಗಲೇ ಸುಳ್ಳಾಡುವವರಾಗಿ ತಪ್ಪಿಹೋಗುತ್ತಾರೆ.

ಕೀರ್ತನೆಗಳು 140:1

ಓ ಕರ್ತನೇ, ಕೆಡುಕರಿಂದ ನನ್ನನ್ನು ಬಿಡಿಸು; ಬಲಾತ್ಕಾರಿಗಳಿಂದ ತಪ್ಪಿಸಿ ನನ್ನನ್ನು ಕಾಪಾಡು.

ಸಾಮೇತಿಗಳು 3:27

ನಿನಗೆ ಸಾಧ್ಯವಿರುವಾಗ ಹೊಂದತಕ್ಕವರಿಗೆ ಒಳ್ಳೆ ಯದು ಮಾಡುವದನ್ನು ತಪ್ಪಿಸಬೇಡ.

ಸಾಮೇತಿಗಳು 4:16

ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು.

ಸಾಮೇತಿಗಳು 6:12

ದುಷ್ಟನೂ ಕೆಡುಕನೂ ವಕ್ರಬಾಯಿಂದ ನಡೆದು ಕೊಳ್ಳುವನು.

ಸಾಮೇತಿಗಳು 6:14

ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ.

ಸಾಮೇತಿಗಳು 12:2

ಒಳ್ಳೆ ಯವನು ಕರ್ತನ ದಯೆಯನ್ನು ಹೊಂದುತ್ತಾನೆ; ಕುಯುಕ್ತಿ ಮಾಡುವವನನ್ನು ಆತನು ದುಷ್ಟನೆಂದು ಖಂಡಿಸುತ್ತಾನೆ.

ಯೆಶಾಯ 3:14

ಕರ್ತನು ತನ್ನ ಪ್ರಜೆಯಾದ ಪೂರ್ವಿಕರ ಸಂಗಡಲೂ ಅವರ ಅಧಿ ಪತಿಗಳ ಸಂಗಡಲೂ ನ್ಯಾಯತೀರಿಸಲು ಪ್ರವೇಶಿಸು ವನು; ನೀವು ದ್ರಾಕ್ಷೇ ತೋಟವನ್ನು ತಿಂದುಬಿಟ್ಟಿದ್ದೀರಿ; ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.

ಯೆಶಾಯ 5:8

ಸ್ಥಳ ಮಿಗಿಸದೆ ನೀವು ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ ಹೊಲಕ್ಕೆ ಹೊಲ ಸೇರಿಸುವವರಿಗೆ ಅಯ್ಯೋ!

ಯೆಶಾಯ 29:20

ಭಯಂಕರನು ಇಲ್ಲವಾಗುತ್ತಾನೆ, ಹಾಸ್ಯಗಾ ರನು ದಹಿಸಲ್ಪಡುವನು, ಕೇಡಿಗೆ ಕಾಯುವವರೆಲ್ಲರು ಕಡಿದು ಹಾಕಲ್ಪಡುವರು.

ಯೆಶಾಯ 32:7

ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು.

ಯೆಶಾಯ 59:3

ನಿಮ್ಮ ಕೈಗಳು ರಕ್ತದಿಂದಲೂ ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ; ನಿಮ್ಮ ತುಟಿಗಳು ಸುಳ್ಳನ್ನು ಮಾತಾಡುತ್ತವೆ; ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ.

ಯೆಹೆಜ್ಕೇಲ 11:2

ಆಮೇಲೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಈ ಪಟ್ಟಣದಲ್ಲಿ ಕುತಂತ್ರಗ ಳನ್ನು ಕಲ್ಪಿಸಿ ದುರಾಲೋಚನೆಗಳನ್ನು ಹೇಳಿ ಕೊಡುವ ವರಾದ ಈ ಜನರು--

ಹೊಶೇಯ 7:6

ಅವರು ಹೊಂಚು ಹಾಕಿಕೊಂಡಿ ರುವಾಗ ತಮ್ಮ ಹೃದಯವನ್ನು ಅವರು ಒಲೆಯ ಹಾಗೆ ಸಿದ್ಧಮಾಡಿದ್ದಾರೆ; ಅವರ ರೊಟ್ಟಿಗಾರನು ರಾತ್ರಿ ಯೆಲ್ಲಾ ನಿದ್ರೆ ಮಾಡುತ್ತಾನೆ, ಬೆಳಿಗ್ಗೆ ಅದು ಪ್ರಜ್ವಲಿ ಸುವ ಬೆಂಕಿಯ ಹಾಗೆ ಉರಿಯುತ್ತದೆ.

ಮೀಕ 6:12

ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿ ದ್ದಾರೆ, ಅದರ ನಿವಾಸಿಗಳು ಸುಳ್ಳುಗಳನ್ನು ಹೇಳುವವ ರಾಗಿದ್ದಾರೆ; ಅವರ ನಾಲಿಗೆ ಅವರ ಬಾಯಿಯಲ್ಲಿ ಕಪಟವುಳ್ಳದ್ದೇ.

ನಹೂಮ 1:11

ಕರ್ತನಿಗೆ ವಿರೋಧವಾಗಿ ದುರಾ ಲೋಚನೆ ಮಾಡಿ ಕೇಡನ್ನು ಯೋಚಿಸುವವನು ನಿನ್ನೊಳ ಗಿಂದ ಹೊರಟಿದ್ದಾನೆ.

ಜೆಕರ್ಯ 7:10

ವಿಧವೆಗೂ ದಿಕ್ಕಿಲ್ಲದವನಿಗೂ ಅನ್ಯ ನಿಗೂ ಬಡವನಿಗೂ ಬಲಾತ್ಕಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ ಎಂಬದು.

ಮತ್ತಾಯ 27:1

ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.

ಮಾರ್ಕ 15:1

ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು.

ಲೂಕ 20:19

ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು.

ಲೂಕ 22:2

ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಆತನನ್ನು ಹೇಗೆ ಕೊಲ್ಲ ಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.

ಯೋಹಾನ 19:11

ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.

ಅಪೋಸ್ತಲರ ಕೃತ್ಯಗಳು 23:12

ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು.

ಅಪೋಸ್ತಲರ ಕೃತ್ಯಗಳು 23:15

ಆದ ಕಾರಣ ಈಗ ನೀವು ಪೌಲನ ವಿಷಯದಲ್ಲಿ ಇನ್ನೂ ಸಂಪೂರ್ಣವಾಗಿ ವಿಚಾರಿಸುವವರೋ ಎಂಬಂತೆ ಮುಖ್ಯನಾಯಕನು ಅವನನ್ನು ಮಾರನೆಯ ದಿನದಲ್ಲಿ ನಿಮ್ಮ ಬಳಿಗೆ ತರುವ ಹಾಗೆ ನೀವು ಆಲೋಚನಾ ಸಭೆಯೊಂದಿಗೆ ಅವನಿಗೆ ಸೂಚಿಸಿರಿ; ಅವನು ಹತ್ತಿರಕ್ಕೆ ಬರುವ ಮುಂಚೆಯೇ ನಾವು ಅವನನ್ನು ಕೊಲ್ಲುವದಕ್ಕೆ ಸಿದ

ರೋಮಾಪುರದವರಿಗೆ 1:30

ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ

Interlinear

Choose Theme