ಆದದರಿಂದ ಕರ್ತನು ಹೇಳುವದೇನಂದರೆ--ಇಗೋ, ನಾನು ಈ ಕುಟುಂಬಕ್ಕೆ ವಿರೋಧವಾಗಿ ಕೆಟ್ಟದ್ದನ್ನು ಯೋಚಿಸು ತ್ತೇನೆ; ಆದದರಿಂದ ನೀವು ನಿಮ್ಮ ಕುತ್ತಿಗೆಗಳನ್ನು ಹಿಂತೆ ಗೆಯದೆ ಅಹಂಕಾರವಾಗಿ ನಡೆಯದೆ ಇರುವಿರಿ; ಇದು ಕೆಟ್ಟಕಾಲವೇ.
Cross references
ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
ಇದಲ್ಲದೆ ಕರ್ತನು ಇಂತೆನ್ನುತ್ತಾನೆ --ಚೀಯೋನ್ ಕುಮಾರ್ತೆಯರು ಅಹಂಕಾರಿಗಳಾಗಿದ್ದು ಕತ್ತು ತೂಗುತ್ತಾ ಕಣ್ಣುಗಳನ್ನು ತಿರುಗಿಸುತ್ತಾ ನಾಜೂಕಿ ನಿಂದ ಹೆಜ್ಜೆಇಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆ ಯುವವರಾಗಿರುವದರಿಂದ,
ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ; ನಾವು ಇಸ್ರಾ ಯೇಲಿನ ಪರಿಶುದ್ಧನ ಆಲೋಚನೆಯನ್ನು ತಿಳುಕೊ ಳ್ಳುವ ಹಾಗೆ ಅದು ಸವಿಾಪಿಸಿ ಬರಲಿ ಎಂದು ಹೇಳು ವವರಿಗೆ ಅಯ್ಯೋ!
ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನ ರನ್ನು ಆಳುವ ಹಾಸ್ಯದ ಜನರಾದ ನೀವು ಕರ್ತನ ಮಾತನ್ನು ಕೇಳಿರಿ,
ಭಯಂಕರನು ಇಲ್ಲವಾಗುತ್ತಾನೆ, ಹಾಸ್ಯಗಾ ರನು ದಹಿಸಲ್ಪಡುವನು, ಕೇಡಿಗೆ ಕಾಯುವವರೆಲ್ಲರು ಕಡಿದು ಹಾಕಲ್ಪಡುವರು.
ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ.
ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಯಾವ ಪ್ರಕಾರ ಒಬ್ಬನು ಕುಂಬಾರನ ಪಾತ್ರೆಯನ್ನು ಅದು ತಿರಿಗಿ ಒಂದುಗೂಡದ ಹಾಗೆ ಒಡೆಯುತ್ತಾನೋ ಅದೇ ಪ್ರಕಾರ ನಾನು ಈ ಜನವನ್ನೂ ಈ ಪಟ್ಟಣ ವನ್ನೂ ಒಡೆದು ಬಿಡುವೆನು; ಆಗ ಹೂಣಿಡುವದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಣಿಡುವರು.
ಆಗ ಪ್ರವಾದಿಯಾದ ಹನನ್ಯನು ಆ ನೊಗವನ್ನು ಪ್ರವಾದಿಯಾದ ಯೆರೆವಿಾಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರಾದ ಕರ್ತನೂ ಹೇಳುವದೇನಂದರೆ--ಇಗೋ, ನಾನು ಯೆಹೂದದ ಮೇಲೆಯೂ ಯೆರೂಸಲೇಮಿನ ನಿವಾಸಿ ಗಳೆಲ್ಲರ ಮೇಲೆಯೂ ಅವರ ವಿಷಯವಾಗಿ ಹೇಳಿದ ಕೇಡನ್ನೆಲ್ಲಾ ಬರಮಾಡುತ್ತೇನೆ; ನಾನು ಅವರ ಸಂಗಡ ಮಾತನಾಡುವಾಗ ಅವರು ಕೇಳಲಿಲ್ಲ ಅವರನ್ನು ಕರೆಯು ವಾಗ ಉತ್ತರ ಕೊಡಲಿಲ್ಲ.
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಎಲ್ಲಾ ಪಟ್ಟಣಗಳ ಮೇಲೆಯೂ ಬರಮಾಡಿದ ಎಲ್ಲಾ ಕೇಡನ್ನು ನೀವು ನೋಡಿದ್ದೀರಿ.
ನನ್ನ ಅಕ್ರಮಗಳ ನೊಗವು ಆತನ ಕೈಯಿಂದ ಕಟ್ಟಲ್ಪಟ್ಟಿದೆ; ಅವು ಹೆಣೆಯಲ್ಪಟ್ಟಿವೆ; ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ಮೇಲೆ ಬರುತ್ತವೆ. ಆತನು ನನ್ನ ಶಕ್ತಿಯು ಕುಗ್ಗುವ ಹಾಗೆ ಮಾಡಿದನು, ಕರ್ತನು ನನ್ನನ್ನು ಅವರ ಕೈಗಳಿಗೆ ಒಪ್ಪಿಸಿ ಅವರಿಂದ ನಾನು ಎದ್ದೇಳಲು ಶಕ್ತನಾಗದಂತೆ ಮಾಡಿದ್ದಾನೆ.
ಕರ್ತನು ತಾನು ಸಂಕಲ್ಪಿಸಿದ್ದನ್ನು ಮಾಡಿದ್ದಾನೆ; ಆತನು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತನ್ನ ವಾಕ್ಯವನ್ನು ಪೂರೈಸಿದ್ದಾನೆ. ಆತನು ಕೆಡವಿ ಕನಿಕರಿಸಲಿಲ್ಲ; ಆತನು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿ ಅವನ ಕೊಂಬನ್ನು ಎತ್ತಿದ್ದಾನೆ.
ನಮ್ಮ ಕುತ್ತಿಗೆಗಳು ಹಿಂಸೆಗೊಳ ಗಾದವು; ನಾವು ವಿಶ್ರಾಂತಿಯಿಲ್ಲದೆ ಕಷ್ಟಪಡುತ್ತೇವೆ.
ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;
ಆದ ದರಿಂದ ತ್ವರೆಯಾಗಿ ಓಡುವವನು ನಾಶವಾಗುವನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು; ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.
ಆದದ ರಿಂದ ಆ ಕಾಲದಲ್ಲಿ ಬುದ್ದಿವಂತನು ಮೌನವಾಗಿ ರುವನು; ಯಾಕಂದರೆ ಅದು ಕೆಟ್ಟ ಕಾಲವಾಗಿದೆ.
ಕರ್ತನು ಯಜ್ಞವೇದಿಯ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನು ಹೇಳಿದ್ದೇ ನಂದರೆ--ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದು ಬಿಡು; ಅವರಲ್ಲಿ ಉಳಿದವರನ್ನು ನಾನು ಕೊಲ್ಲುವೆನು; ಅವರಲ್ಲಿ ಓಡಿ ಹೋಗುವವನು ಓಡಿಹೋಗಲಾಗು ವದಿಲ್ಲ; ಅವರಲ್ಲಿ ತಪ್ಪಿಸಿಕೊಳ್ಳುವವನು ತಪ್ಪಿಸಿಕೊಳ್ಳ ಲಾಗುವದಿಲ್ಲ.
ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.
ಆಗ ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು; ಅವರು ಕುರುಡರ ಹಾಗೆ ನಡೆಯುವರು; ಕರ್ತನಿಗೆ ವಿರೋಧವಾಗಿ ಅವರು ಪಾಪಮಾಡಿದ್ದಾರೆ; ಅವರ ರಕ್ತವು ದೂಳಿನಂತೆಯೂ ಅವರ ಮಾಂಸವು ಗೊಬ್ಬರ ದಂತೆಯೂ ಸುರಿಯಲ್ಪಡುವದು.ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
ಅವರು ನನ್ನ ಪ್ರಾಣಕ್ಕಾಗಿ ತಮ್ಮ ಕುತ್ತಿಗೆಗಳನ್ನೇ ಒಡ್ಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರನ್ನು ವಂದಿಸುತ್ತಾರೆ.
ದಿನಗಳು ಕೆಟ್ಟವುಗಳಾಗಿರು ವದರಿಂದ ಕಾಲವನ್ನು ಸುಮ್ಮನೆ ಕಳೆಯದೆ ಉಪಯೋಗಿ ಸಿಕೊಳ್ಳಿರಿ.
ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.