ಯಾಕೋಬಿನ ಮನೆತನದವ ರೆಂದು ಹೆಸರುಗೊಂಡವರೇ, ಕರ್ತನ ಆತ್ಮವು ಕಡಿಮೆ ಯಾಯಿತೋ? ಇವು ಆತನ ಕ್ರಿಯೆಗಳೋ? ಯಥಾ ರ್ಥವಾಗಿ ನಡೆಯುವವನಿಗೆ ನನ್ನ ಮಾತುಗಳು ಒಳ್ಳೇದನ್ನು ಮಾಡುವದಿಲ್ಲವೋ?
Cross references
ಆಗ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಕರ್ತನ ಕೈ ಮೋಟು ಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನು ನೋಡುವಿ ಅಂದನು.
ಯಥಾರ್ಥವಾಗಿ ನಡೆದು ನೀತಿಯನ್ನು ನಡಿಸಿ ತನ್ನ ಹೃದಯದಲ್ಲಿ ಸತ್ಯವನ್ನಾಡುವವನೇ.
ಶುದ್ಧ ನಿಗೆ ಶುದ್ಧನಾಗಿರುವಿ; ಮೂರ್ಖನಿಗೆ ಮೂರ್ಖನಾಗಿ ರುವಿ.
ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
ಓ ಕರ್ತನೇ, ನಿನ್ನ ವಾಕ್ಯದ ಪ್ರಕಾರ ನಿನ್ನ ಸೇವಕ ನಿಗೆ ಒಳ್ಳೇದನ್ನು ಮಾಡಿದ್ದೀ.
ಅವರ ಹೃದಯವು ಕೊಬ್ಬಿನ ಹಾಗೆ ಮಂದವಾಗಿದೆ; ನಾನು ನಿನ್ನ ನ್ಯಾಯಪ್ರಮಾಣದಲ್ಲಿ ಆನಂದಪಡುತ್ತೇನೆ.
ನಿನ್ನ ನ್ಯಾಯ ಪ್ರಮಾಣವು ನನಗೆ ಆನಂದವಾಗಿರದಿದ್ದರೆ ನಾನು ನನ್ನ ಸಂಕಟದಲ್ಲಿ ನಾಶವಾಗುತ್ತಿದ್ದೆನು.
ನನ್ನ ಬೋಧಕರೆಲ್ಲರಿಗಿಂತ ನಾನು ಬುದ್ಧಿವಂತ ನಾಗಿದ್ದೇನೆ; ನಿನ್ನ ಸಾಕ್ಷಿಗಳು ನನ್ನ ಧ್ಯಾನವಾಗಿವೆ.
ನೀತಿವಂತರಿಗೋಸ್ಕರ ಆತನು ಸುಜ್ಞಾನವನ್ನು ಕೂಡಿಸುವನು. ಯಥಾರ್ಥದಿಂದ ನಡೆದುಕೊಳ್ಳುವವರಿಗೆ ಆತನು ಗುರಾಣಿಯಾಗಿದ್ದಾನೆ.
ಯಥಾರ್ಥವಾಗಿ ನಡೆಯುತ್ತಿರುವವನು ದೃಢವಾಗಿ ನಡೆಯುತ್ತಾನೆ; ತನ್ನ ಮಾರ್ಗಗಳನ್ನು ಡೊಂಕು ಮಾಡು ತ್ತಿರುವವನು ಬಯಲಿಗೆ ಬರುವನು.
ಯಥಾರ್ಥವಂತರಿಗೆ ಕರ್ತನ ಮಾರ್ಗವು ಬಲವಾಗಿದೆ; ಅಕ್ರಮ ಮಾಡುವ ವರಿಗೆ ಅದು ನಾಶನವಾಗಿರುವದು.
ತನ್ನ ಯಥಾರ್ಥತೆಯಲ್ಲಿ ನಡೆಯುವವನು ಕರ್ತನಿಗೆ ಭಯಪಡುತ್ತಾನೆ; ತನ್ನ ಮಾರ್ಗಗಳಲ್ಲಿ ವಕ್ರತೆಯುಳ್ಳವನು ಆತನನ್ನು ಅಸಡ್ಡೆಮಾಡುತ್ತಾನೆ.
ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು.
ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.
ನಾನು ಬಂದಾಗ ಯಾಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಯಾಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಹಸ್ತವು ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೇ ಬಿಡಿಸುವದಕ್ಕೆ ನನ್ನಲ್ಲಿ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಅರಣ್ಯವನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ವಿಾನುಗಳು ಬಾಯಾರಿ ಸತ್ತುನಾರುವವು.
ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.
ಇಗೋ, ಕರ್ತನ ಕೈ ರಕ್ಷಿಸಲಾರದ ಹಾಗೆ ಮೋಟುಗೈಯಲ್ಲ. ಆತನ ಕಿವಿ ಕೇಳ ಲಾರದ ಹಾಗೆ ಕಿವುಡಲ್ಲ.
ಓ ಯಾಕೋಬಿನ ಮನೆತನವೇ, ಇಸ್ರಾಯೇಲಿನ ಮನೆತನದ ಎಲ್ಲಾ ಕುಟುಂಬಗಳೇ, ಕರ್ತನ ವಾಕ್ಯವನ್ನು ನೀವು ಕೇಳಿರಿ.
ಇಗೋ, ನಾನು ಅನೇಕ ವಿಾನುಗಾರರನ್ನು ಕಳುಹಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಇವರು ಅವರನ್ನು ಹಿಡಿಯುವರು; ಆಮೇಲೆ ಅನೇಕ ಬೇಟೆ ಗಾರರನ್ನು ಕಳುಹಿಸುವೆನು; ಇವರು ಎಲ್ಲಾ ಬೆಟ್ಟಗುಡ್ಡಗಳ ಮೇಲೆಯೂ ಎಲ್ಲಾ ಗುಡ್ಡಗಳ ಮೇಲೆಯೂ ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡು ವರು.
ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ,
ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ;
ಅವರು ಪ್ರತ್ಯುತ್ತರವಾಗಿ ಆತನಿಗೆ--ಅಬ್ರಹಾಮನು ನಮ್ಮ ತಂದೆ ಅಂದರು; ಅದಕ್ಕೆ ಯೇಸು ಅವರಿಗೆ--ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನ ಕ್ರಿಯೆಗಳನ್ನು ಮಾಡು ತ್ತಿದ್ದಿರಿ.
ಹೊರಗೆ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಹೊರಗೆ ಶರೀರದಲ್ಲಿ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು.
ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ;
ನಿಮ್ಮ ಮೇಲಿರುವ ನಮ್ಮ ಪ್ರೀತಿಯು ಸಂಕೋಚವಾದದ್ದಲ್ಲ, ನಮ್ಮ ವಿಷಯದಲ್ಲಿ ನಿಮ್ಮ ಪ್ರೀತಿಯೇ ಸಂಕೋಚ ವಾದದ್ದು.
ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.