ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ವಿಸ್ಮಯಗೊಳ್ಳುವರು; ಹೌದು, ದೇವರಿಂದ ಉತ್ತರ ವಿಲ್ಲದ ಕಾರಣ ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿ ಕೊಳ್ಳುವರು.
Cross references
ಮಂತ್ರಗಾರರು ಹೇನುಗಳನ್ನು ಬರಮಾಡುವದಕ್ಕೆ ತಮ್ಮ ಮಂತ್ರಗಳಿಂದ ಪ್ರಯತ್ನಿಸಿ ದರು, ಆದರೆ ಆಗದೆ ಹೋಯಿತು. ಹೀಗೆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹಾಗೆಯೇ ಇದ್ದವು.
ಇದಲ್ಲದೆ ಮಂತ್ರಗಾರರು ಹುಣ್ಣಿನ ನಿಮಿತ್ತ ಮೋಶೆಯ ಮುಂದೆ ನಿಂತುಕೊಳ್ಳ ಲಾರದೆ ಹೋದರು. ಹುಣ್ಣುಗಳು ಮಂತ್ರಗಾರರ ಲ್ಲಿಯೂ ಐಗುಪ್ತ್ಯರ ಮೇಲೆಲ್ಲಾ ಇದ್ದವು.
ಆ ವ್ಯಾಧಿ ಇರುವ ಕುಷ್ಠರೋಗಿಯು ತನ್ನ ಬಟ್ಟೆ ಗಳನ್ನು ಹರಿದುಕೊಂಡು ಬರೀ ತಲೆಯಲ್ಲಿ ಮೇಲ್ತುಟಿ ಯನ್ನು ಮುಚ್ಚಿಕೊಂಡು--ನಾನು ಅಶುದ್ಧನು, ಅಶು ದ್ಧನು ಎಂದು ಕೂಗಬೇಕು.
(ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ--ದೀರ್ಘ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ ಅನ್ನುವನು.) ಯಾಕಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಲ್ಪ ಟ್ಟವನು ಪೂರ್ವಕಾಲದಲ್ಲಿ ದೀರ್ಘದರ್ಶಿ ಎಂದು ಕರೆಯಲ್ಪಡುತ್ತಿದ್ದನು.
ಸೌಲನು--ನಾನು ಫಿಲಿಷ್ಟಿಯರನ್ನು ಹಿಂಬಾಲಿಸಿ ಹೋಗಲೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ ಎಂದು ದೇವರ ಆಲೋಚನೆಯನ್ನು ಕೇಳಿದನು; ಆದರೆ ಆತನು ಅವನಿಗೆ ಆ ದಿವಸದಲ್ಲಿ ಪ್ರತ್ಯುತ್ತರ ಕೊಡದೆ ಹೋದನು.
ಸೌಲನು ಕರ್ತನನ್ನು ಕೇಳಿಕೊಂಡಾಗ ಕರ್ತನು ಅವನಿಗೆ ಸ್ವಪ್ನಗ ಳಿಂದಲಾದರೂ ಊರೀಮಿನಿಂದಲಾದರೂ ಪ್ರವಾದಿ ಗಳಿಂದಲಾದರೂ ಪ್ರತ್ಯುತ್ತರಕೊಡಲಿಲ್ಲ.
ಆಗ ಸಮುವೇಲನು ಸೌಲನಿಗೆ--ನೀನು ನನ್ನನ್ನು ಏರಿ ಬರ ಮಾಡಿ ಯಾಕೆ ವಿಶ್ರಾಂತಿಯನ್ನು ಕೆಡಿಸಿದಿ ಅಂದನು. ಅದಕ್ಕೆ ಸೌಲನು--ನಾನು ಬಹಳ ಇಕ್ಕಟ್ಟಿನಲ್ಲಿದ್ದೇನೆ; ಯಾಕಂದರೆ ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧ ಮಾಡುತ್ತಾರೆ; ಆದರೆ ದೇವರು ನನ್ನನ್ನು ಬಿಟ್ಟುಹೋದನು. ಆತನು ಪ್ರವಾದಿಗಳ ಮುಖಾಂತರ ವಾದರೂ ಸ್ವಪ್ನದ ಮುಖಾಂತರವಾದರೂ ನನಗೆ ಪ್ರತ್ಯುತ್ತರಕೊಡಲಿಲ್ಲ; ಆದದರಿಂದ ನಾನು ಮಾಡ ಬೇಕಾದದ್ದನ್ನು ನೀನು ತಿಳಿಸುವ ಹಾಗೆ ನಿನ್ನನ್ನು ಕರೆಸಿದೆನು ಅಂದನು.
ನಮ್ಮ ಗುರುತುಗಳನ್ನು ನೋಡದೆ ಇದ್ದೇವೆ; ಇನ್ನು ಮೇಲೆ ಯಾವ ಪ್ರವಾದಿಯೂ ಇರುವದಿಲ್ಲ ಇಲ್ಲವೆ ಇದು ಎಷ್ಟರವರೆಗೆ ಎಂದು ತಿಳಿದವನು ನಮ್ಮಲ್ಲಿ ಯಾರೂ ಇಲ್ಲ.
ಸುಳ್ಳುಗಾರರ ಗುರುತುಗಳನ್ನು ನಿರರ್ಥಕಮಾಡುವವನೂ ಕಣಿ ಹೇಳು ವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಬುದ್ದಿಹೀನ ವಾಗ ಮಾಡುವವನೂ
ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು.
ವ್ಯಸನದಿಂದ ಸತ್ತವರಿಗಾಗಿ ಅರಚಬೇಡ, ಗೋಳಾಡ ಬೇಡ ನೀನು ರುಮಾಲನ್ನು ಕಟ್ಟಿಕೊಂಡು ಕಾಲುಗಳಿಗೆ ಜೋಡುಗಳನ್ನು ಮೆಟ್ಟಿಕೋ; ತುಟಿಗಳನ್ನು ಮುಚ್ಚಿಕೊಳ್ಳ ಬೇಡ; ಮನುಷ್ಯರ ರೊಟ್ಟಿಯನ್ನು ತಿನ್ನಬೇಡ.
ನಾನು ಮಾಡಿದ ಹಾಗೆ ನೀವು ಮಾಡುವಿರಿ; ನಿಮ್ಮ ತುಟಿಗಳನ್ನು ಮುಚ್ಚಿಕೊಳ್ಳ ಬಾರದು ಅವರ ರೊಟ್ಟಿಯನ್ನೂ ತಿನ್ನಬಾರದು.
ಆದರೆ ನೀವು ಕನಸ್ಸನ್ನು ನನಗೆ ತಿಳಿಸದೆ ಹೋದರೆ ನಿಮಗೆ ಒಂದೇ ನಿರ್ಣಯ ಉಂಟು; ಕಾಲ ಬದಲಾಗುವ ವರೆಗೂ ನೀವು ನನ್ನ ಮುಂದೆ ಕೆಟ್ಟ ಸುಳ್ಳು ಮಾತುಗಳನ್ನು ಮಾತನಾಡಲು ಸಿದ್ಧಮಾಡಿಕೊಂಡಿರುವಿರಿ; ಆದದರಿಂದ ಕನಸನ್ನು ನನಗೆ ತಿಳಿಸಿ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲಿ ರೆಂದು ನಾನು ತಿಳಿದುಕೊಂಡಿರುತ್ತೇನೆ ಎಂದು ಹೇಳಿ ದನು.
ಇಗೋ, ದಿನಗಳು ಬರುವವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ; ಕರ್ತನ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮ ವನ್ನೇ ಎಂಬದಾಗಿ ದೇವರಾದ ಕರ್ತನು ಹೇಳುತ್ತಾನೆ.
ಜನಾಂಗಗಳು ನೋಡಿ ತಮ್ಮ ತ್ರಾಣಕ್ಕೆಲ್ಲಾ ನಾಚಿಕೆ ಪಡುವರು; ತಮ್ಮ ಕೈಗಳನ್ನು ಬಾಯಿಯ ಮೇಲೆ ಇಡುವರು; ಅವರ ಕಿವಿಗಳು ಕಿವುಡಾಗಿ ಹೋಗುವವು.
ಆ ದಿವಸದಲ್ಲಿ ಆಗುವದೇನಂದರೆ, ಪ್ರವಾದಿಗಳು ಪ್ರವಾದಿಸುವಾಗ ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು; ವಂಚಿಸುವ ಹಾಗೆ ಒರಟಾದ ವಸ್ತ್ರವನ್ನು ಹಾಕಿಕೊಳ್ಳರು.
ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ.