ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.
Cross references
ಆಗ ಯಾಕೋಬನು ತನ್ನ ಕುಮಾರರನ್ನು ಕರೆಯಿಸಿ ಅವರಿಗೆ ನೀವೆಲ್ಲರೂ ಕೂಡಿ ಕೊಳ್ಳಿರಿ, ಅಂತ್ಯದಿನಗಳಲ್ಲಿ ಸಂಭವಿಸುವದನ್ನು ನಿಮಗೆ ತಿಳಿಸುತ್ತೇನೆ.
ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
ಬಾಷಾನ್ ಬೆಟ್ಟವು ದೇವರ ಬೆಟ್ಟದಂತೆ ಇದೆ; ಬಾಷಾನ್ ಬೆಟ್ಟವು ಉನ್ನತ ಬೆಟ್ಟವಾಗಿದೆ.
ಯೆರೂಸಲೇಮಿನಲ್ಲಿರುವ ನಿನ್ನ ಮಂದಿ ರದ ನಿಮಿತ್ತ ಅರಸುಗಳು ನಿನಗೆ ಕಾಣಿಕೆಗಳನ್ನು ತರು ವರು.
ಆತನ ದಿವಸಗಳಲ್ಲಿ ನೀತಿವಂತನು ವೃದ್ಧಿಯಾಗುವನು. ಸಮೃದ್ಧಿ ಯಾದ ಸಮಾಧಾನವು ಚಂದ್ರನು ಇರುವ ವರೆಗೂ ಇರುವದು.
ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯ ಮೇಲೆ ಇರುವದು; ಅದರ ಫಲವು ಲೆಬನೋನಿನ ಹಾಗೆ ಕದಲುವದು. ಪಟ್ಟಣದ ವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿಯಾಗುವರು.
ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು.
ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
ಆಮೋಚನ ಮಗನಾದ ಯೆಶಾಯನಿಗೆ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಕಂಡು ಬಂದ ದೈವೋಕ್ತಿ:
ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು
ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
ನಿನ್ನ ಹಾಳಾದ ಸ್ಥಳಗಳೂ ನಿನ್ನ ಏಕಾಂತ ಸ್ಥಳಗಳೂ ಕೆಡವಲ್ಪಟ್ಟ ನಿನ್ನ ದೇಶವೂ ಈಗ ನಿವಾಸಿ ಗಳಿಗೆ ಇಕ್ಕಟ್ಟಾಗುವವು; ನಿನ್ನನ್ನು ನುಂಗಿದವರು ದೂರ ವಾಗುವರು.
ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ನಿನ್ನ ನಿವಾಸದ ಪರದೆಗಳು ಹರಡಲಿ; ಹಿಂತೆ ಗೆಯಬೇಡ; ನಿನ್ನ ಹಗ್ಗಗಳನ್ನು ಉದ್ದ ಮಾಡಿ ಗೂಟ ಗಳನ್ನು ಬಲಪಡಿಸು.
ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು.
ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು.
ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು.
ಆ ಕಾಲದಲ್ಲಿ ಯೆರೂಸಲೇಮು ಕರ್ತನ ಸಿಂಹಾಸನವೆಂದು ಕರೆಯಲ್ಪಡುವದು; ಜನಾಂಗಗ ಳೆಲ್ಲಾ ಅದರ ಬಳಿಗೆ ಕರ್ತನ ಹೆಸರಿನ ಬಳಿಗೆ ಮತ್ತು ಯೆರೂಸಲೇಮಿನೊಳಗೆ ಕೂಡಿಸಲ್ಪಡುವವು; ಇನ್ನು ಮೇಲೆ ತಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳರು.
ಕರ್ತನು ನನಗೆ ಹೀಗೆ ಹೇಳಿದನು--ಹೋಗಿ ಜನರ ಮಕ್ಕಳ ಬಾಗಿಲಲ್ಲಿಯೂ ಯೆಹೂದದ ಅರಸರು ಪ್ರವೇಶಿಸುವಲ್ಲಿಯೂ ಹೊರಡುವಲ್ಲಿಯೂ ಯೆರೂಸ ಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದ ಲ್ಲದೆ ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು; ಎಳೆಯದಾದ ಒಂದನ್ನು ಕತ್ತರಿಸಿ ಎತ್ತರವಾದ ಪರ್ವತದ ಮೇಲೆ ನಾಟುವೆನು.
ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು; ಅದರ ಕೊಂಬೆಗಳು ಒಡೆದು ಫಲಫಲಿಸುವದು; ಘನವುಳ್ಳ ದೇವದಾರು ಆಗುವದು; ಪ್ರತಿಯೊಂದು ಪುಕ್ಕಗಳುಳ್ಳ ಪಕ್ಷಿಗಳು ಅದರ ಕೊಂಬೆಗಳ ನೆರಳಿನ ಕೆಳಗೆ ವಾಸ ಮಾಡುವವು; ಅದರಡಿಯಲ್ಲಿ ವಾಸಿಸುವವು.ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.
ದೇವರ ದರ್ಶನಗಳಲ್ಲಿ ಆತನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ಇರಿಸಿದನು, ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು.
ಇದು ಆ ಆಲಯದ ನ್ಯಾಯಪ್ರಮಾಣವಾಗಿದೆ --ಆ ಪರ್ವತದ ಮೇಲೆಯೂ ಅದರ ಸುತ್ತಲೂ ನಿಗದಿಪಡಿಸಿದವರೆಗೂ ಎಲ್ಲವೂ ಅತ್ಯಂತ ಪರಿಶುದ್ಧ ವಾಗಿದೆ. ಇಗೋ, ಇದೇ ಆ ಆಲಯದ ನ್ಯಾಯ ಪ್ರಮಾಣವಾಗಿದೆ.
ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,
ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.
ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು.
ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.
ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು.
ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.