ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
Cross references
ಕಬ್ಬಿಣವೂ ತಾಮ್ರವೂ ನಿನ್ನ ಪಾದರಕ್ಷೆಯಾಗಿರಲಿ. ನಿನ್ನ ದಿವಸಗಳ ಪ್ರಕಾರ ನಿನ್ನ ಬಲವು ಇರಲಿ ಎಂದು ಹೇಳಿದನು.
ಎಲ್ಲಾ ಬೆಳ್ಳಿ ಬಂಗಾರವೂ ಹಿತ್ತಾಳೆ ಕಬ್ಬಿಣ ಪಾತ್ರೆಗಳೂ ಕರ್ತನಿಗೆ ವಿಾಸಲಾಗಿರ ಬೇಕು. ಅವು ಕರ್ತನ ಭಂಡಾರಕ್ಕೆ ಸೇರಬೇಕು ಅಂದನು.
ಅವನು ದಾವೀದನನ್ನು ವಂದಿಸುವ ದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮ ನನ್ನು ಕಳುಹಿಸಿದನು; ಯಾಕಂದರೆ ತೋವಿಗೂ ಹದ ದೆಜೆರನಿಗೂ ವಿರೋಧವಾಗಿ ಯುದ್ಧಮಾಡಿದಾಗ ದಾವೀದನು ಅವನನ್ನು ಹೊಡೆದಿದ್ದನು; ಹದದೆಜೆರನಿಗೆ ತೋವು ಸಂಗಡ ಯುದ್ಧಗಳಿದ್ದವು. ಯೋರಾಮನು ಬೆಳ್ಳಿ ಬಂಗಾರ ಹಿತ್ತಾಳೆಯ ಪಾತ್ರೆಗಳನ್ನೂ ತನ್ನೊಂದಿಗೆ ತಂದನು.
ಇವುಗಳನ್ನು ಅರಸನಾದ ದಾವೀದನು ವಶಮಾಡಿಕೊಂಡು ಅರಾಮ್ಯರೂ ಮೋವಾಬ್ಯರೂ ಅಮ್ಮೋನನ ಮಕ್ಕಳೂ ಫಿಲಿಷ್ಟಿಯರೂ ಅಮಾಲೇಕ್ಯರೂ ಎಂಬ ಸಕಲ ಜನಾಂಗಗಳಿಂದ ತೆಗೆದು
ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.
ಯೆರೂಸಲೇಮಿನಲ್ಲಿರುವ ನಿನ್ನ ಮಂದಿ ರದ ನಿಮಿತ್ತ ಅರಸುಗಳು ನಿನಗೆ ಕಾಣಿಕೆಗಳನ್ನು ತರು ವರು.
ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.
ಅವರ ಬಾಣಗಳು ಹದವಾಗಿವೆ, ಅವರ ಬಿಲ್ಲುಗಳು ಬೊಗ್ಗಿವೆ, ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ ಅವರ ಚಕ್ರಗಳು ಬಿರು ಗಾಳಿಯಂತೆಯೂ ರಭಸವಾಗಿವೆ.
ಚದರಿಸಲ್ಪಟ್ಟು ಸೂರೆಯಾಗಿರುವ ಜನರೂ ಅವರು ಹುಟ್ಟಿದಂದಿನಿಂದ ಇಲ್ಲಿಯ ವರೆಗೂ ಭಯಂಕರವಾದ ಜನರೂ ಮಹಾಬಲದಿಂದ ತುಳಿಯಲ್ಪಡುವರು. ನದಿ ಗಳಿಂದ ಹಾಳಾಗಿರುವ ದೇಶದವರು ಸೈನ್ಯಗಳ ಕರ್ತನ ಹೆಸರಿನ ಸ್ಥಳವಾದ ಚೀಯೋನ್ ಪರ್ವತಕ್ಕೆ ಆತನಿ ಗೊಸ್ಕರ ಕಾಣಿಕೆಯನ್ನು ತರುವರು.
(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ.
ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು.
ಆಗ ಅವನು ಬದುಕಿದ ದಿನಗಳೆಲ್ಲಾ ಯಾವಾಗಲೂ ಅವನ ಮುಂದೆ ಊಟಮಾಡುತ್ತಿದ್ದನು.ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ.
ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು.
ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು--ಸಮಸ್ತ ಭೂಮಿಯ ಕರ್ತನ ಬಳಿಯಲ್ಲಿ ನಿಲ್ಲುವ ಇಬ್ಬರು ಅಭಿಷೇಕಿಸಲ್ಪಟ್ಟವರು ಇವರೇ ಅಂದನು.
ದೂತನು ನನಗೆ ಉತ್ತರಕೊಟ್ಟು ಹೇಳಿದ್ದೇನಂದರೆ--ಇವು ಆಕಾಶಗಳ ನಾಲ್ಕು ಆತ್ಮಗಳು; ಇವು ಸಮಸ್ತ ಭೂಮಿಯ ಕರ್ತನ ಮುಂದೆ ನಿಂತಲ್ಲಿಂದ ಹೊರಟುಬಂದವೆ.
ಯೆಹೂದವನ್ನು ನನಗಾಗಿ ಬೊಗ್ಗಿಸಿದಾಗ ಎಫ್ರಾಯಾಮನ್ನು ಬಿಲ್ಲುಗಳಿಂದ ತುಂಬಿಸಿದ್ದೇನೆ; ಚೀಯೋನೇ, ನಿನ್ನ ಕುಮಾರರನ್ನು ಗ್ರೀಕ್ ಕುಮಾರರಿಗೆ ವಿರೋಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯಂತೆ ಮಾಡಿದ್ದೇನೆ.
ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು.
ಆ ದಿನದಲ್ಲಿ ನಾನು ಯೆಹೂದದ ದೊರೆಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ ಸಿವುಡುಗಳಲ್ಲಿರುವ ಬೆಂಕಿಯ ಕೊಳ್ಳಿಯ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ ಎಡಗಡೆ ಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನು ನುಂಗಿ ಬಿಡುವರು; ಯೆರೂಸಲೇಮು ತಿರುಗಿ ತನ್ನ ಸ್ಥಳದಲ್ಲಿ, ಯೆರೂಸಲೇಮಿನಲ್ಲಿಯೇ ವಾಸಿಸುವದು.
ಆದರೆ ಈಗ ಪರಿಶುದ್ಧರಿಗೆ ಸೇವೆಮಾಡುವದಕ್ಕೋಸ್ಕರ ನಾನು ಯೆರೂಸಲೇಮಿಗೆ ಹೋಗುತ್ತೇನೆ.
ನಾನು ಬಂದಾಗ (ಹಣ) ಕೂಡಿಸುವದು ಇರದಂತೆ ದೇವರು ಅಭಿವೃದ್ಧಿ ಪಡಿಸಿದ ಪ್ರಕಾರ ವಾರದ ಮೊದಲನೆಯ ದಿನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಹತ್ತಿರ ಕೂಡಿಟ್ಟುಕೊಳ್ಳಲಿ.
ಯಾವನು ಜಯಹೊಂದಿ ನನ್ನ ಕ್ರಿಯೆಗಳನ್ನು ಕಡೇವರೆಗೂ ಕೈಕೊಳ್ಳುತ್ತಾನೋ ಅವನಿಗೆ ನಾನು ಜನಾಂಗಗಳ ಮೇಲೆ ಅಧಿಕಾರವನ್ನು ಕೊಡು ತ್ತೇನೆ.
ರಕ್ಷಿಸಲ್ಪಟ್ಟ ಜನಾಂಗದವರು ಅದರ ಬೆಳಕಿನಲಿ ನಡೆಯುವರು; ಭೂರಾಜರು ತಮ್ಮ ವೈಭವವನ್ನೂ ಘನವನ್ನೂ ಅಲ್ಲಿಗೆ ತರುವರು.