ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು.
Cross references
ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಮಾಡತಕ್ಕವುಗಳು;
ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು.
ಕರ್ತನಿಗೆ ಭಯಪಡುವ ಮನುಷ್ಯನು ಯಾರು? ಅವನು ಆದು ಕೊಳ್ಳುವ ಮಾರ್ಗದಲ್ಲಿ ಆತನು ಅವನಿಗೆ ಬೋಧಿಸುವನು.
ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು.
ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
ನನ್ನ ಜನರೇ, ಕೇಳಿರಿ; ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ; ನ್ಯಾಯಪ್ರಮಾಣವು ನನ್ನಿಂದ ಹೊರಡುವದು ಮತ್ತು ನನ್ನ ನ್ಯಾಯವನ್ನು ಜನರಿಗೆ ಬೆಳಕನ್ನಾಗಿ ಮಾಡುವೆನು.
ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.
ಆಗ ಯೆರೆವಿಾಯನು ಹೇಳಿದ್ದೇನೆಂದರೆ--ಕರ್ತನ ವಾಕ್ಯವು ನನಗೆ ಬಂತು, ಹೇಗಂದರೆ--
ಈ ಪ್ರಕಾರ ಕಸ್ದೀಯರ ದೇಶದಲ್ಲಿ ಕೊಂದುಹಾಕಲ್ಪ ಟ್ಟವರೂ ಅದರ ಬೀದಿಗಳಲ್ಲಿ ತಿವಿಯಲ್ಪಟ್ಟವರೂ ಬೀಳುವರು.
ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.
ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು;
ಹೌದು, ಅನೇಕ ಜನಗಳೂ ಬಲವಾದ ಜನಾಂಗಗಳೂ ಸೈನ್ಯಗಳ ಕರ್ತನನ್ನು ಯೆರೂಸಲೇಮಿನಲ್ಲಿ ಹುಡುಕುವದಕ್ಕೂ ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಬರುವವು.ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
ಆ ದಿನದಲ್ಲಿ ಆಗುವದೇನಂದರೆ, ಯೆರೂಸಲೇಮಿ ನೊಳಗಿದ್ದ ಜೀವಜಲಗಳು ಹೊರಡುವವು; ಅವುಗ ಳಲ್ಲಿ ಅರ್ಧ ಪೂರ್ವ ಸಮುದ್ರಕ್ಕೆ ಅರ್ಧ ಪಶ್ಚಿಮ ಸಮುದ್ರಕ್ಕೆ ಹೋಗುವವು; ಅದು ಬೇಸಿಗೆ ಕಾಲ ದಲ್ಲಿಯೂ ಚಳಿಗಾಲದಲ್ಲಿಯೂ ಇರುವದು.
ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು.
ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
ಅವರೆಲ್ಲರು ದೇವರಿಂದ ಬೋಧಿಸಲ್ಪಡುವರೆಂದು ಪ್ರವಾದನೆಗಳಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬ ಮನುಷ್ಯನು ನನ್ನ ಬಳಿಗೆ ಬರುತ್ತಾನೆ.
ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
ಅದಕಾರಣ ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು; ಅವನು ಚರ್ಮಕಾರನಾದ ಸೀಮೋ ನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿದೆ. ಅವನು ಬಂದು ನಿನ್ನೊಂದಿಗೆ ಮಾತನಾಡುವನು ಎಂದು ಹೇಳಿದನು.
ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು.
ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ.
ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.