ಇದಲ್ಲದೆ ನೀನು ಮಂದೆಯ ಬುರುಜೇ ಚೀಯೋನಿನ ಕುಮಾರ್ತೆಯ ದುರ್ಗವೇ, ನಿನಗೆ ಬರು ವದು, ಹೌದು, ಮೊದಲನೇ ದೊರೆತನವೂ ಯೆರೂ ಸಲೇಮಿನ ಕುಮಾರ್ತೆಗೆ ರಾಜ್ಯವೂ ಬರುವದು.
Cross references
ಇಸ್ರಾಯೇಲನು ಪ್ರಯಾಣಮಾಡಿ ಮಿಗ್ದಲ್ ಏದರೆಂಬ ಗೋಪುರದ ಹಿಂದುಗಡೆಯಲ್ಲಿ ತನ್ನ ಗುಡಾರವನ್ನು ಹಾಕಿದನು.
ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು; ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು ಎಂದು ಹೇಳಿದನು.
ಆದಾಗ್ಯೂ ದಾವೀದನು ಚೀಯೋನಿನ ಕೋಟೆಯನ್ನು ಹಿಡುಕೊಂಡನು. ಅದೇ ದಾವೀದನ ಪಟ್ಟಣವು.
ಊಜೈಯ ಮಗನಾದ ಪಾಲಾ ಲನು ಆ ಕೊನೆಗೆ ಎದುರಾಗಿದ್ದದ್ದನ್ನೂ ಸೆರೆಮನೆಯ ಬಳಿಯಲ್ಲಿರುವ ಅರಮನೆಗೆ ಹೊರ ಪಾರ್ಶ್ವವಾದ ಗೋಪುರವನ್ನೂ ಕಟ್ಟಿಸಿದನು. ಇವನ ತರುವಾಯ ಪರೋಷನ ಮಗನಾದ ಪೆದಾಯನು ಭದ್ರಪಡಿಸಿದನು.
ಬಾಗಲುಗಳೇ, ನಿಮ್ಮ ತಲೆಗಳನ್ನು ಎತ್ತಿರಿ; ನಿತ್ಯ ದ್ವಾರಗಳೇ, ಎತ್ತಲ್ಪಡಿರಿ; ಮಹಿಮೆಯುಳ್ಳ ಅರಸನು ಒಳಗೆ ಬರುತ್ತಾನೆ.
ಚೀಯೋನನ್ನು ಸುತ್ತಿ ಅವಳ ಸುತ್ತಲು ತಿರುಗಿ ಅದರ ಬುರುಜುಗಳನ್ನು ಲೆಕ್ಕಿಸಿರಿ.
ನಿನ್ನ ಕುತ್ತಿಗೆ ದಾವೀದನ ಆಯುಧ ಶಾಲೆಗೋಸ್ಕರ ಕಟ್ಟಿಸಲ್ಪಟ್ಟ ಬುರುಜಿನ ಹಾಗೆ ಇದೆ; ಅದರಲ್ಲಿ ಸಾವಿರ ಗುರಾಣಿಗಳು ತೂಗ ಹಾಕಿವೆ; ಅವುಗಳೆಲ್ಲಾ ಪರಾಕ್ರಮಶಾಲಿಗಳ ಡಾಲುಗಳು.
ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ ನಿನ್ನ ಆಲೋಚನಾ ಪರರನ್ನು ಪ್ರಾರಂಭ ದಲ್ಲಿದ್ದ ಹಾಗೆಯೂ ತಿರಿಗಿ ಒದಗಿಸಿಕೊಡುವೆನು: ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ ನಂಬಿಗಸ್ತಿಕೆಯ ಪಟ್ಟಣವೆಂದೂ ಕರೆಯಲ್ಪಡುವಿ.
ಅವನು ಅದಕ್ಕೆ ಬೇಲಿ ಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದು ಹಾಕಿ ಒಳ್ಳೇ ದ್ರಾಕ್ಷೆಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷೇ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆ ದ್ರಾಕ್ಷೇ ಹಣ್ಣನ್ನು ಕೊಡುವದೆಂದು ಎದುರು ನೋಡು ತ್ತಿರಲು, ಅದು ಕಾಡುಹಣ್ಣನ್ನು ಬಿಟ್ಟಿತು.
ಆ ದಿನ ದಲ್ಲಿ ಅವನು ನೋಬಿನಲ್ಲಿ ಇಳುಕೊಂಡವನಂತೆ ಇದ್ದಾಗ್ಯೂ ಚೀಯೋನ್ ಕುಮಾರ್ತೆಯ ಪರ್ವತಕ್ಕೂ ಯೆರೂಸಲೇಮಿನ ಗುಡ್ಡಕ್ಕೂ ವಿರೋಧವಾಗಿ ತನ್ನ ಕೈಯನ್ನು ಅಲ್ಲಾಡಿಸುವನು.
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.
ಇದಲ್ಲದೆ ಚೀಯೋನ್ ಪರ್ವತದಲ್ಲಿ ರಕ್ಷಕರು ಏಸಾವಿನ ಬೆಟ್ಟಕ್ಕೆ ನ್ಯಾಯ ತೀರಿಸುವದಕ್ಕೋಸ್ಕರ ಏಳುವರು; ಆಗ ರಾಜ್ಯವು ಕರ್ತನದಾಗಿರುವದು.
ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.
ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರಿಗಿರಿ, ಎರಡ ರಷ್ಟು ನಿಮಗೆ ಕೊಡುವೆನೆಂದು ಈ ಹೊತ್ತೇ ಪ್ರಕಟಿ ಸುತ್ತೇನೆ.
ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.
ಇದಾದ ಮೇಲೆ ಆತನು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದನು. ಒಬ್ಬಾ ನೊಬ್ಬ ಮನುಷ್ಯನು ಒಂದು ದ್ರಾಕ್ಷೇತೋಟವನ್ನು ಮಾಡಿ ಸುತ್ತಲೂ ಬೇಲಿಹಾಕಿ ದ್ರಾಕ್ಷೆಯ ಅಲೆಗಾಗಿ ಅಗೆದು ಗೋಪುರ ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೊರಟುಹೋದನು.
ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು.
ಅಲ್ಲಿ ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪವಾಗಲಿ ಸೂರ್ಯನ ಬೆಳಕಾಗಲಿ ಬೇಕಾಗಿರುವ ದಿಲ್ಲ; ಯಾಕಂದರೆ ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು. ಅವರು ಯುಗಯುಗಾಂತರ ಗಳಲ್ಲಿಯೂ ಆಳುವರು.