ಈಗ ಯಾಕೆ ಗಟ್ಟಿಯಾಗಿ ಕೂಗುತ್ತೀ? ನಿನ್ನಲ್ಲಿ ಅರಸನಿಲ್ಲವೋ? ನಿನ್ನ ಆಲೋಚನಾಕರ್ತನು ನಾಶ ವಾದನೋ? ಹೆರುವವಳಂತೆ ನಿನಗೆ ವೇದನೆ ಬಂತು.
Cross references
ಇಗೋ, ಕರ್ತನು, ಸೈನ್ಯಗಳ ಕರ್ತನೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನ ಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದ ದಿಂದಲೂ ತೆಗೆದುಬಿಡುವೆನು.
ಅವರು ಭಯ ಪಡುವರು; ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವವು; ಹೆರುವ ಹೆಂಗಸಿನಂತೆ ಸಂಕಟ ಪಡುವರು; ಅವರು ಒಬ್ಬರಿಗೊಬ್ಬರು ಭ್ರಮೆಪಡು ವರು; ಅವರ ಮುಖಗಳು ಜ್ವಾಲೆಯಂತಿರುವವು.
ಆದ ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ; ಕೇಳಕೂಡದ ಹಾಗೆ ಸಂಕಟಪಡುತ್ತೇನೆ, ನೋಡಕೂಡದ ಹಾಗೆ ಭ್ರಾಂತನಾಗಿದ್ದೇನೆ.
ಓ ಕರ್ತನೇ, ಬಸುರಾದ ಸ್ತ್ರೀಯು ಹೆರುವ ದಕ್ಕೆ ಸವಿಾಪ ಬಂದಾಗ ನೋವಿನಲ್ಲಿದ್ದು ತನ್ನ ಬೇನೆ ಯಲ್ಲಿ ಅರಚುವಂತೆ ಓ ಕರ್ತನೇ, ನಾವು ನಿನ್ನ ಸಮ್ಮುಖದಲ್ಲಿದ್ದೆವು.
ಎಷ್ಟರ ವರೆಗೆ ನಾನು ಧ್ವಜವನ್ನು ನೋಡುತ್ತಾ ತುತೂರಿಯ ಶಬ್ದವನ್ನು ಕೇಳಲಿ?
ಪ್ರಸವವೇದನೆ ಪಡುವವಳ ಸ್ವರಕ್ಕೂ ಚೊಚ್ಚಲನ್ನು ಹೆರುವವಳ ಸಂಕಟಕ್ಕೂ ಸಮಾನವಾಗಿ ರುವ ಚೀಯೋನಿನ ಮಗಳ ಸ್ವರವನ್ನು ಕೇಳಿದ್ದೇನೆ; ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ--ನನಗೀಗ ಅಯ್ಯೋ, ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ ಎಂದನ್ನುತ್ತಾಳೆ.
ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು.
ಕರ್ತನು ಅನ್ನುತ್ತಾನೆ--ನಾನು ಸವಿಾಪದಲ್ಲಿ ದೇವರಾಗಿದ್ದು ದೂರದಲ್ಲಿ ದೇವರ ಲ್ಲವೋ?
ಒಂದು ದಿನವದೆ; ಆಗ ಎಫ್ರಾಯಾಮಿನ ಪರ್ವತದಲ್ಲಿ ಕಾಯುವವರು--ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಕರ್ತನ ಬಳಿಗೆ ಹೋಗೋಣ ಎಂದು ಕೂಗುವರು.
ಕರ್ತನು ಹೀಗೆ ಹೇಳುತ್ತಾನೆ --ಯಾಕೋಬನ ವಿಷಯ ಸಂತೋಷದಿಂದ ಹಾಡಿ ಮುಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ, ಸಾರಿರಿ, ಸ್ತುತಿಸಿರಿ; ಕರ್ತನೇ, ನಿನ್ನ ಜನರನ್ನೂ ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು ಎಂದು ಹೇಳಿರಿ.
ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು.
ಅದರ ಪಟ್ಟಣಗಳು ಹಾಳಾದವು; ಅವು ಒಣನೆಲವೂ ಅಡವಿಯೂ ಯಾರೂ ವಾಸಮಾಡದೆ, ಮನುಷ್ಯನ ಮಗನು ಹಾದುಹೋಗದೆ ಇರುವ ದೇಶವೂ ಆಗಿವೆ.
ಯಾರ ವಿಷಯವಾಗಿ ನಾವು--ಅವನ ನೆರಳಿನ ಕೆಳಗೆ ಅನ್ಯ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿ ಕೊಂಡೆವೋ ನಮ್ಮ ಮೂಗಿನ ಉಸಿರಾದ ಆ ಕರ್ತನ ಅಭಿಷಿಕ್ತನು ಅವರ ಕುಣಿಗಳಲ್ಲಿ ಸಿಕ್ಕಿಕೊಂಡನು.
ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
ಅವರು--ನಮಗೆ ಅರಸನಿಲ್ಲ, ನಾವು ಕರ್ತನಿಗೆ ಭಯಪಡಲಿಲ್ಲ; ಹಾಗಾದರೆ ಅರಸನು ನಮಗೆ ಏನು ಮಾಡುವನು ಎಂದು ಅಂದುಕೊಳ್ಳುವರು.
ನಾನೇ ನಿನ್ನ ಅರಸನಾಗಿ ರುವೆನು; ನಿನ್ನ ಎಲ್ಲಾ ಪಟ್ಟಣಗಳಲ್ಲಿ ನಿನ್ನನ್ನು ರಕ್ಷಿಸುವ ಬೇರೆಯ ವನು ಎಲ್ಲಿದ್ದಾನೆ? ಮತ್ತು--ರಾಜನನ್ನೂ ಪ್ರಧಾನ ರನ್ನೂ ನನಗೆ ದಯಪಾಲಿಸು ಎಂದು ನೀನು ಹೇಳಿದ ನ್ಯಾಯಾಧಿಪತಿಗಳು ಎಲ್ಲಿದ್ದಾರೆ?