ಕರ್ತನು ಹೇಳುವದನ್ನು ಈಗ ಕೇಳಿರಿ--ಎದ್ದೇಳು,ಬೆಟ್ಟಗಳ ಮುಂದೆ ವ್ಯಾಜ್ಯವಾಡು; ಗುಡ್ಡಗಳು ನಿನ್ನ ಶಬ್ದವನ್ನು ಕೇಳಲಿ.
Cross references
ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ.
ಓ ಆಕಾಶಗಳೇ ಕಿವಿಗೊಡಿರಿ, ನಾನು ಮಾತನಾಡುತ್ತೇನೆ; ಓ ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಕೇಳು.
ಆಗ ಸಮುವೇಲನು ಸೌಲನಿಗೆಅದಿರಲಿ ಕರ್ತನು ಈ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುವೆನು ಅಂದನು. ಅದಕ್ಕವನು--ಹೇಳು ಅಂದನು.
ಬಲಿಷ್ಠ ದೇವರಾಗಿರುವ ಕರ್ತನು ತಾನೇ ಮಾತನಾಡಿ ಸೂರ್ಯೋದಯದಿಂದ ಅಸ್ತಮಾನದ ವರೆಗೂ ಭೂನಿವಾಸಿಗಳನ್ನು ಕರೆದಿದ್ದಾನೆ.
ತನ್ನ ಜನರಿಗೆ ನ್ಯಾಯ ತೀರಿಸುವದಕ್ಕೆ ಮೇಲಿನಿಂದ ಆಕಾಶಗಳನ್ನೂ ಭೂಮಿ ಯನ್ನೂ ಕರೆಯುತ್ತಾನೆ.
ಓ ಆಕಾಶ ಗಳೇ, ಕೇಳಿರಿ; ಓ ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ.
ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.
ಕರ್ತನು ವಾದಿಸುವದಕ್ಕೂ ಜನರಿಗೆ ನ್ಯಾಯ ತೀರಿಸುವದಕ್ಕೂ ಎದ್ದು ನಿಂತಿದ್ದಾನೆ.
ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.
ನನ್ನ ವಾಕ್ಯವು ಬೆಂಕಿಯ ಹಾಗಲ್ಲವೋ ಎಂದು ಕರ್ತನು ಅನ್ನುತ್ತಾನೆ. ಅದು ಬಂಡೆಯನ್ನು ತುಂಡು ಮಾಡುವ ಸುತ್ತಿಗೆಯ ಹಾಗಲ್ಲವೋ?
ಇಸ್ರಾಯೇ ಲಿನ ಪರ್ವತಗಳೇ, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಪರ್ವತಗಳಿಗೂ ಗುಡ್ಡ ಗಳಿಗೂ ನದಿಗಳಿಗೂ ಕಣಿವೆಗಳಿಗೂ ಹೀಗೆ ಹೇಳು ತ್ತಾನೆ--ಇಗೋ, ನಾನು, ನಾನೇ ನಿಮ್ಮ ಮೇಲೆ ಕತ್ತಿ ಯನ್ನು ತಂದು ನಿಮ್ಮ ಎತ್ತರ ಸ್ಥಳಗಳನ್ನು (ಮೇಡುಗ ಳನ್ನು) ನಾಶಮಾಡುತ್ತೇನೆ.
ಅಲ್ಲದೆ ಮನುಷ್ಯಪುತ್ರನೇ, ಇಸ್ರಾಯೇಲ್ ಪರ್ವತಗಳ ಕಡೆಗೆ ಪ್ರವಾದಿಸು ಮತ್ತು ಹೇಳು--ಇಸ್ರಾಯೇಲ್ ಪರ್ವತಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ;
ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹೊರಡಿಸಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವಿರಿ; ಅವರ ಬರುವಿಕೆಯು ಸವಿಾಪವಾಗಿದೆ.
ಆತನು ನನಗೆ ಹೇಳಿದ್ದೇನಂದರೆ--ಈ ಎಲುಬುಗಳ ಮೇಲೆ ಪ್ರವಾದಿಸು ಮತ್ತು ಅವುಗಳಿಗೆ ಹೇಳು--ಓ ಒಣಗಿದ ಎಲುಬುಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.
ಓ ಇಸ್ರಾಯೇಲಿನ ಮಕ್ಕಳೇ, ಕರ್ತನು ನಿಮಗೆ ವಿರೋಧವಾಗಿ ಹೇಳುವ ವಾಕ್ಯ ವನ್ನು ಕೇಳಿರಿ--ನಾನು ಐಗುಪ್ತ ದೇಶದೊಳಗಿಂದ ಕರೆದು ತಂದ ಸಮಸ್ತ ಕುಟುಂಬಕ್ಕೆ ಹೇಳುವದೇ ನಂದರೆ--
ಎಲ್ಲಾ ಜನಗಳೇ, ಕೇಳಿರಿ, ಭೂಮಿಯೇ, ಅದರ ಪರಿಪೂರ್ಣತೆಯೇ, ಕಿವಿಗೊಡಿರಿ; ಕರ್ತನಾದ ದೇವರು ತನ್ನ ಪರಿಶುದ್ಧ ಮಂದಿರದೊಳಗಿಂದ ಕರ್ತನು ನಿಮಗೆ ವಿರೋಧವಾಗಿ ಸಾಕ್ಷಿಯಾಗಿರಲಿ.
ಬೆಂಕಿಯ ಮುಂದೆ ಮೇಣದ ಹಾಗೆಯೂ ಇಳಿಜಾರಿನ ಸ್ಥಳದಲ್ಲಿ ಸುರಿಯುವ ನೀರಿನ ಹಾಗೆಯೂ ಬೆಟ್ಟಗಳು ಆತನ ಕೆಳಗೆ ಕರಗುವವು; ತಗ್ಗುಗಳು ಸೀಳುವವು.
ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.
ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ