ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.
Cross references
ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು.
ಆಗ ನಾನು ಅವರನ್ನು ನೆಲದ ಧೂಳಿನ ಹಾಗೆ ಪುಡಿಪುಡಿಮಾಡಿದೆನು; ಬೀದಿಯ ಕೆಸರಿನ ಹಾಗೆ ಅವರನ್ನು ತುಳಿದು ಚದರುವಂತೆ ಮಾಡಿದೆನು.
ಅವನು-- ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ ಅಂದನು. ಅವರು ಅವ ಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ ಕುದುರೆಗಳ ಮೇಲೆಯೂ ಚೆಲ್ಲಲ್ಪಟ್ಟಿತು. ಅವನು ಅವಳನ್ನು ತುಳಿಸಿದನು.
ಗಾಳಿಯ ಮುಂದಿನ ಧೂಳಿನಹಾಗೆ ಅವ ರನ್ನು ಹೊಡೆದು ಪುಡಿಪುಡಿ ಮಾಡಿದನು; ಬೀದಿಯ ಕೆಸರಿನಹಾಗೆ ಅವರನ್ನು ಹೊರಗೆ ಚೆಲ್ಲಿಬಿಟ್ಟನು.
ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ, ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ.
ನಿನ್ನ ದೇವರು ಎಲ್ಲಿ ಎಂದು ಅವರು ದಿನವೆಲ್ಲಾ ನನಗೆ ಹೇಳುವ ದರಿಂದ ನನ್ನ ಕಣ್ಣೀರು ನನಗೆ ಹಗಲಿರುಳು ಆಹಾರ ವಾಗಿದೆ.
ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
ಅವರ ದೇವರು ಎಲ್ಲಿ ಎಂದು ಅನ್ಯಜನಾಂಗಗಳು ಯಾಕೆ ಹೇಳಬೇಕು? ಚೆಲ್ಲಿರುವ ನಿನ್ನ ಸೇವಕರ ರಕ್ತದ ಪ್ರತಿ ದಂಡನೆಯನ್ನು ನಮ್ಮ ಕಣ್ಣುಗಳ ಮುಂದೆ ಅನ್ಯ ಜನಾಂಗಗಳಲ್ಲಿ ತಿಳಿಯಲ್ಪಡಲಿ.
ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು.
ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಂಡು ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ.
ಅವರ ದೇವರು ಎಲ್ಲಿ ಎಂದು ಅನ್ಯ ಜನಾಂಗಗಳು ಯಾಕೆ ಹೇಳಬೇಕು?
ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು.ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು.
ಆತನು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾ. ಉನ್ನತ ದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ.
ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
ನೀನು ನಂಬುವ ದೇವರು, ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು;
ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ.
ಓ ಕಸ್ದೀಯರ ಕುಮಾರಿಯೇ, ಮೌನ ವಾಗಿ ಕುಳಿತುಕೋ, ಕತ್ತಲೊಳಗೆ ಹೋಗು; ಯಾಕಂ ದರೆ ಇನ್ನು ಮೇಲೆ ನೀನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವದಿಲ್ಲ.
ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ ನಿನ್ನ ಕರ್ತನಾಗಿರುವ ಕರ್ತನೂ ಹೀಗನ್ನು ತ್ತಾನೆ--ಇಗೋ, ನಾನು ನಿನ್ನ ಕೈಯೊಳಗಿಂದ ತತ್ತರಿಸು ವಂಥ ಪಾತ್ರೆಯನ್ನೂ ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ; ಇನ್ನು ಮೇಲೆ ನೀನು ಅದನ್ನು ತಿರಿಗಿ ಕುಡಿಯುವದೇ ಇಲ್ಲ.ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
ನಿನ್ನ ವಸ್ತ್ರಗಳು ಯಾಕೆ ಕೆಂಪಾದವು? ನಿನ್ನ ಬಟ್ಟೆಗಳು ಯಾಕೆ ದ್ರಾಕ್ಷೇಯನ್ನು ತುಳಿಯುವವನ ಹಾಗಿವೆ?
ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಒಳಪಟ್ಟಿತು; ಅದರ ಅಸ್ತಿವಾರಗಳು ಬಿದ್ದು ಹೋದವು; ಅದರ ಗೋಡೆಗಳು ಕೆಡವಲ್ಪಟ್ಟವು; ಅದು ಕರ್ತನ ಪ್ರತಿದಂಡನೆಯೇ, ಅದರಿಂದ ಪ್ರತಿ ದಂಡನೆ ತಕ್ಕೊಳ್ಳಿರಿ. ಅದು ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬೆಲಿನ ಮಗಳು ಇದ್ದಾಳೆ; ಇನ್ನು ಸ್ವಲ್ಪ ಹೊತ್ತಾದ ಮೇಲೆ ಅದಕ್ಕೆ ಸುಗ್ಗೀಕಾಲ ಬರುವದು.
ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು.
ಕಾವಲಿನ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂವರು ದ್ವಾರಪಾಲಕರನ್ನೂ ತಕ್ಕೊಂಡನು.
ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿ ಕೊಳ್ಳುವರು ಮತ್ತು ಭಯವು ಅವರನ್ನು ಮುಚ್ಚಿಬಿಡು ವದು; ಎಲ್ಲಾ ಮುಖಗಳ ಮೇಲೆ ನಾಚಿಕೆಯೂ ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವವು.
ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು?
ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಬಲಾತ್ಕಾರದ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚು ವದು; ನೀನು ಎಂದೆಂದಿಗೂ ಕಡಿದುಹಾಕಲ್ಪಡುವಿ.
ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ; ಅವರು--ಅವಳು ಕೆಡಿಸಲ್ಪಡಲಿ, ಚೀಯೋನಿನ ಮೇಲೆ ನಮ್ಮ ಕಣ್ಣುಗಳು ದೃಷ್ಟಿಸಲಿ ಎಂದು ಹೇಳುತ್ತಾರೆ.
ಚೂರುಚೂರಾಗಿ ಒಡೆದು ಬಿಡುವವನು ನಿನ್ನ ಎದುರಿಗೆ ಬಂದಿದ್ದಾನೆ; ಆಯುಧ ಗಳನ್ನು ಭದ್ರಪಡಿಸು; ದಾರಿಯನ್ನು ಕಾಯಿ; ನಡುವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಬಲವಾಗಿ ಗಟ್ಟಿ ಮಾಡಿಕೋ.
ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ.
ಅವರು ಯುದ್ಧ ದಲ್ಲಿ ಶತ್ರುವನ್ನು ಬೀದಿಗಳ ಕೆಸರಿನಲ್ಲಿ ತುಳಿಯುವ ಶೂರರ ಹಾಗಿರುವರು; ಕರ್ತನು ಅವರ ಸಂಗಡ ಇರುವದರಿಂದ ಯುದ್ಧಮಾಡುವರು; ಕುದುರೆಗಳ ಮೇಲೆ ಸವಾರಿ ಮಾಡುವವರನ್ನು ನಾಚಿಕೆಪಡಿಸುವರು.
ನಿಮ್ಮ ಕಣ್ಣುಗಳು ನೋಡುವವು; ಇಸ್ರಾಯೇಲಿನ ಮೇರೆ ಯಿಂದ ಕರ್ತನು ಘನಹೊಂದುವನು ಎಂದು ನೀವು ಹೇಳುವಿರಿ.
ದುಷ್ಟರನ್ನು ತುಳಿದುಬಿಡುವಿರಿ; ಯಾಕಂದರೆ ನಾನು ಕಾರ್ಯ ಸಾಧಿಸುವ ದಿನದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.
ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ.
ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.