Home Bibles ಮೀಕ 7:10 · ಕನ್ನಡ ಬೈಬಲ್
ಮೀಕ 7:10 · ಕನ್ನಡ ಬೈಬಲ್

ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.

Cross references

ಯೆಹೋಶುವ 7:9

ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು.

2 ಸಮುವೇಲ 22:43

ಆಗ ನಾನು ಅವರನ್ನು ನೆಲದ ಧೂಳಿನ ಹಾಗೆ ಪುಡಿಪುಡಿಮಾಡಿದೆನು; ಬೀದಿಯ ಕೆಸರಿನ ಹಾಗೆ ಅವರನ್ನು ತುಳಿದು ಚದರುವಂತೆ ಮಾಡಿದೆನು.

2 ಅರಸುಗಳು 9:33

ಅವನು-- ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ ಅಂದನು. ಅವರು ಅವ ಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ ಕುದುರೆಗಳ ಮೇಲೆಯೂ ಚೆಲ್ಲಲ್ಪಟ್ಟಿತು. ಅವನು ಅವಳನ್ನು ತುಳಿಸಿದನು.

ಕೀರ್ತನೆಗಳು 18:42

ಗಾಳಿಯ ಮುಂದಿನ ಧೂಳಿನಹಾಗೆ ಅವ ರನ್ನು ಹೊಡೆದು ಪುಡಿಪುಡಿ ಮಾಡಿದನು; ಬೀದಿಯ ಕೆಸರಿನಹಾಗೆ ಅವರನ್ನು ಹೊರಗೆ ಚೆಲ್ಲಿಬಿಟ್ಟನು.

ಕೀರ್ತನೆಗಳು 35:26

ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ, ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ.

ಕೀರ್ತನೆಗಳು 42:3

ನಿನ್ನ ದೇವರು ಎಲ್ಲಿ ಎಂದು ಅವರು ದಿನವೆಲ್ಲಾ ನನಗೆ ಹೇಳುವ ದರಿಂದ ನನ್ನ ಕಣ್ಣೀರು ನನಗೆ ಹಗಲಿರುಳು ಆಹಾರ ವಾಗಿದೆ.

ಕೀರ್ತನೆಗಳು 42:10

ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.

ಕೀರ್ತನೆಗಳು 58:10

ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.

ಕೀರ್ತನೆಗಳು 79:10

ಅವರ ದೇವರು ಎಲ್ಲಿ ಎಂದು ಅನ್ಯಜನಾಂಗಗಳು ಯಾಕೆ ಹೇಳಬೇಕು? ಚೆಲ್ಲಿರುವ ನಿನ್ನ ಸೇವಕರ ರಕ್ತದ ಪ್ರತಿ ದಂಡನೆಯನ್ನು ನಮ್ಮ ಕಣ್ಣುಗಳ ಮುಂದೆ ಅನ್ಯ ಜನಾಂಗಗಳಲ್ಲಿ ತಿಳಿಯಲ್ಪಡಲಿ.

ಕೀರ್ತನೆಗಳು 92:12

ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು.

ಕೀರ್ತನೆಗಳು 109:29

ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಂಡು ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ.

ಕೀರ್ತನೆಗಳು 115:2

ಅವರ ದೇವರು ಎಲ್ಲಿ ಎಂದು ಅನ್ಯ ಜನಾಂಗಗಳು ಯಾಕೆ ಹೇಳಬೇಕು?

ಕೀರ್ತನೆಗಳು 137:8

ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು.ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.

ಯೆಶಾಯ 25:10

ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು.

ಯೆಶಾಯ 26:5

ಆತನು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾ. ಉನ್ನತ ದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ.

ಯೆಶಾಯ 26:11

ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.

ಯೆಶಾಯ 37:10

ನೀನು ನಂಬುವ ದೇವರು, ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು;

ಯೆಶಾಯ 41:15

ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ.

ಯೆಶಾಯ 47:5

ಓ ಕಸ್ದೀಯರ ಕುಮಾರಿಯೇ, ಮೌನ ವಾಗಿ ಕುಳಿತುಕೋ, ಕತ್ತಲೊಳಗೆ ಹೋಗು; ಯಾಕಂ ದರೆ ಇನ್ನು ಮೇಲೆ ನೀನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವದಿಲ್ಲ.

ಯೆಶಾಯ 51:22

ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ ನಿನ್ನ ಕರ್ತನಾಗಿರುವ ಕರ್ತನೂ ಹೀಗನ್ನು ತ್ತಾನೆ--ಇಗೋ, ನಾನು ನಿನ್ನ ಕೈಯೊಳಗಿಂದ ತತ್ತರಿಸು ವಂಥ ಪಾತ್ರೆಯನ್ನೂ ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ; ಇನ್ನು ಮೇಲೆ ನೀನು ಅದನ್ನು ತಿರಿಗಿ ಕುಡಿಯುವದೇ ಇಲ್ಲ.ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.

ಯೆಶಾಯ 63:2

ನಿನ್ನ ವಸ್ತ್ರಗಳು ಯಾಕೆ ಕೆಂಪಾದವು? ನಿನ್ನ ಬಟ್ಟೆಗಳು ಯಾಕೆ ದ್ರಾಕ್ಷೇಯನ್ನು ತುಳಿಯುವವನ ಹಾಗಿವೆ?

ಯೆರೆಮಿಯ 49:15

ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಒಳಪಟ್ಟಿತು; ಅದರ ಅಸ್ತಿವಾರಗಳು ಬಿದ್ದು ಹೋದವು; ಅದರ ಗೋಡೆಗಳು ಕೆಡವಲ್ಪಟ್ಟವು; ಅದು ಕರ್ತನ ಪ್ರತಿದಂಡನೆಯೇ, ಅದರಿಂದ ಪ್ರತಿ ದಂಡನೆ ತಕ್ಕೊಳ್ಳಿರಿ. ಅದು ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.

ಯೆರೆಮಿಯ 50:33

ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬೆಲಿನ ಮಗಳು ಇದ್ದಾಳೆ; ಇನ್ನು ಸ್ವಲ್ಪ ಹೊತ್ತಾದ ಮೇಲೆ ಅದಕ್ಕೆ ಸುಗ್ಗೀಕಾಲ ಬರುವದು.

ಯೆರೆಮಿಯ 51:8

ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು.

ಯೆರೆಮಿಯ 51:24

ಕಾವಲಿನ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂವರು ದ್ವಾರಪಾಲಕರನ್ನೂ ತಕ್ಕೊಂಡನು.

ಯೆಹೆಜ್ಕೇಲ 7:18

ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿ ಕೊಳ್ಳುವರು ಮತ್ತು ಭಯವು ಅವರನ್ನು ಮುಚ್ಚಿಬಿಡು ವದು; ಎಲ್ಲಾ ಮುಖಗಳ ಮೇಲೆ ನಾಚಿಕೆಯೂ ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವವು.

ದಾನಿಯೇಲ 3:15

ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.

ಯೋವೇಲ 2:17

ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು?

ಒಬದ್ಯ 1:10

ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಬಲಾತ್ಕಾರದ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚು ವದು; ನೀನು ಎಂದೆಂದಿಗೂ ಕಡಿದುಹಾಕಲ್ಪಡುವಿ.

ಮೀಕ 4:11

ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ; ಅವರು--ಅವಳು ಕೆಡಿಸಲ್ಪಡಲಿ, ಚೀಯೋನಿನ ಮೇಲೆ ನಮ್ಮ ಕಣ್ಣುಗಳು ದೃಷ್ಟಿಸಲಿ ಎಂದು ಹೇಳುತ್ತಾರೆ.

ನಹೂಮ 2:1

ಚೂರುಚೂರಾಗಿ ಒಡೆದು ಬಿಡುವವನು ನಿನ್ನ ಎದುರಿಗೆ ಬಂದಿದ್ದಾನೆ; ಆಯುಧ ಗಳನ್ನು ಭದ್ರಪಡಿಸು; ದಾರಿಯನ್ನು ಕಾಯಿ; ನಡುವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಬಲವಾಗಿ ಗಟ್ಟಿ ಮಾಡಿಕೋ.

ಸೆಫನ್ಯ 3:15

ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ.

ಜೆಕರ್ಯ 10:5

ಅವರು ಯುದ್ಧ ದಲ್ಲಿ ಶತ್ರುವನ್ನು ಬೀದಿಗಳ ಕೆಸರಿನಲ್ಲಿ ತುಳಿಯುವ ಶೂರರ ಹಾಗಿರುವರು; ಕರ್ತನು ಅವರ ಸಂಗಡ ಇರುವದರಿಂದ ಯುದ್ಧಮಾಡುವರು; ಕುದುರೆಗಳ ಮೇಲೆ ಸವಾರಿ ಮಾಡುವವರನ್ನು ನಾಚಿಕೆಪಡಿಸುವರು.

ಮಲಾಕಿ 1:5

ನಿಮ್ಮ ಕಣ್ಣುಗಳು ನೋಡುವವು; ಇಸ್ರಾಯೇಲಿನ ಮೇರೆ ಯಿಂದ ಕರ್ತನು ಘನಹೊಂದುವನು ಎಂದು ನೀವು ಹೇಳುವಿರಿ.

ಮಲಾಕಿ 4:3

ದುಷ್ಟರನ್ನು ತುಳಿದುಬಿಡುವಿರಿ; ಯಾಕಂದರೆ ನಾನು ಕಾರ್ಯ ಸಾಧಿಸುವ ದಿನದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಮತ್ತಾಯ 27:43

ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.

ಪ್ರಕಟನೆ 17:1

ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ.

ಪ್ರಕಟನೆ 18:20

ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.

Interlinear

Choose Theme