ಆ ದಿನದಲ್ಲಿ ಅಶ್ಶೂರಿನಿಂದಲೂ ಕೋಟೆಯುಳ್ಳ ಪಟ್ಟಣಗಳಿಂದಲೂ ಕೋಟೆಯಿಂದ ನದಿಯವರೆಗೂ ಸಮುದ್ರದಿಂದ ಸಮುದ್ರದ ವರೆಗೂ ಬೆಟ್ಟದಿಂದ ಬೆಟ್ಟದ ವರೆಗೂ ನಿನ್ನ ಬಳಿಗೆ ಬರುವರು.
Cross references
ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
ಆ ದಿವಸದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ಒಂದು ರಾಜಮಾರ್ಗವಿರುವದು. ಅಶ್ಶೂ ರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರ್ಯಕ್ಕೂ ಹೋಗಿ ಬರುವರು ಮತ್ತು ಐಗುಪ್ತ್ಯರು ಅಶ್ಶೂರ್ಯರೊಂದಿಗೆ (ಕರ್ತನನ್ನು) ಸೇವಿಸುವರು.
ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು
ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಣದಿಂದ ಮತ್ತು ಪಡುವಣದಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.
ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು.
ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
ಆ ದಿನಗಳಲ್ಲಿ ಯೆಹೂದದ ಮನೆ ತನವು ಇಸ್ರಾಯೇಲಿನ ಮನೆಯ ಸಂಗಡ ಹೋಗು ವದು; ಅವರು ಏಕವಾಗಿ ಉತ್ತರ ದೇಶದಿಂದ ನಾನು ನಿಮ್ಮ ತಂದೆಗಳಿಗೆ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ಬರುವರು.
ಆಗ ಕರ್ತನು ನನಗೆ--ಯೆರೆವಿಾಯನೇ, ಏನು ನೋಡುತ್ತೀ ಅಂದನು. ಆಗ ನಾನು ಅಂಜೂರದ ಹಣ್ಣುಗಳನ್ನು ನೋಡುತ್ತೇನೆ; ಒಳ್ಳೇ ಹಣ್ಣುಗಳು ಬಹಳ ಒಳ್ಳೇವು; ಕೆಟ್ಟ ಹಣ್ಣುಗಳು ಬಹಳ ಕೆಟ್ಟವುಗಳು, ತಿನ್ನ ಕೂಡದ ಹಾಗೆ ಅಷ್ಟು ಕೆಟ್ಟವಾಗಿವೆ ಅಂದೆನು.
ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು.
ಆ ದಿನದಲ್ಲಿ ನಾನು ಇಸ್ರಾಯೇಲ್ಯರ ಮನೆ ತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯ ದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ನಾನೇ ಕರ್ತನೆಂದು ಅವರು ತಿಳಿಯುವರು.
ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಇಸ್ರಾಯೇಲನ ಮಕ್ಕಳನ್ನು ಅವರು ಹೋಗಿರುವ ಕಡೆಯಿಂದಲೂ ಅವರನ್ನು ಒಂದುಗೂಡಿಸಿ ಅವರನ್ನು ಅವರ ಸ್ವಂತ ದೇಶಕ್ಕೆ ತರುವೆನು.
ಐಗುಪ್ತದ ಪಕ್ಷಿಯ ಹಾಗೆ ಮತ್ತು ಅಶ್ಯೂರ್ಯರ ದೇಶದ ಪಾರಿವಾಳದ ಹಾಗೆ ಅವರು ನಡುಗುವರು. ನಾನು ಅವರನ್ನು ಅವರ ಮನೆತನಗಳಲ್ಲಿ ಇಡುವೆನು ಎಂದು ಕರ್ತನು ಹೇಳುತ್ತಾನೆ.ಎಫ್ರಾಯಾಮು ಸುಳ್ಳಿನಿಂದ ಮತ್ತು ಇಸ್ರಾ ಯೇಲಿನ ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ, ಆದರೆ ಯೆಹೂದನು ಇನ್ನೂ ದೇವರ ಸಂಗಡ ಆಳುತ್ತಾನೆ; ಮತ್ತು ಪರಿಶುದ್ಧರ ಸಂಗಡ ನಂಬಿಗಸ್ತನಾಗಿದ್ದಾನೆ.