ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
Cross references
ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು.
ಆಗ ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಪ್ರೀತಿಮಾಡಿ ನೀನು ಬದು ಕುವ ಹಾಗೆ ಆತನು ನಿನ್ನ ಹೃದಯವನ್ನೂ ನಿನ್ನ ಸಂತತಿಯ ಹೃದಯವನ್ನೂ ಪರಿಛೇದಿಸುವನು.
ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.
ಆಗ ದಾವೀದನು ಗಾದನಿಗೆ--ನಾನು ಬಹು ಇಕ್ಕಟ್ಟಿನಲ್ಲಿದ್ದೇನೆ. ಈಗ ಕರ್ತನ ಕೈಯಲ್ಲಿ ಬೀಳುವೆವು; ಯಾಕಂದರೆ ಆತನ ಕರುಣೆಯು ಬಹಳವಾಗಿದೆ; ಮನುಷ್ಯರ ಕೈಯಲ್ಲಿ ಬೀಳೆನು ಅಂದನು.
ಈಗ ನಮ್ಮ ದೇವರು, ನಮ್ಮ ಕಣ್ಣುಗಳು ಕಳೆಗೊಳ್ಳುವ ಹಾಗೆಯೂ ನಮ್ಮ ದಾಸತ್ವದಲ್ಲಿ ನಮ್ಮನ್ನು ಸ್ವಲ್ಪ ಉಜ್ಜೀವಿಸುವ ಹಾಗೆಯೂ ನಮಗಾಗಿ ಜನಶೇಷವನ್ನು ಉಳಿಸಿ ತನ್ನ ಪರಿಶುದ್ಧ ಸ್ಥಾನದಲ್ಲಿ ನಮಗೆ ಮೊಳೆಯನ್ನು ಕೊಡುವದಕ್ಕೂ ಸ್ವಲ್ಪ ಹೊತ್ತು ನಮ್ಮ ದೇವರಾಗಿರುವ ಕರ್ತನಿಂದ ನಮಗೆ ದಯವು ದೊರಕಿತು.
ನಿನ್ನ ಕೋಪ ವನ್ನೆಲ್ಲಾ ನೀನು ತೆಗೆದುಬಿಟ್ಟಿದ್ದೀ; ನೀನು ಕೋಪದ ಉರಿಯಿಂದ ತಿರುಗಿಕೊಂಡಿದ್ದೀ.
ಕರ್ತನೇ, ಎಷ್ಟರವರೆಗೆ ಹಿಂತಿರುಗದಿರುವಿ? ನಿನ್ನ ಸೇವಕರ ವಿಷಯದಲ್ಲಿ ಅಂತಃಕರಣವಿರಲಿ.
ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ.
ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಅಕ್ರಮವು ಕ್ಷಮಿಸಲ್ಪಡುವದು.
ಇಗೋ, ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು; ಆದರೆ ನನ್ನ ಆತ್ಮವನ್ನು ನಾಶಕೂಪದಿಂದ ಬಿಡುಗಡೆ ಮಾಡಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.
ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ?
ನೀನು ಈ ದಿನದ ವರೆಗೂ ಐಗುಪ್ತ ದೇಶದಲ್ಲಿಯೂ ಇಸ್ರಾ ಯೇಲಿನಲ್ಲಿಯೂ ಮನುಷ್ಯರೊಳಗೆ ಗುರುತುಗಳನ್ನೂ ಲಕ್ಷಣಗಳನ್ನೂ ಇಟ್ಟಿದ್ದೀ; ಇಂದಿನ ಪ್ರಕಾರ ನಿನಗೆ ಹೆಸರನ್ನು ಉಂಟುಮಾಡಿಕೊಂಡಿದ್ದೀ.
ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ.
ನೀನು ನನ್ನ ಸುತ್ತಿಗೆಯೇ, ನನ್ನ ಯುದ್ಧದ ಆಯುಧಗಳೇ, ನಿನ್ನಿಂದ ಜನಾಂಗಗಳನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಾಜ್ಯಗಳನ್ನು ನಾಶಮಾಡುತ್ತೇನೆ;
ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ.
ಆತನು ದುಃಖಪಡಿಸಿದರೂ ತನ್ನ ಕೃಪಾತಿಶಯದಿಂದ ಕನಿಕರಿಸುವನು.
ಅವರಿಗೆ ಒಂದು ಹೃದಯವನ್ನು ಕೊಡು ವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು; ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
ನಾನು ಅವರ ಹಿಂಜರಿಯುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಯಾಕಂದರೆ ನನ್ನ ಕೋಪವು ಅವನ ಕಡೆಯಿಂದ ತಿರುಗಿಕೊಂಡಿದೆ.
ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ.
ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮವುಂಟೆಂದು ನಾನು ನೋಡುತ್ತೇನೆ; ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಕಾದಾಡಿ ನನ್ನನ್ನು ಸೆರೆ ಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದ್ದಾಗಿದೆ.
ಜೀವವನ್ನುಂಟು ಮಾಡುವ ಆತ್ಮನ ನಿಯಮವು ಕ್ರಿಸ್ತ ಯೇಸುವಿನಲ್ಲಿ ನನ್ನನ್ನು ಪಾಪ ಮರಣಗಳ ನಿಯಮ ದಿಂದ ಬಿಡಿಸಿತು.
ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.
ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?
ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.