ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
Cross references
ಇದಲ್ಲದೆ ನನ್ನ ತಂದೆಯೇ, ನೋಡು; ಹೌದು, ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ಅಂಚನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ ನಿನ್ನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ನನ್ನಲ್ಲಿ ಕೆಟ್ಟತನವು ದ್ರೋಹವು ಇಲ್ಲವೆಂದು ನಾನು ನಿನಗೆ ವಿರೋಧವಾಗಿ ಪಾಪಮಾಡ ಲಿಲ್ಲವೆಂದೂ ತಿಳಿದುಕೊಂಡು ನೋಡು. ಹೀಗಿದ್ದರೂ ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.
ಆದದರಿಂದ ಕರ್ತನ ಮುಖದ ಮುಂದೆ ನನ್ನ ರಕ್ತವು ನೆಲದ ಮೇಲೆ ಬೀಳದಿರಲಿ. ಯಾಕಂದರೆ ಒಬ್ಬನು ಬೆಟ್ಟಗಳಲ್ಲಿ ಕೌಜುಗವನ್ನು ಬೇಟೆಯಾಡುವಂತೆ ಇಸ್ರಾಯೇಲಿನ ಅರಸನು ಒಂದು ಕೀಟವನ್ನು ಹುಡು ಕಲು ಹೊರಟನು ಎಂಬದೇ.
ಗವಿಯಲ್ಲಿರುವ ಸಿಂಹದ ಹಾಗೆ ಮರೆಯಲ್ಲಿ ಹೊಂಚು ಹಾಕುತ್ತಾನೆ; ಬಡವನನ್ನು ಹಿಡಿ ಯುವದಕ್ಕೆ ಹೊಂಚು ಹಾಕುತ್ತಾನೆ; ಬಡವನನ್ನು ತನ್ನ ಬಲೆಯಲ್ಲಿ ಎಳೆದು ಹಿಡಿಯುತ್ತಾನೆ.
ಕರ್ತನೇ, ಸಹಾಯಮಾಡು; ಯಾಕಂದರೆ ಭಕ್ತನು ಮುಗಿದು ಹೋಗುತ್ತಾನೆ; ನಂಬಿಗಸ್ತರು ಮನುಷ್ಯನ ಮಕ್ಕಳೊಳಗಿಂದ ಇಲ್ಲದೆ ಹೋಗುತ್ತಾರೆ.
ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.
ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
ಅವರು ನನ್ನ ಹೆಜ್ಜೆಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ; ನನ್ನ ಮುಂದೆ ಕುಣಿಯನ್ನು ಅಗೆದು ಅದರ ನಡುವೆ ತಾವೇ ಬಿದ್ದಿದ್ದಾರೆ. ಸೆಲಾ.
ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ.
ದುಷ್ಟರ ಮಾತುಗಳು ರಕ್ತಕ್ಕಾಗಿ ಹೊಂಚು ಹಾಕುತ್ತವೆ; ಯಥಾರ್ಥವಂತರ ಬಾಯಿಯು ಅವರನ್ನು ಬಿಡಿಸುವದು.
ಪ್ರತಿಯೊಬ್ಬನು ಇನ್ನೊಬ್ಬ ನಿಂದಲೂ ಪ್ರತಿಯೊಬ್ಬನು ನೆರೆಯವನಿಂದಲೂ ಜನರು ಹಿಂಸಿಸಲ್ಪಡುವರು: ಹುಡುಗನು ವೃದ್ಧನ ವಿರೋಧವಾಗಿಯೂ ನೀಚನು ಘನವಂತನ ವಿರೋಧ ವಾಗಿಯೂ ಸೊಕ್ಕಿನಿಂದ ವರ್ತಿಸುವರು.
ನೀತಿವಂತನು ನಾಶವಾಗುವನು, ಅದನ್ನು ಯಾವ ಮನುಷ್ಯನು ಮನಸ್ಸಿಗೆ ತಾರನು. ಕರುಣೆಯುಳ್ಳ ಮನುಷ್ಯರು ತೆಗೆದುಹಾಕಲ್ಪಡುವರು, ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾಗು ತ್ತಾನೆಂಬದನ್ನು ಯಾರೂ ಯೋಚಿಸರು.
ಅವರ ಕಾಲುಗಳು ಕೇಡಿಗೆ ಓಡುತ್ತವೆ; ಅಪರಾಧವಿಲ್ಲದ ರಕ್ತ ವನ್ನು ಚೆಲ್ಲುವದಕ್ಕೆ ತ್ವರೆಪಡುತ್ತವೆ. ಅವರ ಆಲೋ ಚನೆ ಗಳು ದುಷ್ಟತನದ ಆಲೋಚನೆಗಳೇ; ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿ ಅವೆ.
ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು.
ನನ್ನ ಜನರ ಕುಮಾರಿಯೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು; ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ ಬಹುಕಠಿಣವಾದ ಗೋಳಾಟವನ್ನು ಮಾಡು; ಸೂರೆ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.
ಆದರೆ ನಾನು ನಿನ್ನನ್ನು ಹಿಂಬಾಲಿಸುವ ಪಾಲಕ ನಾಗಲು ಹಿಂಜರಿಯಲಿಲ್ಲ; ದುರ್ದಿನವನ್ನು ಅಪೇಕ್ಷಿಸ ಲಿಲ್ಲವೆಂದು ನೀನು ಬಲ್ಲೆ; ನನ್ನ ತುಟಿಗಳಿಂದ ಹೊರ ಟದ್ದು ನಿನ್ನ ಸನ್ನಿಧಿಯಲ್ಲಿ ಸರಿಯಾಗಿತ್ತು.
ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ, ಅವರು ನಮ್ಮ ಹೆಜ್ಜೆಗಳನ್ನೇ ಬೇಟೆಯಾಡುತ್ತಾರೆ; ನಮ್ಮ ಅಂತ್ಯವು ಸವಿಾಪಿಸಿತು, ನಮ್ಮ ದಿನಗಳು ತುಂಬಿದವು; ನಮ್ಮ ಅಂತ್ಯವು ಬಂದಿತು.
ಕಳ್ಳರ ಗುಂಪು ಮನುಷ್ಯನಿಗೋಸ್ಕರ ಕಾಯುವ ಪ್ರಕಾರ ಯಾಜಕರ ಗುಂಪು ಒಪ್ಪಿಗೆಯಿಂದ ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ.
ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅಕ್ರಮದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ.
ಅವರನ್ನೆಲ್ಲಾ ಗಾಳದಿಂದ ಎತ್ತಿ ತಮ್ಮ ಬಲೆಯಿಂದ ಅವರನ್ನು ಹಿಡಿದು ತಮ್ಮ ಜಾಲದಿಂದ ಅವರನ್ನು ಕೂಡಿಸುತ್ತಾರೆ; ಆದದರಿಂದ ಸಂತೋಷಿಸಿ ಉಲ್ಲಾಸ ಪಡುತ್ತಾರೆ.
ಅದೇ ಪ್ರಕಾರ ಇವೆಲ್ಲವುಗಳು ನಿಜವೆಂದು ಯೆಹೂ ದ್ಯರು ಸಹ ಸಮ್ಮತಿಸಿದರು ಅಂದನು.
ಬರೆದಿರುವ ಪ್ರಕಾರ--ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ;