ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
Cross references
ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
ಅವನು ಹೇಳಿದ್ದೇನಂದರೆ--ನಾನು ನನ್ನ ಮೇಲೆ ನಾನೇ ಆಣೆಯಿಟ್ಟು ಕೊಂಡಿದ್ದೇನೆ ಎಂದು ಕರ್ತನು ಹೇಳು ತ್ತಾನೆ. ಯಾಕಂದರೆ ನೀನು ಈ ಕಾರ್ಯವನ್ನು ಮಾಡಿ ನಿನ್ನ ಒಬ್ಬನೇ ಮಗನನ್ನು ನನಗೆ ಕೊಡುವದಕ್ಕೆ ಹಿಂತೆಗೆಯದೆ ಇದ್ದದರಿಂದ
ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು.
ಕರ್ತನು ನಿಮ್ಮನ್ನು ಪ್ರೀತಿಸಿದ್ದರಿಂದಲೂ ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ಕಾಪಾಡುವದರಿಂದಲೂ ಕರ್ತನು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿನ್ನನ್ನು ದಾಸತ್ವದ ಮನೆಯಿಂದಲೂ ಐಗುಪ್ತದ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದನು.
ತನ್ನ ಒಡಂಬಡಿಕೆಯನ್ನೂ ಸಾವಿರ ತಲಾಂತರಗ ಳಿಗೆ ಆಜ್ಞಾಪಿಸಿದ ತನ್ನ ಮಾತನ್ನೂ
ಆಗ ಪ್ರವಾದಿಯಾದ ಯೆರೆವಿಾಯನು ಈ ವಾಕ್ಯಗಳ ನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದ ಅರಸನಾದ ಚಿದ್ಕೀಯನಿಗೆ ಹೇಳಿದನು.
ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ.
ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
ಹೀಗೆ ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು.
ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು--