ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು.
Cross references
ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ
ಸಮುವೇಲನು ಒಂದನ್ನೂ ಮರೆಮಾಡದೆ ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದನು. ಅದಕ್ಕವನು--ಅದು ಕರ್ತನದೇ ಆಗಿದೆ. ಆತನು ಸರಿತೋರುವದನ್ನು ಮಾಡಲಿ ಅಂದನು.
ಕರ್ತನು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ ನನ್ನ ವ್ಯಾಜ್ಯವನ್ನು ನೋಡಿ ವ್ಯಾಜ್ಯವಾಡಿ ನನ್ನನ್ನು ನಿನ್ನ ಕೈಗೆ ತಪ್ಪಿಸಿಬಿಡಲಿ ಅಂದನು.
ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ ತನ್ನ ಸೇವಕ ನನ್ನು ಕೇಡುಮಾಡಗೊಡದ ಹಾಗೆ ಆಟಂಕಿಸಿದ ಕರ್ತನು ಸ್ತುತಿ ಹೊಂದಲಿ; ಯಾಕಂದರೆ ಕರ್ತನು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದನು ಅಂದನು. ದಾವೀದನು ಅಬೀಗೈಲ ಳನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ಅವಳ ಸಂಗಡ ಮಾತನಾಡ ಕಳುಹಿಸಿದನು.
ಇದಲ್ಲದೆ ಇನ್ನೂ ದಾವೀದನು--ಕರ್ತನ ಜೀವ ದಾಣೆ, ಕರ್ತನು ಅವನನ್ನು ಹೊಡೆಯುವನು; ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು; ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು.
ದಾವೀದನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ--ಇಗೋ, ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ ಎಷ್ಟೋ ಅಧಿಕವಾಗಿ ಈ ಬೆನ್ಯಾವಿಾನ್ಯನಾದವನು ಹೀಗೆ ಮಾಡುವದು ಯಾವ ದೊಡ್ಡಮಾತು? ಅವ ನನ್ನು ಬಿಟ್ಟುಬಿಡಿರಿ; ಅವನು ದೂಷಿಸಲಿ; ಯಾಕಂದರೆ ಕರ್ತನು ಅವನಿಗೆ ಹಾಗೆಯೇ ಹೇಳಿದ್ದಾನೆ.
ಆಗ ಕರ್ತನ ದೂತನು ಯೆಬೂಸಿ ಯನಾದ ಅರೌನನು ತುಳಿಸುವ ಕಣದ ಬಳಿಯಲ್ಲಿ ಇದ್ದನು. ದಾವೀದನು ಜನಸಂಹಾರ ದೂತನನ್ನು ನೋಡಿದಾಗ ಅವನು ಕರ್ತನಿಗೆ--ಇಗೋ, ನಾನೇ ಪಾಪಮಾಡಿದೆನು; ದುಷ್ಟತ್ವದಿಂದ ಮಾಡಿದವನು ನಾನೇ; ಆದರೆ ಈ ಕುರಿಗಳಂತಿರುವ ಜನರು ಮಾಡಿ ದ್ದೇನು? ನಿನ್ನ ಕೈ ನನಗೆ ವಿರೋಧವಾಗಿಯೂ ನನ್ನ ತಂದೆಯ ಮನೆಗೆ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ ಅಂದನು.
ಆದರೆ ನಾನು ಹಿಡಿಯುವ ಮಾರ್ಗವನ್ನು ಆತನು ತಿಳಿದಿದ್ದಾನೆ, ನನ್ನನ್ನು ಶೋಧಿಸಿದಾಗ ನಾನು ಬಂಗಾರದ ಹಾಗೆ ಹೊರಗೆ ಬರುವೆನು.
ನಿಶ್ಚಯವಾಗಿ ದೇವರಿಗೆ ಹೇಳತಕ್ಕದ್ದೇನಂದರೆ--ನಾನು ಶಿಕ್ಷೆಯನ್ನು ತಾಳಿದ್ದೇನೆ, ಇನ್ನು ಮೇಲೆ ಕೆಟ್ಟತನ ಮಾಡುವದಿಲ್ಲ.
ನೀನು ಅವನನ್ನು ದೃಷ್ಟಿಸುವ ದಿಲ್ಲವೆಂದು ನೀನು ಹೇಳಿದರೂ ನ್ಯಾಯತೀರ್ಪು ಅವನ ಮುಂದೆ ಇರುವದು; ಆದದರಿಂದ ನೀನು ಆತನಲ್ಲಿ ಭರವಸವಿಡು.
ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.
ನಿನ್ನ ನೀತಿಯನ್ನು ಬೆಳಕಿನ ಹಾಗೆಯೂ ನಿನ್ನ ನ್ಯಾಯಗಳನ್ನು ಮಧ್ಯಾಹ್ನದ ಹಾಗೆಯೂ ಆತನು ಹೊರಗೆ ಬರ ಮಾಡುವನು.
ಓ ದೇವರೇ, ನನಗೆ ನ್ಯಾಯತೀರಿಸು. ಭಕ್ತಿ ಇಲ್ಲದ ಜನಾಂಗದ ಸಂಗಡ ನನ್ನ ನ್ಯಾಯವನ್ನು ವಾದಿಸು; ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸು.
ನನ್ನ ವ್ಯಾಜ್ಯವನ್ನು ನಡಿಸಿ ನನ್ನನ್ನು ಬಿಡುಗಡೆ ಮಾಡು; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀವಿಸು.
ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ ನಿನ್ನ ಕರ್ತನಾಗಿರುವ ಕರ್ತನೂ ಹೀಗನ್ನು ತ್ತಾನೆ--ಇಗೋ, ನಾನು ನಿನ್ನ ಕೈಯೊಳಗಿಂದ ತತ್ತರಿಸು ವಂಥ ಪಾತ್ರೆಯನ್ನೂ ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ; ಇನ್ನು ಮೇಲೆ ನೀನು ಅದನ್ನು ತಿರಿಗಿ ಕುಡಿಯುವದೇ ಇಲ್ಲ.ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
ಅವರನ್ನು ಮೊರದಿಂದ ದೇಶದ ಬಾಗಿಲುಗಳಲ್ಲಿ ತೂರುವೆನು; ನನ್ನ ಜನರನ್ನು ಮಕ್ಕಳಿಲ್ಲದವರಾಗ ಮಾಡಿ ನಾಶಮಾಡುವೆನು. ಅವರು ತಮ್ಮ ಮಾರ್ಗಗಳನ್ನು ಬಿಟ್ಟು ಹಿಂತಿರುಗದೆ ಇದ್ದದರಿಂದ
ಮನುಷ್ಯ ರೆಲ್ಲರೂ ತಮ್ಮ ತಿಳುವಳಿಕೆಯಿಂದ ಮೂಢರಾಗಿದ್ದಾರೆ; ಎರಕ ಹೊಯ್ಯುವವರೆಲ್ಲರೂ ವಿಗ್ರಹದಿಂದ ನಾಚಿಕೆ ಪಡುತ್ತಾರೆ; ಅವರ ಎರಕದ ಬೊಂಬೆಗಳು ಸುಳ್ಳೇ; ಅವುಗಳಲ್ಲಿ ಉಸಿರು ಇಲ್ಲ.
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬೆಲಿನ ಮಗಳು ಇದ್ದಾಳೆ; ಇನ್ನು ಸ್ವಲ್ಪ ಹೊತ್ತಾದ ಮೇಲೆ ಅದಕ್ಕೆ ಸುಗ್ಗೀಕಾಲ ಬರುವದು.
ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು.
ಕರ್ತನು ನೀತಿವಂತನು, ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿಬಿದ್ದಿದ್ದೇನೆ; ಎಲ್ಲಾ ಜನರೇ, ಕೇಳಿರಿ, ನಾನು ನಿಮ್ಮನ್ನು ಕೇಳಿ ಕೊಳ್ಳುತ್ತೇನೆ; ನನ್ನ ದುಃಖವನ್ನು ನೋಡಿರಿ, ನನ್ನ ಕನ್ಯೆಯರೂ ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.
ಬದುಕುವ ಮನುಷ್ಯನು ತನ್ನ ಪಾಪಗಳ ಶಿಕ್ಷೆಗಾಗಿ ಗುಣು ಗುಟ್ಟುವದೇಕೆ?
ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ;
ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
ನೀವು ಯಾವದಕ್ಕಾಗಿ ಶ್ರಮೆಪಡುತ್ತೀರೋ ದೇವರ ಆ ರಾಜ್ಯಕ್ಕೆ ನೀವು ಯೋಗ್ಯರೆಂದು ಎಣಿಸಲ್ಪಡುವಂತೆ ದೇವರ ನೀತಿಯುಳ್ಳ ತೀರ್ಪಿಗೆ ಅದು ಸ್ಪಷ್ಟವಾದ ನಿದರ್ಶನವಾಗಿದೆ.
ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು.
ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.
ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.