ಕರ್ತನು ಹೀಗೆ ಹೇಳು ತ್ತಾನೆ--ಅವರು ಸುಖವುಳ್ಳವರಾಗಿಯೂ ಬಹು ಮಂದಿ ಯಾಗಿಯೂ ಇದ್ದರೂ ಆತನು ಹಾದುಹೋಗುವಾಗ ಹೀಗೆ ಕಡಿಯಲ್ಪಡುವರು; ನಾನು ನಿನ್ನನ್ನು ಕಷ್ಟಪಡಿಸಿ ದಾಗ್ಯೂ ಇನ್ನು ಮೇಲೆ ಕಷ್ಟಪಡಿಸೆನು.
Cross references
ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.
ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.
ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಆರಾಧಿಸುತ್ತಿರುವಾಗ ಅವನ ಮಕ್ಕಳಾದ ಅದ್ರಮ್ಮೆಲೆಕನೂ ಸರೆಚೆರನೂ ಅವನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗನಾದ ಏಸರ್ಹದ್ದೋನನು ಅವನಿಗೆ ಬದಲಾಗಿ ಅರಸನಾದನು.
ಅದೇ ದಿನದಲ್ಲಿ ಕರ್ತನು ನದಿಯ ಆಚೆಗಿರುವ ಅಶ್ಯೂರದ ರಾಜನೆಂಬವನಿಂದ ಬಾಡಿಗೆ ಕ್ಷೌರದ ಕತ್ತಿ ಯಿಂದ (ಯೆಹೂದದ) ತಲೆಯನ್ನು ಕಾಲುಕೂದ ಲನ್ನು ಬೋಳಿಸುವನು ಗಡ್ಡವನ್ನು ತೆಗೆದುಬಿಡುವನು.
ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.
ಆ ದಿನ ದಲ್ಲಿ ಅವನು ನೋಬಿನಲ್ಲಿ ಇಳುಕೊಂಡವನಂತೆ ಇದ್ದಾಗ್ಯೂ ಚೀಯೋನ್ ಕುಮಾರ್ತೆಯ ಪರ್ವತಕ್ಕೂ ಯೆರೂಸಲೇಮಿನ ಗುಡ್ಡಕ್ಕೂ ವಿರೋಧವಾಗಿ ತನ್ನ ಕೈಯನ್ನು ಅಲ್ಲಾಡಿಸುವನು.
ಸೈನ್ಯಗಳ ಕರ್ತನು ಆಣೆಯಿಟ್ಟು ಹೇಳುವದೇನ ಂದರೆ--ನಾನು ನೆನಸಿದ ಪ್ರಕಾರವೇ ನೆರವೇರುವದು; ನಾನು ಉದ್ದೇಶಿಸಿದ್ದೇ ನಿಲ್ಲುವದು.
ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳು ವದೇ ಇಲ್ಲ. ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವನು. ಆತನು ಅದನ್ನು ಕೇಳಿದಾಗಲೇ ಸದುತ್ತರವನ್ನು ದಯಪಾಲಿಸು ವನು.
ಆತನ ಶ್ವಾಸವು ತುಂಬಿ ತುಳುಕಿ ಕಂಠದ ವರೆಗೂ ಏರುವ ತೊರೆಯಂತಿದೆ; ಜನಾಂಗಗಳನ್ನು ಏನೂ ಉಳಿಸದ ಜಲ್ಲಡಿಯಿಂದ ಜಾಲಿಸುವದಕ್ಕೆ ಬರು ತ್ತಾನೆ; ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆ ಗಳಲ್ಲಿರುವದು.
ಆಗ ಅಶ್ಶೂರ್ಯನು ಕತ್ತಿಯಿಂದ ಬೀಳುವನು, ಬಲಿಷ್ಟ ನಿಂದಲ್ಲ; ಅವನು ನುಂಗಲ್ಪಡುವನು, ಹೀನನ ಕತ್ತಿ ಯಿಂದಲ್ಲ; ಅವನು ಕತ್ತಿಯ ಕಡೆಯಿಂದ ಓಡುವನು, ಅವನ ಯೌವನಸ್ಥರು ಸೋಲಿಸಲ್ಪಡುವರು.ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.
ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ ನಿನ್ನ ಕರ್ತನಾಗಿರುವ ಕರ್ತನೂ ಹೀಗನ್ನು ತ್ತಾನೆ--ಇಗೋ, ನಾನು ನಿನ್ನ ಕೈಯೊಳಗಿಂದ ತತ್ತರಿಸು ವಂಥ ಪಾತ್ರೆಯನ್ನೂ ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ; ಇನ್ನು ಮೇಲೆ ನೀನು ಅದನ್ನು ತಿರಿಗಿ ಕುಡಿಯುವದೇ ಇಲ್ಲ.ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ.
ಕರ್ತನು ಎಂದೆಂದಿಗೂ ತಳ್ಳಿಬಿಡುವದಿಲ್ಲ;
ಆಮೇಲೆ ಅವನ ಮಕ್ಕಳು ಸನ್ನದ್ಧರಾಗಿ ದೊಡ್ಡ ಸೈನ್ಯಗಳ ಸಮೂಹವನ್ನು ಕೂಡಿಸುವರು; ಅವರಲ್ಲಿ ಒಬ್ಬನು ನಿಶ್ಚಯವಾಗಿ ಬಂದು ಅದರಲ್ಲಿ ಪ್ರಳಯದಂತೆ ಹಾದುಹೋಗುವನು. ಅವನು ಮತ್ತೆ ಸನ್ನದ್ಧನಾಗಿ ಕೋಟೆಯನ್ನು ಮುತ್ತುವನು.
ಹೌದು, ಕರ್ತನು ಉತ್ತರ ಕೊಟ್ಟು ತನ್ನ ಜನರಿಗೆ ಹೇಳುವದೇ ನಂದರೆ--ಇಗೋ, ನಾನು ನಿಮಗೆ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸಾಕಾಗುವಷ್ಟು ಕಳು ಹಿಸಿ ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತ ರಾಗಿ ಇಡುವದಿಲ್ಲ.
ಇಗೋ, ಬೆಟ್ಟಗಳ ಮೇಲೆ ಶುಭಸಮಾಚಾರವನ್ನು ತಂದು ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಪ್ರಮಾಣ ಗಳನ್ನು ಸಲ್ಲಿಸು; ಯಾಕಂದರೆ ಇನ್ನು ಮೇಲೆ ದುಷ್ಟನು ನಿನ್ನನ್ನು ಹಾದುಹೋಗನು; ಅವನು ಸಂಪೂರ್ಣವಾಗಿ ಕಡಿದು ಬಿಡಲ್ಪಟ್ಟಿದ್ದಾನೆ.
ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.