ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
Cross references
ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
ರೋಷವುಳ್ಳವನೆಂದು ಹೆಸರುಳ್ಳ ಕರ್ತನು ರೋಷ ವುಳ್ಳ ದೇವರಾಗಿರುವದರಿಂದ ನೀನು ಬೇರೆ ದೇವರು ಗಳನ್ನು ಆರಾಧಿಸಬಾರದು.
ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.
ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನಾದ ಯಾಜಕ ನಾಗಿರುವ ಫೀನೆಹಾಸನು ಇಸ್ರಾಯೇಲಿನ ಮಕ್ಕಳಲ್ಲಿ ನನಗೋಸ್ಕರ ಆಸಕ್ತನಾಗಿದ್ದು ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿ ಬಿಟ್ಟಿದ್ದಾನೆ.
ನಿನ್ನ ದೇವರಾದ ಕರ್ತನು ದಹಿಸುವ ಅಗ್ನಿಯೂ ರೋಷವುಳ್ಳ ದೇವರೂ ಆಗಿದ್ದಾನೆ.
ತನ್ನನ್ನು ಹಗೆ ಮಾಡುವವರಿಗೆ ಮುಖಾಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸಿ ಅವರನ್ನು ನಾಶಮಾಡುತ್ತಾನೆ; ಆತನು ತನ್ನನ್ನು ಹಗೆಮಾಡುವವರಿಗೆ ತಡಮಾಡದೆ ಮುಖಾ ಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ ಎಂದು ತಿಳಿದುಕೋ.
ಅದು ನನ್ನ ಸಂಗಡ ಬಚ್ಚಿಡಲ್ಪಟ್ಟದ್ದಾಗಿದ್ದು ನನ್ನ ಉಗ್ರಾಣಗಳಲ್ಲಿ ಮುದ್ರೆ ಹಾಕಲ್ಪಟ್ಟದ್ದಲ್ಲವೋ?
ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು.
ಅದಕ್ಕೆ ಯೆಹೋ ಶುವನು ಜನರಿಗೆ--ನೀವು ಕರ್ತನನ್ನು ಸೇವಿಸಲಾರಿರಿ; ಯಾಕಂದರೆ ಆತನು ಪರಿಶುದ್ಧನಾದ ದೇವರು, ರೋಷ ವುಳ್ಳ ದೇವರು; ಆತನು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸನು.
ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು.
ಓ ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ಓ ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ.
ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು.
ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಓ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.
ನಿನ್ನ ಕುಮಾರರು ಮೂರ್ಛೆ ಹೋಗಿ, ಬಲೆಗೆ ಸಿಕ್ಕಿದ ಕಾಡು ಗೂಳಿಗಳಂತೆ ಎಲ್ಲಾ ಬೀದಿಗಳು ಕೂಡುವ ಚೌಕದಲ್ಲಿ ಅವರು ಬಿದ್ದಿದ್ದಾರೆ; ಅವರು ಕರ್ತನ ಉಗ್ರದಿಂದಲೂ ನಿನ್ನ ದೇವರ ಗದರಿಕೆ ಯಿಂದಲೂ ತುಂಬಿದ್ದಾರೆ.
ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.
ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು.
ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು.
ಆತನು ಎಂದೆಂದಿಗೂ ತನ್ನ ಕೋಪವನ್ನು ಕಾದಿರಿಸಿ ಕೊಂಡಿರುವನೋ? ಇಗೋ, ನೀನು ಅಪೇಕ್ಷಿಸಿದ ಹಾಗೆ ಮಾತನಾಡಿದ್ದೀ ಮತ್ತು ಕೆಟ್ಟವುಗಳನ್ನು ನಡಿಸಿದ್ದೀ.
ಕರ್ತನಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ, ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸ ಕೂಡದ ಹಾಗೆ ಉರಿಯುವದು.
ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
ನನ್ನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನಂದರೆ--ಇಗೋ, ನಿಮ್ಮ ಸಹಾಯಕ್ಕೆ ಹೊರಟ ಫರೋಹನ ಸೈನ್ಯವು ಅದರ ಸ್ವದೇಶವಾದ ಐಗುಪ್ತಕ್ಕೆ ಹಿಂತಿರುಗುವದು.
ಆತನು ತನ್ನ ಶಕ್ತಿಯಿಂದ ಭೂಮಿಯನ್ನು ಉಂಟುಮಾಡಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾನೆ.
ಕರ್ತನು ತನ್ನ ರೋಷವನ್ನು ತೀರಿಸಿ ದ್ದಾನೆ; ಆತನು ತನ್ನ ಉಗ್ರವಾದ ಕೋಪವನ್ನು ಸುರಿದಿದ್ದಾನೆ; ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.
ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ಉರಿಯನ್ನು ಅವರ ಮೇಲೆ ಶಾಂತಪಡಿಸಿ, ಸಮಾಧಾನ ಹೊಂದು ವೆನು; ಹೀಗೆ ನಾನು ನನ್ನ ಉರಿಯನ್ನು ಅವರ ಮೇಲೆ ತೀರಿಸಿದ ತರುವಾಯ ಕರ್ತನಾದ ನಾನು ನನ್ನ ಉದ್ದೇಶ ಪೂರ್ವಕವಾಗಿ ಮಾಡಿದ್ದೇನೆಂದು ಅವರಿಗೆ ಗೊತ್ತಾಗು ವದು.
ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು; ಹತ್ತಿರದಲ್ಲಿರುವವನು ಕತ್ತಿಯಿಂದ ಬೀಳುವನು; ಉಳಿದು ಮುತ್ತಿಗೆಯಲ್ಲಿರುವವನು ಬರದಿಂದ ಸಾಯುವನು; ಹೀಗೆ ನಾನು ಅವರ ಮೇಲೆ ನನ್ನ ಉಗ್ರತೆಯನ್ನು ತೀರಿಸಿಕೊಳ್ಳುವೆನು.
ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
ಆದದರಿಂದ ಇಸ್ರಾಯೇಲ್ ದೇಶಕ್ಕೆ ಸಂಬಂಧಪಟ್ಟ ಹಾಗೆ ಪ್ರವಾದಿಸು; ಪರ್ವತ ಗಳಿಗೂ ಬೆಟ್ಟಗಳಿಗೂ ಹಳ್ಳಕೊಳ್ಳಗಳಿಗೂ ಹೇಳಬೇಕಾ ದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ಅನ್ಯಜನಾಂಗಗಳ ಅವಮಾನವನ್ನು ನೀನು ಹೊತ್ತದ್ದರಿಂದ ನಾನು ರೋಷದಿಂದಲೂ ರೌದ್ರ ದಿಂದಲೂ ಮಾತನಾಡಿದ್ದೇನೆ.
ಆ ದಿನದಲ್ಲಿ ಗೋಗನು ಇಸ್ರಾಯೇಲ್ ದೇಶಕ್ಕೆ ವಿರೋಧವಾಗಿ ಬರುವಾಗ ರೋಷವು ನನ್ನ ಮುಖದ ಮೇಲೆ ಬರುವದೆಂದು ದೇವರಾದ ಕರ್ತನು ಹೇಳುತ್ತಾನೆ.
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು.
ಆಗ ಕರ್ತನು ತನ್ನ ದೇಶಕ್ಕೋಸ್ಕರ ರೋಷ ಗೊಂಡು ತನ್ನ ಜನರನ್ನು ಕನಿಕರಿಸುವನು.
ಇದಲ್ಲದೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿ ತೀರಿಸುವೆನು.
ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
ನನ್ನ ಸಂಗಡ ಮಾತ ನಾಡಿದ ದೂತನು ನನಗೆ ಹೇಳಿದ್ದೇನಂದರೆ--ಕೂಗಿ ಹೇಳು; ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾನು ಯೆರೂಸಲೇಮಿಗಾಗಿಯೂ ಚೀಯೋನಿ ಗಾಗಿಯೂ ಬಹುರೋಷವುಳ್ಳವನಾಗಿದ್ದೇನೆ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಚೀಯೋನಿನ ವಿಷಯವಾಗಿ ಅತಿ ರೋಷಗೊಂಡಿದ್ದೆನು; ಅತಿ ಉಗ್ರದಿಂದ ಅದರ ವಿಷಯದಲ್ಲಿ ರೋಷವುಳ್ಳವನಾಗಿದ್ದೆನು.
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ.
ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ.