ಕರ್ತನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಬಲವಾದ ಕೋಟೆಯಾಗಿದ್ದಾನೆ; ತನ್ನಲ್ಲಿ ನಂಬಿಕೆಯಿಡು ವವರನ್ನು ಬಲ್ಲನು.
Cross references
ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು.
ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು;ಆತನ ಕೃಪೆಯು ಯುಗಯುಗಕ್ಕೂ ಅವೆ.
ಹೀಗೆ ಆ ಕಾಲದಲ್ಲಿ ಇಸ್ರಾಯೇಲಿನ ಮಕ್ಕಳು ತಗ್ಗಿಸಲ್ಪಟ್ಟರು. ಯೆಹೂದನ ಮಕ್ಕಳು ತಮ್ಮ ಪಿತೃಗಳ ದೇವರಾದ ಕರ್ತನ ಮೇಲೆ ಆತುಕೊಂಡಿದ್ದರಿಂದ ಜಯಹೊಂದಿದರು.
ಕೂಷಿಯರೂ ಲೂಬ್ಯರೂ ಮಹಾಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ ರಾಹುತರೂ ಇದ್ದರಲ್ಲವೇ? ಆಗ ನೀನು ಕರ್ತನ ಮೇಲೆ ಆತುಕೊಂಡದ್ದರಿಂದ ಆತನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದನು.
ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು.
ನಮ್ಮ ದೇವರಾದ ಕರ್ತನು ಅಶ್ಶೂರಿನ ಅರಸನ ಕೈಯಿಂದ ನಮ್ಮನ್ನು ಬಿಡಿಸುವನೆಂದು ಹಿಜ್ಕೀಯನು ಹೇಳಿ ಹಸಿವೆ ಯಿಂದಲೂ ದಾಹದಿಂದಲೂ ಸಾಯುವದಕ್ಕೆ ನಿಮ್ಮನ್ನು ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?
ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.
ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು.
ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.
ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಓ ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ.
ನನ್ನ ಬಲವಾಗಿರುವ ಓ ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆ.
ಕರ್ತನು ಇಕ್ಕಟ್ಟಿನ ದಿವಸದಲ್ಲಿ ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ಹೆಸರು ನಿನ್ನನ್ನು ಕಾಪಾಡಲಿ.
ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು.
ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು.
ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ
ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
ಆದರೆ ನಾನು ನಿನ್ನ ಬಲದ ವಿಷಯವಾಗಿ ಹಾಡುವೆನು; ಹೌದು, ಹೊತ್ತಾರೆ ನಿನ್ನ ಕೃಪೆಗಾಗಿ ಉತ್ಸಾಹಪಡುವೆನು; ನೀನು ನನಗೆ ದುರ್ಗ ವಾಗಿಯೂ ನನ್ನ ಇಕ್ಕಟ್ಟಿನ ದಿವಸದಲ್ಲಿ ಆಶ್ರಯ ವಾಗಿಯೂ ಇದ್ದೀ.ಓ ನನ್ನ ಬಲವೇ, ನಿನ್ನನ್ನು ಕೀರ್ತಿಸುವೆನು; ದೇವರು ನನ್ನ ದುರ್ಗವೂ ಕರುಣೆ ಯುಳ್ಳ ನನ್ನ ದೇವರೂ ಆಗಿದ್ದಾನೆ.
ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ. ನಾನು ಕದಲೆನು.
ನೀನು ಯಾವಾಗಲೂ ನಾನು ಆಶ್ರಯಿಸಿಕೊಳ್ಳುವ ಬಲಸ್ಥಾನವಾಗಿರು. ನನ್ನನ್ನು ರಕ್ಷಿಸುವದಕ್ಕೆ ಆಜ್ಞಾಪಿಸಿದ್ದೀ, ನನ್ನ ಬಂಡೆಯೂ ಕೋಟೆಯೂ ನೀನೇ.
ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
ನನ್ನ ಇಕ್ಕಟ್ಟಿನ ದಿವಸದಲ್ಲಿ ನಿನ್ನನ್ನು ಕರೆಯುವೆನು; ನೀನು ನನಗೆ ಉತ್ತರ ಕೊಡುವಿ.
ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
ಕರ್ತನನ್ನು ಕೊಂಡಾಡಿರಿ, ಆತನು ಒಳ್ಳೆಯವನು; ಆತನ ಕರುಣೆಯು ಎಂದೆಂದಿಗೂ ಅದೆ.
ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವನ್ನು, ಕಲಿಸಿದ ನನ್ನ ಬಲವಾಗಿರುವ ಕರ್ತನಿಗೆ ಸ್ತೋತ್ರವಾಗಲಿ.
ನಿನ್ನ ಭಯಂಕರವಾದ ತ್ರಾಣದ ವಿಷಯ ವಾಗಿಯೂ ಅವರು ಹೇಳುವರು; ನಿನ್ನ ಮಹತ್ವವನ್ನು ನಾನು ಸಾರುವೆನು.
ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.
ಆ ದಿವಸದಲ್ಲಿ ಯೆಹೂದ ದೇಶದೊಳಗೆ ಈ ಹಾಡನ್ನು ಹಾಡುವರು; ನಮಗೆ ಬಲ ವಾದ ಪಟ್ಟಣವಿದೆ. ರಕ್ಷಣೆಯನ್ನು ಕೋಟೆಯನ್ನಾ ಗಿಯೂ ಹೊರಪೌಳಿಯನ್ನಾಗಿಯೂ ದೇವರು ಮಾಡು ವನು.
ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
ಆಗ ಅವರು ಅವನಿಗೆ--ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ದೂಷಣೆಯಾಗಿಯೂ ಇದೆ. ಪ್ರಸವವೇದನೆಯ ಕಾಲವು ಬಂದದೆ, ಆದರೆ ಹೆರುವದಕ್ಕೆ ಬಲ ಸಾಲದು.
ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ
ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು.
ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ.
ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್ ಮೇಷಕ್ ಅಬೇದ್ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ.
ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳ ಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆ ಮಾಡಿದನು; ಹೀಗೆ ದಾನಿಯೇಲನನ್ನು ಗವಿಯೊಳಗಿಂದ ಮೇಲಕೆತ್ತಿದರು ಮತ್ತು ಅವನು ತನ್ನ ದೇವರಲ್ಲಿ ನಂಬಿಕೆಯಿಟ್ಟದ್ದರಿಂದ ಯಾವ ತರಹ ಹಾನಿಯೂ ಅವನಲ್ಲಿ ಕಾಣಲಿಲ್ಲ.
ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.