ಆದರೆ ಮೇರೆ ವಿಾರುವ ಪ್ರಳಯ ದಿಂದ ಅದರ ಸ್ಥಳವನ್ನು ಮುಗಿಸಿಬಿಡುವನು; ಕತ್ತಲೆ ಆತನ ಶತ್ರುಗಳನ್ನು ಹಿಂದಟ್ಟುವದು.
Cross references
ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.
ದಿಗಿಲುಗಳು ನನ್ನ ಮೇಲೆ ಬಂದವೆ; ಅವು ಗಾಳಿಯ ಹಾಗೆ ನನ್ನ ಪ್ರಾಣ ವನ್ನು ಹಿಂದಟ್ಟುತ್ತವೆ; ಮೇಘದ ಹಾಗೆ ನನ್ನ ಕ್ಷೇಮವು ದಾಟಿ ಹೋಗುತ್ತದೆ.
ದುಷ್ಟರ ಮಾರ್ಗವು ಕತ್ತಲೆ ಯಂತಿದೆ. ಅವರು ಯಾವದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.
ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ
ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು.
ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು.
ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವದಿಲ್ಲ; ವಿಪರೀತ ಬಾಧೆಯು ಹಾದುಹೋಗುವಾಗ ನೀವು ಅದರಿಂದ ತುಳಿಯಲ್ಪಡುವಿರಿ.
ಅವರ ಪ್ರವಾದನೆಯನು ಕೇಳುವ ಜನರು ಕ್ಷಾಮದ ಮತ್ತು ಕತ್ತಿಯ ನಿಮಿತ್ತ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಹೆಂಡತಿಯರನ್ನೂ ಕುಮಾರರನ್ನೂ ಕುಮಾರ್ತೆಯರನ್ನೂ ಹೂಣಿಡುವದಕ್ಕೆ ಯಾರೂ ಇರು ವದಿಲ್ಲ; ನಾನು ಅವರ ಕೆಟ್ಟತನವನ್ನು ಅವರ ಮೇಲೆ ಹೊಯಿದು ಬಿಡುವೆನು.
ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅದನ್ನು ನನ್ನ ಉರಿಯಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶ ಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳೂ ಸುರಿಯುವವು;
ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
ಆಮೇಲೆ ಅವನ ಮಕ್ಕಳು ಸನ್ನದ್ಧರಾಗಿ ದೊಡ್ಡ ಸೈನ್ಯಗಳ ಸಮೂಹವನ್ನು ಕೂಡಿಸುವರು; ಅವರಲ್ಲಿ ಒಬ್ಬನು ನಿಶ್ಚಯವಾಗಿ ಬಂದು ಅದರಲ್ಲಿ ಪ್ರಳಯದಂತೆ ಹಾದುಹೋಗುವನು. ಅವನು ಮತ್ತೆ ಸನ್ನದ್ಧನಾಗಿ ಕೋಟೆಯನ್ನು ಮುತ್ತುವನು.
ಪ್ರವಾಹದಂತಿರುವ ಆ ವ್ಯೂಹಗಳೂ ಒಡಂಬಡಿಕೆಯ ಪ್ರಧಾನನೂ ಅವನ ರಭಸಕ್ಕೆ ಸಿಕ್ಕಿ ಒಡೆದುಕೊಂಡು ಹೋಗಿ ಮುರಿದು ಹೋಗುವರು.
ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು.
ಇದಕ್ಕಾಗಿ ದೇಶವು ನಡುಗುವದಿಲ್ಲವೇ? ಅದರಲ್ಲಿ ವಾಸಿಸುವವರೆಲ್ಲರೂ ಗೋಳಾಡುವದಿಲ್ಲವೇ? ಅದು ಪ್ರವಾಹದಂತೆ ಉಬ್ಬಿ ಐಗುಪ್ತದ ಪ್ರವಾಹದಂತೆ ಬಡುಕೊಂಡು ಇಳಿಯು ವದು.
ಸೈನ್ಯಗಳ ದೇವರಾದ ಕರ್ತನೇ, ದೇಶವನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುವದು. ಅದರಲ್ಲಿ ವಾಸವಾಗಿರುವವರೆಲ್ಲರೂ ಗೋಳಾಡುವರು. ಅವೆಲ್ಲಾ ನದಿಯ ಹಾಗೆ ಪ್ರವಾಹದಂತೆ ಉಕ್ಕಿ, ಐಗುಪ್ತದ ಪ್ರವಾಹದಂತೆ ಉಕ್ಕಿ ಮುಳುಗಿ ಹೋಗುವದು.
ನಿನೆವೆಯ ಭಾರವು. ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು.
ನಿನೆವೆ ಹುಟ್ಟಿದಂದಿನಿಂದ ನೀರಿನ ಕೆರೆಯ ಹಾಗಿತ್ತು; ಆದರೂ ಅವರು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಅಂದರೂ ಒಬ್ಬನೂ ಹಿಂದಕ್ಕೆ ನೋಡುವದಿಲ್ಲ.
ಆತನು ತನ್ನ ಕೈಯನ್ನು ಉತ್ತರದ ಮೇಲೆ ಚಾಚಿ ಅಶ್ಶೂರನ್ನು ನಾಶಮಾಡಿ ನಿನೆವೆಯನ್ನು ಹಾಳಾಗಿಯೂ ಅರಣ್ಯದಂತೆ ಒಣಗಿ ದ್ದಾಗಿಯೂ ಮಾಡುವನು.
ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
ಆ ನೀರುಗಳಿಂದಲೇ ಆ ಕಾಲದಲ್ಲಿದ್ದ ಲೋಕವು ಜಲಪ್ರಳಯದಲ್ಲಿ ನಾಶ ವಾಯಿತು.