ನೀನು ಸಹ ಅಮಲೇರಿದ್ದೀ, ಅಡಗಿಕೊಳ್ಳುವಿ; ನೀನು ಸಹ ಶತ್ರುವಿನ ನಿಮಿತ್ತ ತ್ರಾಣ ವನ್ನು ಹುಡುಕುವಿ.
Cross references
ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು.
ಹಾಗೆಯೇ ಅವರಿಬ್ಬರೂ ಫಿಲಿಷ್ಟಿಯರ ಠಾಣದ ವರಿಗೆ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರುಇಗೋ, ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಇಬ್ರಿಯರು ಹೊರಟು ಬರುತ್ತಾರೆಂದರು.
ಕರ್ತನ ಕೈಯಲ್ಲಿ ಪಾತ್ರೆಯು ಉಂಟು; ದ್ರಾಕ್ಷಾರಸವು ಕೆಂಪಾಗಿದೆ. ಕಲಬೆರಿಕೆಯಿಂದ ತುಂಬಿ ಅದೆ; ಅದರಿಂದ ಆತನು ಹೊಯ್ಯುತ್ತಾನೆ; ಅದರ ಮಡ್ಡಿಯನ್ನು ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.
ಕರ್ತನ ಭಯಕ್ಕೂ ಆತನ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ, ದೂಳಿನಲ್ಲಿ ನೀನು ಅಡಗಿಕೋ.
ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.
ತಾಮಸಮಾಡಿ ಆಶ್ಚರ್ಯಪಡಿರಿ, ನೀವು ಕೂಗಿರಿ, ಕೂಗಾಡಿರಿ ಇವರು ಅಮಲೇರಿದ್ದಾರೆ; ಆದರೆ ದ್ರಾಕ್ಷಾ ರಸದಿಂದಲ್ಲ; ಅವರು ಕೂಗಾಡುತ್ತಾರೆ, ಆದರೆ ಮದ್ಯ ದಿಂದಲ್ಲ.
ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
ನನ್ನ ಕೋಪ ದಲ್ಲಿ ಜನಗಳನ್ನು ತುಳಿದು ಬಿಟ್ಟೆನು; ನನ್ನ ರೋಷ ದಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು; ಅವರ ಶಕ್ತಿಯನ್ನು ಭೂಮಿಗೆ ಇಳಿಯುವಂತೆ ಮಾಡಿದೆನು.
ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸ ಲೇಮಿನಲ್ಲಿ ಪ್ರಕಟಿಸಿರಿ, ದೇಶದಲ್ಲಿ ತುತೂರಿ ಊದಿ ರೆಂದು ಹೇಳಿರಿ; ಗಟ್ಟಿಯಾಗಿ ಕೂಗಿರಿ; ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ ಎಂದು ಹೇಳಿರಿ.
ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್ ದೇವತೆ ಗಳ ಹಿಂದೆಯೂ ನಡೆದರು.
ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
ಇಸ್ರಾಯೇಲಿನ ಪಾಪವಾದ ಅವೇ ನಿನ ಉನ್ನತವಾದ ಸ್ಥಳಗಳು ಹಾಳಾಗಿಹೋಗುವವು. ಮುಳ್ಳುಗಿಡಗಳೂ ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವವು; ಅವರು ಬೆಟ್ಟಗಳಿಗೆ--ನಮ್ಮನ್ನು ಮುಚ್ಚಿರಿ, ಗುಡ್ಡಗಳೇ ನಮ್ಮ ಮೇಲೆ ಬೀಳಿರಿ ಅನ್ನುವರು.
ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.
ಅವರು ಸರ್ಪದಂತೆ ಧೂಳನ್ನು ನೆಕ್ಕುವರು; ಭೂಮಿಯ ಕ್ರಿಮಿಗಳಂತೆ ತಾವು ರಂಧ್ರಗಳಿಂದ ಹೊರಗೆ ಬರುವರು; ನಮ್ಮ ದೇವರಾದ ಕರ್ತನಿಗೆ ಅವರು ಹೆದರುವರು; ನಿನಗೆ ಭಯಪಡುವರು.
ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು.
ಚೂರುಚೂರಾಗಿ ಒಡೆದು ಬಿಡುವವನು ನಿನ್ನ ಎದುರಿಗೆ ಬಂದಿದ್ದಾನೆ; ಆಯುಧ ಗಳನ್ನು ಭದ್ರಪಡಿಸು; ದಾರಿಯನ್ನು ಕಾಯಿ; ನಡುವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಬಲವಾಗಿ ಗಟ್ಟಿ ಮಾಡಿಕೋ.
ಆಗ ಅವರು ಬೆಟ್ಟಗಳಿಗೆ--ನಮ್ಮ ಮೇಲೆ ಬೀಳಿರಿ; ಗುಡ್ಡಗಳಿಗೆ-- ನಮ್ಮನ್ನು ಮುಚ್ಚಿಕೊಳ್ಳಿರಿ ಎಂದು ಹೇಳಲಾರಂಭಿಸು ವರು.
ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು