ಅವರು ನನಗೆ--ಸೆರೆ ಯನ್ನು ಬಿಟ್ಟ್ಟು ಉಳಿದವರು ಆ ಸೀಮೆಯಲ್ಲಿದ್ದು ಮಹಾ ಕೇಡನ್ನೂ ನಿಂದೆಯನ್ನೂ ಅನುಭವವಿಸುತ್ತಿದ್ದಾರೆ. ಇದ ಲ್ಲದೆ ಯೆರೂಸಲೇಮಿನ ಗೋಡೆಯು ಸಹ ಕೆಡವಲ್ಪ ಟ್ಟಿದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದು ಹೇಳಿದರು.
Cross references
ನಿಮ್ಮ ಪಟ್ಟಣಗಳನ್ನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳುಮಾಡಿ, ನಿಮ್ಮ ಸುವಾಸನೆ ಗಳನ್ನು ಮೂಸಿ ನೋಡದೆ ಇರುವೆನು.
ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.
ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು.
ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಕಸ್ದೀಯರ ಸೈನ್ಯದವರೆ ಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆ ಗಳನ್ನು ಕೆಡವಿಬಿಟ್ಟರು.
ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು.
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಾಬೆಲಿಗೆ ಸೆರೆಯಾಗಿ ಹಿಡುಕೊಂಡು ಹೋದಂಥ ಯೆರೂಸಲೇಮಿಗೂ ಯೆಹೂದದಲ್ಲಿರುವ ತಮ್ಮ ತಮ್ಮ ಪಟ್ಟಣಗಳಿಗೂ ಸೆರೆಯಿಂದ ತಿರುಗಿದಂಥ
ಅರಸನಾದ ದಾರ್ಯಾವೆಷನಿಗೆ ಸಮಸ್ತ ಸಮಾ ಧಾನವು. ಅರಸನಿಗೆ ತಿಳಿಯಬೇಕಾದದ್ದೇನಂದರೆ--ನಾವು ಯೆಹೂದ್ಯರ ದೇಶದಲ್ಲಿರುವ ಮಹಾದೇವರ ಆಲಯಕ್ಕೆ ಹೋದೆವು; ಅದು ದೊಡ್ಡ ಕಲ್ಲುಗಳಿಂದ ಕಟ್ಟಲ್ಪಟ್ಟಿದೆ; ಗೋಡೆಗಳ ಮೇಲೆ ತೊಲೆಗಳು ಹೊದಿಸ ಲ್ಪಟ್ಟಿವೆ; ಆ ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಲ್ಲಿ ವೃದ್ಧಿಯಾಗುತ್ತದೆ.
ಆಗ ನಾನು ಬಹು ಭಯಪಟ್ಟು ಅರಸನಿಗೆ--ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿ ಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುವಾಗ ನನ್ನ ಮುಖವು ದುಃಖವಿಲ್ಲದೆ ಇರುವದು ಹೇಗೆ ಅಂದೆನು.
ನಾನು ರಾತ್ರಿಯಲ್ಲಿ ತಗ್ಗಿನ ಬಾಗಲಿನಿಂದ ಹೊರಟು ಸರ್ಪದ ಬಾವಿಯನ್ನು ದಾಟಿ ತಿಪ್ಪೆದಿಬ್ಬೆಯ ಬಾಗಲಿಗೆ ಬಂದು ಕೆಡವಿ ಹಾಕಲ್ಪಟ್ಟ ಯೆರೂಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಲುಗಳನ್ನು ಚೆನ್ನಾಗಿ ನೋಡಿದೆನು.
ಆಗ ನಾನು ಅವರಿಗೆ ಹೇಳಿದೆನು--ನಮಗೆ ಇರುವ ಕೇಡನ್ನು ನೀವು ನೋಡುತ್ತೀರಿ. ಯೆರೂಸಲೇಮು ಹಾಳಾಗಿ ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟವಲ್ಲಾ ನಾವು ಇನ್ನು ಮೇಲೆ ನಿಂದೆಗೊಳಗಾಗಿರದ ಹಾಗೆ ಯೆರೂಸಲೇಮಿನ ಗೋಡೆಯನ್ನು ಕಟ್ಟುವ ಬನ್ನಿರಿ.
ಅದರಲ್ಲಿ ಬರೆದ ದ್ದೇನಂದರೆ--ಬಾಬೆಲಿನ ಅರಸನಾದ ನೆಬೂಕದ್ನೆಚರನು ಸೆರೆಯಾಗಿ ತಕ್ಕೊಂಡು ಹೋದವರು ಸೆರೆಯಾಗಿ ಒಯ್ಯಲ್ಪಟ್ಟು ಸೆರೆಯಿಂದ ಹೊರಟು ಯೆರೂಸಲೇ ಮಿಗೂ ಯೆಹೂದಕ್ಕೂ
ಇಗೋ, ಈ ದಿವಸ ನಾವು ದಾಸರಾಗಿದ್ದೇವೆ; ಅದರ ಫಲವನ್ನೂ ಉತ್ತಮವಾದದ್ದನ್ನೂ ತಿನ್ನುವದಕ್ಕೆ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಇಗೋ, ನಾವು ದಾಸರಾಗಿದ್ದೇವೆ.
ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ನೆತಿನಿಯರೂ ಸೊಲೊ ಮೋನನ ಸೇವಕರ ಮಕ್ಕಳೂ ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು;ಆದರೆ ವಾಸವಾಗಿದ್ದ ಸೀಮೆಯ ಮುಖ್ಯಸ್ಥರು ಯಾರಂದರೆ--
ಅಹಷ್ವೇರೋಷನ ದಿವಸಗಳಲ್ಲಿ ಆದದ್ದುಆ ಅಹಷ್ವೇರೋಷನು ಭಾರತ ಮೊದ ಲ್ಗೊಂಡು ಕೂಷಿನವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತ್ಯಗಳನ್ನು ಆಳಿದನು;
ತಿನ್ನತಕ್ಕ ಕುರಿಗಳ ಹಾಗೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀ; ಅನ್ಯಜನಾಂಗ ಗಳಲ್ಲಿ ನಮ್ಮನ್ನು ಚದರಿಸಿದ್ದೀ.
ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.
ಬಾಬೆಲಿನ ನದಿಗಳ ಹತ್ತಿರ ನಾವು ಕೂತುಕೊಂಡು ಹೌದು, ಚೀಯೋ ನನ್ನು ಜ್ಞಾಪಕಮಾಡಿಕೊಂಡಾಗ ನಾವು ಅತ್ತೆವು.
ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು.
ನಿಶ್ಚಿಂತೆಯರಾದ ಹೆಂಗಸರೇ, ಏಳಿರಿ, ನನ್ನ ಸ್ವರ ವನ್ನು ಕೇಳಿರಿ, ಭಯವಿಲ್ಲದ ಹೆಣ್ಣುಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ.
ಆದಕಾರಣ ಪರಿಶುದ್ಧ ಸ್ಥಾನದ ಪ್ರಧಾನರನ್ನು ಅಪವಿತ್ರಮಾಡಿ, ಯಾಕೋ ಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.
ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು.
ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಪರಿಛೇದನೆ ಯಿಲ್ಲದಾಗಿದೆ; ಇಗೋ, ಕರ್ತನ ವಾಕ್ಯವು ಅವರಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ.
ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ; ಅವನ ನಿವಾಸಗಳನ್ನು ಕರುಣಿಸುತ್ತೇನೆ; ಪಟ್ಟಣವು ಅದರ ದಿಣ್ಣೆಯ ಮೇಲೆ ಕಟ್ಟಲ್ಪಡುವದು; ಅರಮನೆಯು ತಕ್ಕಸ್ಥಳದಲ್ಲಿ ನೆಲೆಯಾಗಿರುವದು.
ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಕುಮಾರ ರಾದ ಯೋಹಾನಾನನೂ ಯೋನಾಥಾನನೂ ತನ್ಹುಮೆ ತನ ಮಗನಾದ ಸೆರಾಯನೂ ನೆಟೋಫದವನಾದ ಏಫಯನ ಕುಮಾರರೂ ಮಾಕಾನ ಮಗನಾದ ಯೆಜನ್ಯ ನೀಯನೂ ಇವರೆಲ್ಲರು ತಮ್ಮ ಮನುಷ್ಯರ ಸಹಿತವಾಗಿ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು.
ಯೆರೂಸಲೇಮು ಕಷ್ಟ ಮತ್ತು ಸಂಕಟದಲ್ಲಿದ್ದಾಗ ಪೂರ್ವದಿನಗಳಲ್ಲಿ ತನಗಿದ್ದ ರಮ್ಯವಾದವುಗಳೆಲ್ಲವನ್ನು ಜ್ಞಾಪಕಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ ಯಾವನೂ ಸಹಾಯಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ಸಬ್ಬತ್ತುಗಳ ವಿಷಯದಲ್ಲಿ ಅಪಹಾಸ್ಯಮಾಡಿದರು.
ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ; ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಪ್ರಭುಗಳು ಅನ್ಯಜನಾಂಗಗಳ ಮಧ್ಯೆ ಇರುವರು; ಇನ್ನು ನ್ಯಾಯ ಪ್ರಮಾಣವು ಇರುವದೇ ಇಲ್ಲ; ಆಕೆಯ ಪ್ರವಾದಿಗಳು ಸಹ ಕರ್ತನಿಂದ ದರ್ಶನವನ್ನು ಕಂಡು ಕೊಳ್ಳುವದಿಲ್ಲ.
ಓ ಕರ್ತನೇ, ಅವರ ನಿಂದೆಯನ್ನೂ ನನಗೆ ವಿರುದ್ಧವಾದ ಅವರ ಎಲ್ಲಾ ಕಲ್ಪನೆಗಳನ್ನೂ ನನಗೆ ವಿರುದ್ಧವಾಗಿ ಹೇಳುವವರ ತುಟಿಗಳನ್ನೂ
ಓ ಕರ್ತನೇ, ನನ್ನ ಮೇಲೆ ಬಂದ ದುರ್ಗತಿಯನ್ನು ಜ್ಞಾಪಕಮಾಡಿಕೋ ಪರಿಗಣಿಸು, ನಮ್ಮ ನಿಂದೆಯನ್ನು ನೋಡು.