ಜನರಲ್ಲಿ ಉಳಿದವರಾದ ಯಾಜಕರೂ ಲೇವಿ ಯರೂ ದ್ವಾರಪಾಲಕರೂ ಹಾಡುಗಾರರೂ ನೆತಿನಿ ಯರೂ, ದೇವರ ನ್ಯಾಯಪ್ರಮಾಣದ ಪ್ರಕಾರವಾಗಿ ಆ ದೇಶಗಳ ಜನರೊಳಗಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡವರೆಲ್ಲರೂ ಅವರ ಹೆಂಡತಿಯರೂ ಕುಮಾ ರರೂ ಕುಮಾರ್ತೆಯರೂ ತಿಳಿವಳಿಕೆಯೂ ಗ್ರಹಿಕೆಯೂ ಉಳ್ಳವರೆಲ್ಲರೂ;
Cross references
ನಾನು ನಿಮಗೆ ಹೇಳಿದ್ದೇನಂದರೆ--ನೀವು ಅವರ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ. ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಕರ್ತನು ನಾನೇ.
ಯಾಜಕರ ಲೆಕ್ಕವೇ ನಂದರೆ-- ಯೇಷೂವನ ಮನೆಯವರಾದ ಯೆದಾ ಯನ ಮಕ್ಕಳು -- ಒಂಭೈನೂರ ಎಪ್ಪತ್ತು ಮೂರು ಮಂದಿಯು.
ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು--ಇಸ್ರಾಯೇಲ್ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ.
ಆದದರಿಂದ ನೀವು ನಿಮ್ಮ ಪಿತೃಗಳ ದೇವರಾಗಿರುವ ಕರ್ತನ ಮುಂದೆ ಅರಿಕೆಮಾಡಿ, ಆತನ ಚಿತ್ತದ ಪ್ರಕಾರ ಮಾಡಿ, ಈ ದೇಶದ ಜನರಿಂದಲೂ ಅನ್ಯಸ್ತ್ರೀಯ ರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ ಅಂದನು.
ಮಿಕ್ಕಾದ ಜನರು ಕೊಟ್ಟದ್ದೇನಂದರೆ, ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನು ಎರಡುಸಾವಿರ ತೊಲೆ ಬೆಳ್ಳಿಯನ್ನೂ ಅರುವತ್ತೇಳು ಯಾಜಕರ ಅಂಗಿಗಳನ್ನೂ ಕೊಟ್ಟರು.ಹೀಗೇಯೇ ಯಾಜಕರೂ ಲೇವಿಯರೂ ದ್ವಾರ ಪಾಲಕರೂ ಹಾಡುಗಾರರೂ ಜನರಲ್ಲಿ ಕೆಲವರೂ ನೆತಿನಿಯರೂ ಸಮಸ್ತ ಇಸ್ರಾಯೇಲ್ಯರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸವಾಗಿದ್ದರು. ಏಳನೇ ತಿಂಗಳು ಬಂದಾಗ ಇಸ್ರಾಯೇಲನ ಮಕ್ಕಳು ತಮ್ಮ ತಮ್ಮ ಪಟ್ಟಣಗಳಲ್ಲಿದ್ದರು.
ಹೀಗೆಯೇ ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ಸಭೆಯ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ
ಆಗ ಇಸ್ರಾಯೇಲ್ ಸಂತಾನದವರು ತಮ್ಮನ್ನು ಸಮಸ್ತ ಅನ್ಯ ಜನರಿಂದ ಪ್ರತ್ಯೇಕಿಸಿಕೊಂಡು ನಿಂತು ತಮ್ಮ ಪಾಪ ಗಳನ್ನೂ ತಮ್ಮ ತಂದೆಗಳ ಅಕ್ರಮಗಳನ್ನೂ ಅರಿಕೆ ಮಾಡಿದರು.
ಆಗ ಏನಾಯಿತಂದರೆ, ಅವರು ನ್ಯಾಯ ಪ್ರಮಾಣವನ್ನು ಕೇಳಿದಾಗ ಇಸ್ರಾಯೆಲ್ಯರೊಳಗಿಂದ ಬೆರಿಕೆಯಾದ ಜನರನ್ನು ಪ್ರತ್ಯೇಕಿಸಿದರು.
ದೇವರು ಭೂಮಿಗೆಲ್ಲಾ ಅರಸನು; ತಿಳುವಳಿಕೆಯಿಂದ ಸ್ತುತಿಗಳನ್ನು ಹಾಡಿರಿ.
ನಿನ್ನ ಬಾಯಿಂದ ಆತುರಪಡದಿರು ಮತ್ತು ದೇವರ ಮುಂದೆ ಯಾವದನ್ನು ಉಚ್ಚರಿಸುವದಕ್ಕೆ ನಿನ್ನ ಹೃದಯವು ದುಡುಕದೇ ಇರಲಿ; ದೇವರು ಪರಲೋಕ ದಲ್ಲಿದ್ದಾನೆ; ನೀನು ಭೂಮಿಯ ಮೇಲೆ ಇದ್ದೀ; ಆದ ಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.
ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.
ಪೌಲನೆಂಬ ನಾನು ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗಿರುವದಕ್ಕೆ ಕರೆ ಯಲ್ಪಟ್ಟು ದೇವರ ಸುವಾರ್ತೆಗೋಸ್ಕರ ಪ್ರತ್ಯೇಕಿಸ ಲ್ಪಟ್ಟವನೂ ಆಗಿದ್ದೇನೆ.
ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು?