ಇವರು ತಮ್ಮ ಸಹೋದರರಾದ ತಮ್ಮ ಮುಖ್ಯಸ್ಥರ ಸಂಗಡ ಕೂಡಿಕೊಂಡು--ದೇವರ ಸೇವಕನಾದ ಮೋಶೆಯ ಕೈಯಿಂದ ಕೊಟ್ಟ ದೇವರ ನ್ಯಾಯಪ್ರಮಾಣದಲ್ಲಿ ನಡೆಯುತ್ತೇವೆಂದೂ ಕರ್ತ ನಾದ ನಮ್ಮ ದೇವರ ಆಜ್ಞೆಗಳನ್ನೂ ಆತನ ನ್ಯಾಯ ಗಳನ್ನೂ ಆತನ ಕಟ್ಟಳೆಗಳನ್ನೂ ಎಲ್ಲವನ್ನೂ ಕೈಕೊಂಡು ಮಾಡುತ್ತೇವೆಂದೂ;
Cross references
ನೀವು ನನ್ನವರಾಗಿರುವಂತೆ ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಿಸಿದ್ದ ಕರ್ತನಾದ ನಾನು ಪರಿಶುದ್ಧನಾಗಿರುವದರಿಂದ ನೀವು ನನಗೆ ಪರಿಶುದ್ಧ ರಾಗಿರಬೇಕು.ಮನುಷ್ಯನಾಗಲಿ ಸ್ತ್ರೀಯಾಗಲಿ ಮಂತ್ರವಾದಿ ಇಲ್ಲವೆ ಮಾಟಗಾರರಾಗಿರುವದಾಗಿದ್ದರೆ ಅವರನ್ನು ನಿಶ್ಚಯವಾಗಿ ಕಲ್ಲೆಸೆದು ಕೊಲ್ಲಬೇಕು; ಅವರ ರಕ್ತವು ಅವರ ಮೇಲೆ ಇರುವದು.
ಆಗ ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವರಿಗೆ--ಓ ಇಸ್ರಾಯೇಲೇ, ನಾನು ಈಹೊತ್ತು ನಿಮಗೆ ಹೇಳುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿರಿ; ಅವುಗಳನ್ನು ಕಲಿತು ಕೈಕೊಂಡು ನಡೆಯಬೇಕು.
ಹೀಗಿರುವದರಿಂದ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದಂತೆ ಕೈಕೊಂಡು ನಡೆಯಬೇಕು; ಎಡಕ್ಕಾದರೂ ಬಲಕ್ಕಾದರೂ ತಿರುಗಬೇಡಿರಿ.ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.
ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ.
ನಿಮ್ಮ ಚಿಕ್ಕವರೂ ಪತ್ನಿಯರೂ ನಿನ್ನ ಪಾಳೆಯದಲ್ಲಿರುವ ಪರವಾಸಿಯರೂ ನಿನಗಾಗಿ ಕಟ್ಟಿಗೆ ಕಡಿಯುವವರೂ ನೀರು ಸೇದುವ ವರೂ ಇದ್ದೀರಿ.
ಮೋಶೆ ನಮಗೆ ನ್ಯಾಯಪ್ರಮಾಣವನ್ನು ಆಜ್ಞಾಪಿ ಸಿದ್ದಾನೆ. ಅದೇ ಯಾಕೋಬನ ಸಭೆಯ ಬಾಧ್ಯತೆಯು.
ಆದರೆ ಯೇಹುವು ತನ್ನ ಪೂರ್ಣಹೃದಯ ದಿಂದ ಇಸ್ರಾಯೇಲಿನ ದೇವರಾದ ಕರ್ತನ ನ್ಯಾಯ ಪ್ರಮಾಣದಲ್ಲಿ ನಡೆಯುವ ಹಾಗೆ ಎಚ್ಚರಿಕೆಯಾಗಿರ ಲಿಲ್ಲ; ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದು ಬಿಡಲಿಲ್ಲ.
ಅರಸನು ಸ್ತಂಭದ ಬಳಿಯಲ್ಲಿ ನಿಂತು ಕರ್ತನನ್ನು ಹಿಂಬಾಲಿಸು ವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆ ಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿ ರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವ ದಕ್ಕೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿ ದನು; ಜನರೆಲ್ಲರೂ ಒಡಂಬಡಿಕೆಗೆ ಒಪ್ಪಿದರು.
ಆದರೆ ತಮ್ಮ ಸ್ವಾಸ್ತ್ಯಗಳಲ್ಲಿ ತಮ್ಮ ಪಟ್ಟಣಗಳಲ್ಲಿ ಮೊದಲು ವಾಸ ವಾಗಿದ್ದವರು ಇಸ್ರಾಯೇಲ್ಯರೂ ಯಾಜಕರೂ ಲೇವಿ ಯರೂ ನೆತಿನಿಯರೂ.
ಆದಕಾರಣ ಇಸ್ರಾಯೇಲಿನ ದೇವರಾದ ಓ ಕರ್ತನೇ,--ನಿನ್ನ ಮಕ್ಕಳು ತಮ್ಮ ಮಾರ್ಗಕ್ಕೆ ಜಾಗ್ರತೆಯಾಗಿದ್ದು ನೀನು ನನ್ನ ಮುಂದೆ ನಡೆದ ಹಾಗೆ ಅವರು ನನ್ನ ನ್ಯಾಯ ಪ್ರಮಾಣದ ಪ್ರಕಾರ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ಕುಳಿತುಕೊ ಳ್ಳಲು ನಿನಗೆ ಮನುಷ್ಯನು ಕೊರತೆಯಾಗುವದಿಲ್ಲವೆಂದು ನೀನು ನನ್ನ ತಂದೆಯೂ ನಿನ್ನ ಸೇವಕನೂ ದಾವೀದನಿಗೆ ಹೇಳಿದ್ದನ್ನು ನಡಿಸು.
ಯಾವನಾದರೂ ಇಸ್ರಾ ಯೇಲಿನ ದೇವರಾದ ಕರ್ತನನ್ನು ಹುಡುಕದೆ ಹೋದರೆ ಹಿರಿಯನಾದರೂ ಕಿರಿಯನಾದರೂ ಪುರುಷನಾದರೂ ಸ್ತ್ರೀಯಾದರೂ ಸಾಯಬೇಕೆಂದೂ ಒಡಂಬಡಿಕೆಯನ್ನು ಮಾಡಿಕೊಂಡರು.
ಅರಸನು ತನ್ನ ಸ್ಥಳದಲ್ಲಿ ನಿಂತುಕೊಂಡು ಕರ್ತನನ್ನು ಹಿಂಬಾಲಿಸುವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನೂ ತನ್ನ ಪೂರ್ಣಹೃದಯದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳ ಹಾಗೆ ಮಾಡುವದಕ್ಕೂ ಕರ್ತನ ಮುಂದೆ ಒಡಂಬಡಿಕೆ ಮಾಡಿದನು.
ಅದಕ್ಕವರುನಾವು ತಿರಿಗಿ ಕೊಡುತ್ತೇವೆ; ಅವರಿಂದ ಏನೂ ಕೇಳು ವದಿಲ್ಲ. ನೀನು ಹೇಳಿದ ಹಾಗೆ ಮಾಡುತ್ತೇವೆ ಅಂದರು. ಆಗ ನಾನು ಯಾಜಕರನ್ನು ಕರೆದು ಅವರು ಈ ಮಾತಿನ ಪ್ರಕಾರ ಮಾಡುವ ಹಾಗೆ ಅವರಿಂದ ಪ್ರಮಾಣವನ್ನು ತಕ್ಕೊಂಡೆನು.
ನೆತಿನಿಯರು: ಜೀಹನ ಮಕ್ಕಳು, ಹಸೂಫನ ಮಕ್ಕಳು, ಟಬ್ಬಾವೋತನ ಮಕ್ಕಳು,
ಹೀಗೆಯೇ ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ಸಭೆಯ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ
ಎಜ್ರನು ನ್ಯಾಯ ಪ್ರಮಾಣವನ್ನು ತಕ್ಕೊಂಡು ಬಂದು ನೀರಿನ ಬಾಗಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದ ವರೆಗೆ ಓದಿದನು. ಜನರೆ ಲ್ಲರೂ ನ್ಯಾಯಪ್ರಮಾಣಕ್ಕೆ ಕಿವಿಗೊಟ್ಟರು.
ಆಗ ಇಸ್ರಾಯೇಲ್ ಸಂತಾನದವರು ತಮ್ಮನ್ನು ಸಮಸ್ತ ಅನ್ಯ ಜನರಿಂದ ಪ್ರತ್ಯೇಕಿಸಿಕೊಂಡು ನಿಂತು ತಮ್ಮ ಪಾಪ ಗಳನ್ನೂ ತಮ್ಮ ತಂದೆಗಳ ಅಕ್ರಮಗಳನ್ನೂ ಅರಿಕೆ ಮಾಡಿದರು.
ಆಗ ನಾನು ಅವರನ್ನು ಗದರಿಸಿ ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲನ್ನು ಕಿತ್ತು--ನೀವು ನಿಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೂ ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೂ ನಿಮಗೂ ತಕ್ಕೊಳ್ಳದೆ ಮತ್ತು ಕೊಡದೆ ಇರ್ರಿ ಎಂದು ದೇವರ ಹೆಸರಿನಲ್ಲಿ ಅವರಿಗೆ ಆಣೆ ಇಟ್ಟೆನು;
ನಮ್ಮ ದೇವರಾದ ಓ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ. ನಿನ್ನ ಮಹಿಮೆಯನ್ನು ಆಕಾಶಗಳ ಮೇಲೆ ಇರಿಸಿದ್ದೀ.
ಓ ಕರ್ತನೇ, ನಮ್ಮ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ.
ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
ನಿನ್ನ ನೀತಿ ವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣ ಮಾಡಿದ್ದೇನೆ; ಅದನ್ನು ಈಡೇರಿಸುವೆನು.
ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
ಅವರು ತಮ್ಮ ಯಜಮಾನರಿಗೆ ಹೇಳುವದಕ್ಕೆ ನೀನು ಅಪ್ಪಣೆಕೊಡತಕ್ಕದ್ದೇನಂದರೆ --ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳುವದೇನಂದರೆ--ನೀವು ನಿಮ್ಮ ಯಜಮಾನರಿಗೆ ಹೀಗೆ ಹೇಳಬೇಕು--
ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
ನನ್ನ ಸೇವಕನಾದ ಮೋಶೆಯ ನ್ಯಾಯಪ್ರಮಾಣ ವನ್ನೂ ನಾನು ಅವನಿಗೆ ಹೋರೇಬಿನಲ್ಲಿ ಸಮಸ್ತ ಇಸ್ರಾಯೇಲಿಗೋಸ್ಕರ ಆಜ್ಞಾಪಿಸಿದ್ದನ್ನೂ ನಿಯಮ ಗಳನ್ನೂ ನ್ಯಾಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
ಮೋಶೆಯು ನಿಮಗೆ ನ್ಯಾಯ ಪ್ರಮಾಣವನ್ನು ಕೊಟ್ಟಾಗ್ಯೂ ನಿಮ್ಮಲ್ಲಿ ಒಬ್ಬನೂ ಆ ನ್ಯಾಯಪ್ರಮಾಣವನ್ನು ಕೈಕೊಳ್ಳಲಿಲ್ಲವಲ್ಲಾ; ನೀವು ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ ಎಂದು ಹೇಳಿದನು.
ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
ಆದರೂ ಕೆಲವರು ಅವನನ್ನು ಅಂಟಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊ ಪಾಗದ ದಿಯೊನುಸ್ಯನೂ ದಾಮರಿಯೆಂಬಾಕೆಯೂ ಅವರೊಂದಿಗೆ ಇನ್ನು ಕೆಲವರೂ ಇದ್ದರು.
ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು.
ಆದರೆ ನೀನು ಅವರಿಗೆ ಒಪ್ಪಬೇಡ; ಅವನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಶಪಥ ವನ್ನು ಮಾಡಿಕೊಂಡವರಲ್ಲಿ ನಾಲ್ವತ್ತು ಮಂದಿಗಿಂತ ಹೆಚ್ಚಾದವರು ಅವನಿಗಾಗಿ ಕಾಯುತ್ತಿದ್ದಾರೆ; ಈಗ ಅವರು ನಿನ್ನ ಮಾತಿಗಾಗಿ ಎದುರು ನೋಡುತ್ತಾ ಸಿದ್ಧವಾಗಿದ್ದಾರೆ ಎಂದು ಹೇಳಿದ
ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.
ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.