ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.
Cross references
ಇದಲ್ಲದೆ ಯಾವನಾದರೂ ಪ್ರಧಾನರ, ಹಿರಿಯರ ಯೋಚನೆಯ ಪ್ರಕಾರ ಮೂರು ದಿವಸದಲ್ಲಿ ಬಾರದೆ ಇದ್ದರೆ ಅವನ ಆಸ್ತಿಯಲ್ಲಾ ದಂಡವಾಗಿ ತಕ್ಕೊಳ್ಳಲ್ಪಡುವದೆಂದೂ ಅವನು ಸೆರೆಯಾಗಿ ಒಯ್ಯಲ್ಪಟ್ಟವರ ಕೂಟದಿಂದ ಹೊರಗೆ ಹಾಕಲ್ಪಡುವನೆಂದೂ ಸಾರಿದರು.
ಹೊರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯ ನಾಗಿರುವ ದಾಸನಾದ ಟೋಬೀಯನೂ ಕೇಳಿದಾಗ ಇಸ್ರಾಯೇಲ್ ಮಕ್ಕಳ ಮೇಲನ್ನು ಹುಡುಕಲು ಒಬ್ಬ ಮನುಷ್ಯನು ಬಂದದ್ದರಿಂದ ಅವರು ಬಹಳವಾಗಿ ವ್ಯಸನಪಟ್ಟರು.
ಆದರೆ ಹೋರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯನ ದಾಸನಾದ ಟೋಬೀಯನೂ ಅರಬಿ ಯನಾದ ಗೆಷೆಮನೂ ಇದನ್ನು ಕೇಳಿದಾಗ ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ--ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರಿಗಿ ಬೀಳುವಿರೋ ಅಂದರು.ಆಗ ನಾನು ಅವರಿಗೆ ಪ್ರತ್ಯುತ್ತರವಾಗಿ--ಪರಲೋಕದ ದೇವರು ನಮಗೆ ಸಫಲ ಮಾಡುವನು; ಆತನ ಸೇವಕರಾದ ನಾವು ಎದ್ದು ಕಟ್ಟುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಪಾಲಾದರೂ ಹಕ್ಕಾದರೂ ಜ್ಞಾಪಕಾರ್ಥವಾದ ಗುರುತಾದರೂ ಇಲ್ಲವೆಂದು ಹೇಳಿದನು.
ಆಗ ಪ್ರಧಾನ ಯಾಜಕನಾದ ಎಲ್ಯಾಷೀಬನೂ ಅವನ ಸಹೋದರರಾದ ಯಾಜಕರೂ ಎದ್ದು ಕುರಿ ಬಾಗಲನ್ನು ಕಟ್ಟಿದರು. ಇವರು ಅದನ್ನು ಪರಿಶುದ್ಧ ಮಾಡಿ ಅದರ ಬಾಗಲುಗಳನ್ನು ನಿಲ್ಲಿಸಿದರು. ಹಮ್ಮೆಯದ ಗೋಪುರದ ಮಟ್ಟಿಗೂ ಹನನೇಲನ ಗೋಪುರದ ವರೆಗೂ ಅದನ್ನು ಪರಿಶುದ್ಧ ಮಾಡಿದರು.
ಹೇಗಿದ್ದರೂ ಆ ದಿವಸಗಳಲ್ಲಿ ಯೆಹೂದದಲ್ಲಿದ್ದ ಮುಖ್ಯಸ್ಥರು ಟೋಬೀಯನ ಬಳಿಗೆ ಬಹಳ ಪತ್ರ ಗಳನ್ನು ಕಳುಹಿಸಿದರು. ಟೋಬೀಯನ ಪ್ರತ್ಯುತ್ತರ ಗಳು ಅವರಿಗೆ ಬಂದವು.
ಇದಲ್ಲದೆ ಯೇಷೂವನು ಯೋಯಾಕೀಮ ನನ್ನೂ ಪಡೆದನು; ಯೋಯಾಕೀಮನು ಎಲ್ಯಾಷೀಬ ನನ್ನೂ ಪಡೆದನು; ಎಲ್ಯಾಷೀಬನು ಯೋಯಾದನನ್ನು ಪಡೆದನು;
ಎಲ್ಯಾಷೀಬನು, ಯೋಯಾದನು, ಯೋಹಾ ನಾನನು, ಯದ್ದೂವನು, ಇವರ ದಿವಸಗಳಲ್ಲಿ ಲೇವಿಯರೂ ಯಾಜಕರೂ ಪಾರಸಿಯನಾದ ದಾರ್ಯಾವೆ ಷನ ಆಳಿಕೆಯ ವರೆಗೆ ಪಿತೃಗಳ ಮುಖ್ಯಸ್ಥರಾಗಿ ಬರೆ ಯಲ್ಪಟ್ಟಿದ್ದರು.
ಇದಕ್ಕೆ ಮುಂಚೆ ನಮ್ಮ ದೇವರ ಆಲಯದ ಉಗ್ರಾಣದ ಮೇಲೆ ಇಡಲ್ಪಟ್ಟ ವಿಚಾರಕನಾದ ಎಲ್ಯಾಷೀಬನೆಂಬ ಯಾಜಕನು ಟೋಬೀಯನ ಸಂಗಡ ಬಂಧುತ್ವವನ್ನು ಮಾಡಿದ್ದು
ಆಗ ನಾನು ಅವರನ್ನು ಗದರಿಸಿ ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲನ್ನು ಕಿತ್ತು--ನೀವು ನಿಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೂ ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೂ ನಿಮಗೂ ತಕ್ಕೊಳ್ಳದೆ ಮತ್ತು ಕೊಡದೆ ಇರ್ರಿ ಎಂದು ದೇವರ ಹೆಸರಿನಲ್ಲಿ ಅವರಿಗೆ ಆಣೆ ಇಟ್ಟೆನು;
ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವ ಅರಸನು ತನ್ನ ಕಣ್ಣು ದೃಷ್ಟಿಯಿಂದ ಸಕಲ ಕೆಟ್ಟತನವನ್ನು ಚದರಿಸುವನು.
ಜ್ಞಾನಿಯಾದ ಅರಸನು ದುಷ್ಟರನ್ನು ಚದರಿಸಿ ಅವರ ಮೇಲೆ ಚಕ್ರವನ್ನು ಎಳೆಯುತ್ತಾನೆ.
ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು.