ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕ ಸೇವೆಯ ಒಡಂಬ ಡಿಕೆಯನ್ನೂ ಲೇವಿಯರ ಒಡಂಬಡಿಕೆಯನ್ನೂ ಅಶುದ್ಧ ಮಾಡಿದ್ದರಿಂದ ಅವರನ್ನು ನೆನಸು.
Cross references
ತರುವಾಯ ಕರ್ತನು ಮೋಶೆಗೆ ಹೇಳಿದ್ದೇನಂದರೆ--ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಸತ್ತವರ ನಿಮಿತ್ತವಾಗಿ ಅವನ ಜನರಲ್ಲಿ ಯಾವನೂ ಹೊಲೆಯಾಗಬಾರದು.
ಅವನು ನಿನ್ನ ದೇವರಿಗೆ ರೊಟ್ಟಿಯನ್ನು ಸಮರ್ಪಿಸುವ ಕಾರಣ ನೀನು ಅವನನ್ನು ಶುದ್ಧೀಕರಿಸ ಬೇಕು, ಅವನು ನನಗೆ ಪರಿಶುದ್ಧನಾಗಿರುವನು. ನಿನ್ನನ್ನು ಶುದ್ಧೀಕರಿಸುವ ಕರ್ತನಾದ ನಾನು ಪರಿಶುದ್ಧನು.
ಇದಲ್ಲದೆ ಅವನು ತನ್ನ ಜನರೊಳಗೆ ತನ್ನ ಸಂತತಿಯನ್ನು ಅಪವಿತ್ರ ಮಾಡಬಾರದು. ಕರ್ತನಾದ ನಾನು ಅವನನ್ನು ಶುದ್ಧೀಕರಿಸುತ್ತೇನೆ.
ಆದರೆ ಅವನು ಕಳಂಕವುಳ್ಳವನಾದದರಿಂದ ತೆರೆಯ ಒಳಕ್ಕೆ ಹೋಗ ಬಾರದು ಇಲ್ಲವೆ ಯಜ್ಞವೇದಿಯ ಸವಿಾಪಕ್ಕೂ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.ಮೋಶೆಯು ಅದನ್ನು ಆರೋನ ನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಎಲ್ಲಾ ಮಕ್ಕಳಿಗೂ ಹೇಳಿದನು.
ಕರ್ತನ ಗುಡಾರದ ಸೇವೆಯನ್ನು ಮಾಡುವದಕ್ಕೂ ಸಭೆಯ ಮುಂದೆ ಇರುವ ಆತನ ಸೇವೆಯಲ್ಲಿ ನಿಲ್ಲುವದಕ್ಕೂ ಇಸ್ರಾಯೇಲ್ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲ್ಯರ ಸಭೆಯೊಳಗಿಂದ ನಿಮ್ಮನ್ನು ಪ್ರತ್ಯೇಕಿ ಸಿದ್ದು ನಿಮಗೆ ಅಲ್ಪವಾಗಿದೆಯೋ?
ಆದ ಕಾರಣ--ಇಗೋ, ನಾನು ಅವನೊಂದಿಗೆ ನನ್ನ ಸಮಾಧಾನದ ಒಡಂಬಡಿಕೆಯನ್ನು ಮಾಡುತ್ತೇನೆ ಎಂದು ಹೇಳು.
ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
ನನ್ನ ದೇವರೇ, ನೀನು ಅವರ ಈ ಕಾರ್ಯಗಳ ಪ್ರಕಾರ ಟೋಬೀಯನನ್ನೂ ಸನ್ಬಲ್ಲಟ ನನ್ನೂ ನನ್ನನ್ನು ಭಯಪಡಿಸುವವರಾಗಿದ್ದ ಪ್ರವಾದಿನಿ ಯಾದ ನೋವದ್ಯಳನ್ನೂ ಮಿಕ್ಕಾದ ಪ್ರವಾದಿಗಳನ್ನೂ ಜ್ಞಾಪಕಮಾಡಿಕೋ.
ಸೈನ್ಯಗಳ ದೇವ ರಾದ ಓ ಕರ್ತನೇ, ಇಸ್ರಾಯೇಲಿನ ದೇವರೇ, ನೀನು ಎಲ್ಲಾ ಜನಾಂಗಗಳನ್ನು ದರ್ಶಿಸುವದಕ್ಕೆ ಎಚ್ಚರವಾಗು; ದುಷ್ಟರಾದ ಅಪರಾಧಿಗಳಲ್ಲಿ ಯಾರಿಗಾದರೂ ಕರುಣೆ ತೋರಿಸಬೇಡ. ಸೆಲಾ.
ಅವರು ಸಂಜೆಗೆ ಹಿಂತಿರುಗುವರು; ನಾಯಿಯ ಹಾಗೆ ಬೊಗಳುವರು; ಪಟ್ಟಣವನ್ನು ಸುತ್ತುವರು.
ಸೈನ್ಯಗಳ ಕರ್ತನು ಹೇಳುವದೇನಂದರೆ--ನನ್ನ ಒಡಂಬಡಿಕೆ ಲೇವಿಯ ಸಂಗಡ ಇರುವ ಹಾಗೆ ಈ ಆಜ್ಞೆಯನ್ನು ನಿಮಗೆ ಕಳುಹಿಸಿದ್ದೇನೆಂದು ತಿಳುಕೊಳ್ಳುವಿರಿ.
ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ; ಅನೇಕರನ್ನು ನ್ಯಾಯಪ್ರಮಾಣಕ್ಕೆ ಎಡವುವಂತೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಕೆಡಿಸಿದ್ದೀರೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬನೇ ದೇವರು ಸೃಷ್ಟಿಸಿದನಲ್ಲವೋ? ಯಾಕೆ ಪ್ರತಿ ಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಿಂದ ನಡೆದು ನಮ್ಮ ತಂದೆಗಳ ಒಡಂಬಡಿಕೆ ಯನ್ನು ಅಪವಿತ್ರ ಮಾಡುತ್ತೇವೆ?
ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿ ಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.