ಹೊರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯ ನಾಗಿರುವ ದಾಸನಾದ ಟೋಬೀಯನೂ ಕೇಳಿದಾಗ ಇಸ್ರಾಯೇಲ್ ಮಕ್ಕಳ ಮೇಲನ್ನು ಹುಡುಕಲು ಒಬ್ಬ ಮನುಷ್ಯನು ಬಂದದ್ದರಿಂದ ಅವರು ಬಹಳವಾಗಿ ವ್ಯಸನಪಟ್ಟರು.
Cross references
ಆ ಜನರು ಬಹುಮಂದಿಯಾದದರಿಂದ ಮೋವಾಬಿನವರು ಅವರಿಗೆ ಬಹಳವಾಗಿ ಅಂಜಿದರು; ಮೋವಾಬಿ ನವರು ಇಸ್ರಾಯೇಲ್ ಮಕ್ಕಳನ್ನು ಕಂಡು ದಿಗಿಲು ಪಟ್ಟರು.
ಆದದರಿಂದ ಆ ದೇಶದ ಜನರು ಯೆಹೂದ ಜನರ ಕೈಗಳನ್ನು ಬಲಹೀನ ಮಾಡಿ ಕಟ್ಟು ವದರಲ್ಲಿ ಅವರನ್ನು ಕಳವಳಪಡಿಸಿದರು.
ಆದರೆ ಹೋರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯನ ದಾಸನಾದ ಟೋಬೀಯನೂ ಅರಬಿ ಯನಾದ ಗೆಷೆಮನೂ ಇದನ್ನು ಕೇಳಿದಾಗ ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ--ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರಿಗಿ ಬೀಳುವಿರೋ ಅಂದರು.ಆಗ ನಾನು ಅವರಿಗೆ ಪ್ರತ್ಯುತ್ತರವಾಗಿ--ಪರಲೋಕದ ದೇವರು ನಮಗೆ ಸಫಲ ಮಾಡುವನು; ಆತನ ಸೇವಕರಾದ ನಾವು ಎದ್ದು ಕಟ್ಟುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಪಾಲಾದರೂ ಹಕ್ಕಾದರೂ ಜ್ಞಾಪಕಾರ್ಥವಾದ ಗುರುತಾದರೂ ಇಲ್ಲವೆಂದು ಹೇಳಿದನು.
ಆದರೆ ನಾವು ಗೋಡೆಯನ್ನು ಕಟ್ಟುವವರ್ತಮಾನ ಸನ್ಬಲ್ಲಟನು ಕೇಳಿದಾಗ ಏನಾ ಯಿತಂದರೆ, ಅವನು ಕೋಪಗೊಂಡು ಬಹಳ ಕೋಪ ದಿಂದ ರೇಗುತ್ತಾ ಯೆಹೂದ್ಯರಿಗೆ ಗೇಲಿ ಮಾಡಿ ತನ್ನ ಸಹೋದರರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ--
ಯೆರೂಸಲೇಮಿನ ಗೋಡೆಗಳು ಕಟ್ಟಲ್ಪ ಟ್ಟವೆಂದೂ ಅದರ ಸಂದುಗಳು ಮುಚ್ಚಲ್ಪಟ್ಟವೆಂದೂ ಸನ್ಬಲ್ಲಟನು ಟೋಬೀಯನೂ ಅರಬಿಯರೂ ಅಮ್ಮೋ ನ್ಯರೂ ಅಷ್ಡೋದ್ಯರೂ ಕೇಳಿದಾಗ ಏನಾಯಿತಂದರೆ
ನಾನು ಕದಗಳನ್ನು ಬಾಗಲುದ್ವಾರಗಳಲ್ಲಿ ನಿಲ್ಲಿಸುವದಕ್ಕಿಂತ ಮುಂಚೆ ಗೋಡೆಯನ್ನು ಕಟ್ಟಿಸಿದೆನೆಂದೂ ಅದರಲ್ಲಿ ಒಂದು ಸಂದೂ ಬಿಡಲ್ಪಡ ಲಿಲ್ಲವೆಂದೂ ಸನ್ಬಲ್ಲಟನೂ ಟೋಬೀಯನೂ ಅರಬ್ಯ ನಾದ ಗೆಷೆಮನೂ ಮಿಕ್ಕಾದ ನಮ್ಮ ಶತ್ರುಗಳೂ ಕೇಳಿದಾಗ
ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು.
ಇದಕ್ಕೆ ಮುಂಚೆ ನಮ್ಮ ದೇವರ ಆಲಯದ ಉಗ್ರಾಣದ ಮೇಲೆ ಇಡಲ್ಪಟ್ಟ ವಿಚಾರಕನಾದ ಎಲ್ಯಾಷೀಬನೆಂಬ ಯಾಜಕನು ಟೋಬೀಯನ ಸಂಗಡ ಬಂಧುತ್ವವನ್ನು ಮಾಡಿದ್ದು
ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.
ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. ಯೆರೂಸಲೇಮನ್ನು ಪ್ರೀತಿಮಾಡುವವರು ಅಭಿವೃದ್ಧಿ ಯಾಗುವರು.
ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?
ಆಳುವ ದಾಸನು, ಹೊಟ್ಟೆತುಂಬಿದ ನೀಚನು,
ನಾನು ಕುದುರೆಗಳ ಮೇಲೆ ಸೇವಕರನ್ನೂ ಮತ್ತು ಪ್ರಭುಗಳು ಸೇವಕರ ಹಾಗೆ ಭೂಮಿಯ ಮೇಲೆ ನಡೆಯುವದನ್ನೂ ನೋಡಿದ್ದೇನೆ.
ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.
ಇಗೋ, ನಾನು ನಿನ್ನ ಸುತ್ತಲಿರುವ ವರೆಲ್ಲರಿಂದ ನಿನ್ನ ಮೇಲೆ ಭಯವನ್ನು ಬರಮಾಡು ವೆನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ. ಆಗ ನಿಮ್ಮಲ್ಲಿ ಒಬ್ಬೊಬ್ಬನು ಮುಂದಕ್ಕೆ ಓಡಿಸಲ್ಪಡುವನು; ಅಲೆದಾಡುವವನನ್ನು ಕೂಡಿಸುವವನೂ ಒಬ್ಬನೂ ಇರುವದಿಲ್ಲ.
ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆವಿಾಯನಿಗೆ ಕರ್ತ ನಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು ಏನಂದರೆ--
ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶವನ್ನು ಮನಃ ಪೂರ್ವಕವಾಗಿ ತಿರಸ್ಕರಿಸಿ ಅದರ ಆ ಸ್ಥಿತಿಗೆ ಸಂತೋಷ ಪಟ್ಟದ್ದರಿಂದ
ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು.
ಜನಾಂಗಗಳು ನೋಡಿ ತಮ್ಮ ತ್ರಾಣಕ್ಕೆಲ್ಲಾ ನಾಚಿಕೆ ಪಡುವರು; ತಮ್ಮ ಕೈಗಳನ್ನು ಬಾಯಿಯ ಮೇಲೆ ಇಡುವರು; ಅವರ ಕಿವಿಗಳು ಕಿವುಡಾಗಿ ಹೋಗುವವು.
ಯಾಕಂದರೆ ಯೇಸುವಿನ ಮೂಲಕ ಸತ್ತವರಿಗೆ ಪುನರುತ್ಥಾನವಾಗುವದೆಂದು ಅಪೊಸ್ತಲರು ಜನರಿಗೆ ಬೋಧಿಸಿ ಕಲಿಸುತ್ತಿದ್ದದರಿಂದ ಅವರು ಸಂತಾಪಪಟ್ಟಿದ್ದರು.
ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು.
ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ