ಆದರೆ ಮಿಚ್ಚದ ಅರ್ಧಪಾಲಿಗೆ ಅಧಿಪತಿಯಾದ ಕೊಲ್ಹೋಜೆಯ ಮಗನಾದ ಶಲ್ಲೂನನು ಬುಗ್ಗೆಯ ಬಾಗಲನ್ನು ಭದ್ರಪಡಿಸಿ ಮಾಳಿಗೆಯನ್ನು ಹಾಕಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಎಂಬ ಕೊಳದ ಗೋಡೆಯನ್ನು ದಾವೀದನ ಪಟ್ಟಣದಿಂದ ಇಳಿಯುವ ಮೆಟ್ಟಲುಗಳ ಮಟ್ಟಿಗೂ ಕಟ್ಟಿಸಿದನು.
Cross references
ಆಗ ಇಸ್ರಾಯೇಲ್ ಮಕ್ಕಳೆಲ್ಲರು ಹೊರಟು ಗಿಲ್ಯಾದು ಸಹಿತವಾಗಿ ದಾನ್ ಪಟ್ಟಣವು ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸಭೆಯು ಒಬ್ಬ ಮನುಷ್ಯನ ಹಾಗೆ ಮಿಚ್ಪೆಯಲ್ಲಿ ಕರ್ತನ ಮುಂದೆ ಕೂಡಿಕೊಂಡಿತು.
ಇಸ್ರಾ ಯೇಲ್ ಮಕ್ಕಳು ಮಿಚ್ಪೆಗೆ ಬಂದ ವರ್ತಮಾನವನ್ನು ಬೆನ್ಯಾವಿಾನನ ಮಕ್ಕಳು ಕೇಳಿದರು). ಆಗ ಇಸ್ರಾ ಯೇಲ್ ಮಕ್ಕಳು--ನೀವು ಮಾತನಾಡಿರಿ; ಆ ಕೆಟ್ಟತನವು ಹೇಗೆ ಆಯಿತು? ಅಂದರು.
ಆಗ ಅರಸನೂ ಅವನ ಜನರೂ ದೇಶದ ನಿವಾಸಿ ಗಳಾದ ಯೆಬೂಸಿಯರು ಒಳಗೆ ಯೆರೂಸಲೇಮಿಗೆ ಬಂದರು. ದಾವೀದನು ಇದರಲ್ಲಿ ಬರಲಾರನೆಂದು ಅವರು ನೆನಸಿ ದಾವೀದನಿಗೆ--ನೀನು ಕುರುಡರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು ನೀನು ಇಲ್ಲಿಗೆ ಬರಲಾರಿ ಅಂದರು.
ಆದಾಗ್ಯೂ ದಾವೀದನು ಚೀಯೋನಿನ ಕೋಟೆಯನ್ನು ಹಿಡುಕೊಂಡನು. ಅದೇ ದಾವೀದನ ಪಟ್ಟಣವು.
ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು.
ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು.
ಈ ಹಿಜ್ಕೀಯನು ಗೀಹೋನೆಂಬ ಮೇಲಿನ ಕಾಲುವೆಯನ್ನು ಮುಚ್ಚಿಬಿಟ್ಟು ಅದನ್ನು ದಾವೀದನ ಪಟ್ಟಣದಲ್ಲಿ ಪಶ್ಚಿಮ ದಿಕ್ಕಿಗೆ ಕಾಲುವೆಯಾಗಿ ಬರಮಾಡಿದನು. ಹೀಗೆಯೇ ಹಿಜ್ಕೀಯನು ತನ್ನ ಸಮಸ್ತ ಕ್ರಿಯೆಗಳಲ್ಲಿ ವೃದ್ಧಿಹೊಂದಿ ದನು.
ಆಗ ಬುಗ್ಗೆಯ ಬಾಗಲಿಗೂ ಅರಸನ ಕೊಳಕ್ಕೂ ಹಾದು ಬಂದೆನು. ಆದರೆ ನಾನು ಹತ್ತಿದ ಪಶುವು ಹೋಗುವದಕ್ಕೆ ಸ್ಥಳವಿಲ್ಲದೆ ಇತ್ತು.
ಇವರ ತರುವಾಯ ಗಿಬ್ಯೋನು ಮಿಚ್ಛೆ ಎಂಬ ಊರುಗಳ ಮನುಷ್ಯರಾದ ಗಿಬ್ಯೋನಿಯನಾದ ಮೆಲೆಟ್ಯನೂ ಮೇರೋನೋತಿನವನಾದ ಯಾದೋನನೂ ನದಿಯ ಈಚೆಯಲ್ಲಿರುವ ಅಧಿಪತಿಯ ಪೀಠದ ವರೆಗೂ ಭದ್ರ ಪಡಿಸಿದರು.
ಇವರ ತರುವಾಯ ಯೆರೂ ಸಲೇಮಿನ ಅರ್ಧಕ್ಕೆ ಅಧಿಪತಿಯಾದ ಹೂರನ ಮಗ ನಾದ ರೆಫಾಯನು ಭದ್ರಪಡಿಸಿದನು.
ಇವರ ತರುವಾಯ ಯೆರೂಸ ಲೇಮಿನ ಅರ್ಧಕ್ಕೆ ಅಧಿಪತಿಯಾದ ಹಲ್ಲೊಹೇಷನ ಮಗನಾದ ಶಲ್ಲೂಮನೂ ಅವನ ಕುಮಾರ್ತೆಯರೂ ಭದ್ರಪಡಿಸಿದರು.
ಆದರೆ ಬೆತ್ಹಕ್ಕೆರೆಮಿನ ಅರ್ಧಪಾಲಿಗೆ ಅಧಿಪತಿ ಯಾಗಿರುವ ರೆಕಾಬನ ಮಗನಾದ ಮಲ್ಕೀಯನು ತಿಪ್ಪೆ ಬಾಗಲನ್ನು ಭದ್ರಪಡಿಸಿದನು; ಇವನು ಅದನ್ನು ಕಟ್ಟಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದನು.
ತಮಗೆ ಎದುರಾದ ಬಾವಿಯ ಬಾಗಲಿಗೆ ಬಂದಾಗ ಗೋಡೆಯಲ್ಲಿ ಎತ್ತರವಾದ ದಾವೀದನ ಪಟ್ಟಣದ ಮೆಟ್ಟಲುಗಳಿಂದ ದಾವೀದನ ಮನೆಯ ಮೇಲೆ ಮೂಡಣದ ಕಡೆಗಿರುವ ನೀರಿನ ಬಾಗಲಿಗೆ ಹೋದರು.
ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ ರೆಚೀನಿನಲ್ಲಿಯೂ ರೆಮಲ್ಯನ ಮಗನಲ್ಲಿಯೂ ಮೆರೆದಿದ್ದರಿಂದ
ಆಗ ನೆತನ್ಯನ ಮಗನಾದ ಇಷ್ಮಾಯೇಲನು ಮಿಚ್ಪದಿಂದ ಹೊರಟು, ಅಳುತ್ತಲೇ ಅವರ ಎದುರಿಗೆ ಹೋದನು; ಅವರನ್ನು ಎದುರುಗೊಂಡ ಮೇಲೆ ಅವರಿಗೆ--ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಬನ್ನಿ ಅಂದನು.
ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ?
ಅವನಿಗೆ--ಹೋಗು, ಸಿಲೋವ ಕೊಳ ದಲ್ಲಿ ತೊಳೆದುಕೋ(ಸಿಲೋವ ಅಂದರೆ ಕಳುಹಿಸಲ್ಪಟ್ಟ ವನು ಎಂದರ್ಥ) ಅಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.