ನಾನು ನೋಡಿದ ತರುವಾಯ ಎದ್ದು ಶ್ರೇಷ್ಠರಿಗೂ ಅಧಿಕಾರ ಸ್ಥರಿಗೂ ಇತರ ಜನರಿಗೂ--ನೀವು ಅವರಿಗೋಸ್ಕರ ಭಯಪಡಬೇಡಿರಿ; ದೊಡ್ಡವನಾಗಿಯೂ ಭಯಂಕರ ನಾಗಿಯೂ ಇರುವ ಕರ್ತನನ್ನು ಜ್ಞಾಪಕಮಾಡಿ ಕೊಂಡು ನಿಮ್ಮ ಸಹೋದರರಿಗೋಸ್ಕರ, ಕುಮಾರ, ಕುಮಾರ್ತೆಯರಿಗೋಸ್ಕರ, ಹೆಂಡತಿಯರಿಗೋಸ್ಕರ, ನಿಮ್ಮ ಮನೆಗಳಿಗೋಸ್ಕರ ಯುದ್ಧಮಾಡಿರಿ ಅಂದೆನು.
Cross references
ಕರ್ತನು ನಿಮ ಗೋಸ್ಕರ ಯುದ್ಧಮಾಡುವನು; ಆದರೆ ನೀವು ಸಮಾಧಾನವಾಗಿರ್ರಿ ಅಂದನು.
ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಕಷ್ಟದಿಂದ ಹೋಗು ವಂತೆ ಮಾಡಿದನು. ಆಗ--ಇಸ್ರಾಯೇಲಿನ ಎದುರಿ ನಿಂದ ಓಡಿಹೋಗೋಣ. ಯಾಕಂದರೆ ಕರ್ತನು ಐಗುಪ್ತ್ಯರಿಗೆ ವಿರೋಧವಾಗಿ ಅವರಿಗೋಸ್ಕರ ಯುದ್ಧ ಮಾಡುತ್ತಾನೆಂದು ಹೇಳಿಕೊಂಡರು.
ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.
ಇಗೋ, ನಿನ್ನ ದೇವರಾದ ಕರ್ತನು ದೇಶವನ್ನು ನಿನ್ನ ಮುಂದೆ ಇಟ್ಟಿದ್ದಾನೆ; ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ಹೋಗಿ ಅದನ್ನು ಸ್ವಾಧೀನಪಡಿಸಿಕೋ; ಭಯಪಡಬೇಡ, ಧೈರ್ಯಗೆಡಬೇಡ ಅಂದೆನು.
ಆಗ ನಾನು ನಿಮಗೆ--ಅಂಜಬೇಡಿರಿ; ಅವರಿಗೆ ಭಯಪಡಬೇಡಿರಿ.
ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.
ಓ ಇಸ್ರಾಯೇಲೇ ಕೇಳು, ನೀವು ಈಹೊತ್ತು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಸವಿಾಪ ಬಂದಿದ್ದೀರಿ; ನಿಮ್ಮ ಹೃದಯಗಳು ಬಳಲಬಾರದು; ನೀವು ಭಯಪಡಬೇಡಿರಿ, ನಡುಗಬೇಡಿರಿ, ಅವರಿಗೆ ಹೆದರಲೂಬೇಡಿರಿ ;
ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
ಅವನು ಅಲ್ಲಿ ಬಂದಾಗ ಎಫ್ರಾಯಾಮಿನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲ್ ಮಕ್ಕಳು ಅವನ ಸಂಗಡ ಬೆಟ್ಟದಿಂದ ಇಳಿದರು; ಅವನು ಇವರ ಮುಂದೆ ನಡೆದು
ಬಲವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲಗೊ ಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು.
ಆಗ ಅವನುಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿ ಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಕರ್ತನು ನಿಮಗೆ ಹೀಗೆ ಹೇಳುತ್ತಾನೆ--ಈ ಮಹಾಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರ ಬೇಡಿರಿ. ಯಾಕಂದರೆ ಯುದ್ಧವು ನಿಮ್ಮದಲ್ಲ, ದೇವ ರದೇ.
ಬಲಗೊಳ್ಳಿರಿ; ಧೈರ್ಯ ವಾಗಿರ್ರಿ; ಅಶ್ಶೂರಿನ ಅರಸನ ನಿಮಿತ್ತವೂ ಅವನ ಸಂಗಡ ಕೂಡಿರುವ ಮಹಾಗುಂಪಿನ ನಿಮಿತ್ತವೂ ಭಯ ಪಡಬೇಡಿರಿ; ಹೆದರಬೇಡಿರಿ. ಯಾಕಂದರೆ ಅವನ ಸಂಗಡ ಇರುವವರಿಗಿಂತ ನಮ್ಮ ಸಂಗಡ ಅನೇಕರು ಇದ್ದಾರೆ.
ಓ ಪರಲೋ ಕದ ದೇವರಾದ ಕರ್ತನೇ, ನಿನ್ನನ್ನು ಪ್ರೀತಿಮಾಡಿ ನಿನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವವನಾದ ಮತ್ತು ಭಯಂಕರವುಳ್ಳ ದೇವರೇ,
ಉತ್ತರದಿಂದ ಉತ್ತಮ ಹವಾಮಾನ ಬರುತ್ತದೆ; ದೇವರ ಬಳಿಯಲ್ಲಿ ಭಯಂಕರವಾದ ಘನ ಉಂಟು.
ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ.
ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ನಮ್ಮ ರಕ್ಷಣೆಯ ಓ ದೇವರೇ, ಭಯಂಕರವಾದ ವುಗಳಿಂದ ನೀತಿಯಲ್ಲಿ ನೀನು ನಮಗೆ ಉತ್ತರ ಕೊಡುವಿ; ಭೂಮಿಯ ಎಲ್ಲಾ ಅಂತ್ಯಗಳಿಗೂ ಸಮುದ್ರ ದಲ್ಲಿ ದೂರವಾದವರಿಗೂ ನೀನು ಭರವಸವಾಗಿದ್ದೀ.
ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು;
ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಮನುಷ್ಯರ ಮಕ್ಕಳ ಕಡೆಗೆ ಆತನು ತನ್ನ ಕಾರ್ಯಗಳಲ್ಲಿ ಭಯಂಕರನಾಗಿದ್ದಾನೆ.
ಇದೇ ನನ್ನ ಬಲಹೀನತೆ ಎಂದು ನಾನು ಅಂದುಕೊಂಡೆನು. ಮಹೋನ್ನತನ ಬಲಗೈಯ ವರ್ಷ ಗಳನ್ನು ಜ್ಞಾಪಕಮಾಡಿಕೊಳ್ಳುವೆನು;
ಪೂರ್ವಕಾಲದ ದಿವಸಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಎಲ್ಲಾ ಕ್ರಿಯೆಗಳಲ್ಲಿ ಧ್ಯಾನಮಾಡಿ, ನಿನ್ನ ಕೈಗಳ ಕೆಲಸವನ್ನು ಆಲೋಚಿಸುತ್ತೇನೆ.
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?
ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?
ಆಹಾ, ನೀನು ಆಕಾಶಗಳನ್ನು ಹರಿದು ಬಿಟ್ಟು, ಇಳಿದು ಬಂದಿದ್ದರೆ ಎಷ್ಟೋ ಚೆನ್ನಾ ಗಿತ್ತು! ಬಾ! ಬೆಟ್ಟಗಳು ನಿನ್ನ ಸಮ್ಮುಖದಲ್ಲಿ ಕರಗಲಿ! ಜನಾಂಗಗಳು ನಿನ್ನ ಸಮ್ಮುಖದಲ್ಲಿ ನಡುಗುವ ಹಾಗೆ,
ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆ ಯುವವರನ್ನು ವ್ಯರ್ಥವಾದ ಮಾತುಗಳಿಂದ ಕೆಡಿ ಸುವನು; ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಕೃತಾರ್ಥರಾಗುವರು.
ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
ಆಗ ಕರ್ತನು ಹೊರಟು ಯುದ್ಧದ ದಿನದಲ್ಲಿ ಕಾದಾಟಮಾಡಿದ ಪ್ರಕಾರವೇ ಆ ಜನಾಂಗಗಳ ಸಂಗಡ ಆತನು ಕಾದಾಟ ಮಾಡುವನು.
ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
(ಯಾಕಂದರೆ ಯಾವ ಮೃಗವಾ ದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲ ಬೇಕು, ಇಲ್ಲವೆ ಈಟಿಯಿಂದ ತಿವಿಯಬೇಕೆಂದು ಅವರು ಆಜ್ಞಾಪಿಸಿದ್ದನ್ನು ತಾಳಲಾರದೆ ಇದ್ದರು.
ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.