ಯೆರೂಸಲೇಮಿನ ಗೋಡೆಗಳು ಕಟ್ಟಲ್ಪ ಟ್ಟವೆಂದೂ ಅದರ ಸಂದುಗಳು ಮುಚ್ಚಲ್ಪಟ್ಟವೆಂದೂ ಸನ್ಬಲ್ಲಟನು ಟೋಬೀಯನೂ ಅರಬಿಯರೂ ಅಮ್ಮೋ ನ್ಯರೂ ಅಷ್ಡೋದ್ಯರೂ ಕೇಳಿದಾಗ ಏನಾಯಿತಂದರೆ
Cross references
ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
ಆಗ ಕರ್ತನು ಇಸ್ರಾಯೇಲಿಗೆ ವಿರೋಧವಾಗಿ ಕೋಪಗೊಂಡು ಅವ ರನ್ನು ಫಿಲಿಷ್ಟಿಯರ ಕೈಗೂ ಅಮ್ಮೋನನ ಮಕ್ಕಳ ಕೈಗೂ ಮಾರಿಬಿಟ್ಟನು.
ಅವನು ಅಮ್ಮೋನನ ಮಕ್ಕಳ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನೀನು ನನಗೆ ವಿರೋಧವಾಗಿ ನನ್ನ ಸಂಗಡ ಯುದ್ಧಮಾಡುವದಕ್ಕೆ ನನ್ನ ದೇಶದಲ್ಲಿ ಬರುವ ಕಾರಣವೇನು.
ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು.
ಅಮ್ಮೋನ್ಯನಾದ ನಾಹಾಷನು ಅವರಿಗೆ--ಇಸ್ರಾಯೇ ಲ್ಯರನ್ನು ಅವಮಾನ ಪಡಿಸುವದಕ್ಕಾಗಿ ನಿಮ್ಮೆಲ್ಲರ ಬಲ ಕಣ್ಣುಗಳನ್ನು ಕಿತ್ತುಹಾಕಿ ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ ಅಂದನು.
ಇದರ ತರುವಾಯ ಏನಾಯಿತಂದರೆ, ಅಮ್ಮೋನನ ಮಕ್ಕಳ ಅರಸನು ಸತ್ತನು; ಅವನ ಮಗನಾದ ಹಾನೂನನು ಅವನಿಗೆ ಬದಲಾಗಿ ಅರಸನಾದನು.
ಆದರೆ ಕರ್ತನು ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನ್ಯರ ಗುಂಪುಗಳನ್ನೂ ಅವನ ಮೇಲೆ ಕಳುಹಿಸಿದನು. ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ ಯೆಹೂದವನ್ನು ನಾಶ ಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು.
ಇದರ ತರುವಾಯ ಏನಾಯಿತಂದರೆ, ಮೋವಾಬಿನ ಮಕ್ಕಳೂ ಅಮ್ಮೋನಿನ ಮಕ್ಕಳೂ ಅಮ್ಮೋನ್ಯರ ಕೊಡ ಇತರರೂ ಯೆಹೋ ಷಾಫಾಟನ ಮೇಲೆ ಯುದ್ಧಮಾಡಲು ಬಂದರು.
ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ ಗತ್ ಗೋಡೆಯನ್ನೂ ಯಬ್ನೆಯ ಗೋಡೆಯನ್ನೂ ಅಷ್ಡೋದಿನ ಗೋಡೆಯನ್ನೂ ಕೆಡವಿ ಬಿಟ್ಟು ಫಿಲಿಷ್ಟಿಯರ ಮಧ್ಯದಲ್ಲಿ ಅಷ್ಡೋ ದಿನ ಬಳಿಯಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
ಆದದರಿಂದ ಆ ದೇಶದ ಜನರು ಯೆಹೂದ ಜನರ ಕೈಗಳನ್ನು ಬಲಹೀನ ಮಾಡಿ ಕಟ್ಟು ವದರಲ್ಲಿ ಅವರನ್ನು ಕಳವಳಪಡಿಸಿದರು.
ಅರಸನಾದ ದಾರ್ಯಾವೆಷನಿಗೆ ಸಮಸ್ತ ಸಮಾ ಧಾನವು. ಅರಸನಿಗೆ ತಿಳಿಯಬೇಕಾದದ್ದೇನಂದರೆ--ನಾವು ಯೆಹೂದ್ಯರ ದೇಶದಲ್ಲಿರುವ ಮಹಾದೇವರ ಆಲಯಕ್ಕೆ ಹೋದೆವು; ಅದು ದೊಡ್ಡ ಕಲ್ಲುಗಳಿಂದ ಕಟ್ಟಲ್ಪಟ್ಟಿದೆ; ಗೋಡೆಗಳ ಮೇಲೆ ತೊಲೆಗಳು ಹೊದಿಸ ಲ್ಪಟ್ಟಿವೆ; ಆ ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಲ್ಲಿ ವೃದ್ಧಿಯಾಗುತ್ತದೆ.
ಹೊರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯ ನಾಗಿರುವ ದಾಸನಾದ ಟೋಬೀಯನೂ ಕೇಳಿದಾಗ ಇಸ್ರಾಯೇಲ್ ಮಕ್ಕಳ ಮೇಲನ್ನು ಹುಡುಕಲು ಒಬ್ಬ ಮನುಷ್ಯನು ಬಂದದ್ದರಿಂದ ಅವರು ಬಹಳವಾಗಿ ವ್ಯಸನಪಟ್ಟರು.
ಆದರೆ ಹೋರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯನ ದಾಸನಾದ ಟೋಬೀಯನೂ ಅರಬಿ ಯನಾದ ಗೆಷೆಮನೂ ಇದನ್ನು ಕೇಳಿದಾಗ ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ--ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರಿಗಿ ಬೀಳುವಿರೋ ಅಂದರು.ಆಗ ನಾನು ಅವರಿಗೆ ಪ್ರತ್ಯುತ್ತರವಾಗಿ--ಪರಲೋಕದ ದೇವರು ನಮಗೆ ಸಫಲ ಮಾಡುವನು; ಆತನ ಸೇವಕರಾದ ನಾವು ಎದ್ದು ಕಟ್ಟುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಪಾಲಾದರೂ ಹಕ್ಕಾದರೂ ಜ್ಞಾಪಕಾರ್ಥವಾದ ಗುರುತಾದರೂ ಇಲ್ಲವೆಂದು ಹೇಳಿದನು.
ಆದರೆ ನಾವು ಗೋಡೆಯನ್ನು ಕಟ್ಟುವವರ್ತಮಾನ ಸನ್ಬಲ್ಲಟನು ಕೇಳಿದಾಗ ಏನಾ ಯಿತಂದರೆ, ಅವನು ಕೋಪಗೊಂಡು ಬಹಳ ಕೋಪ ದಿಂದ ರೇಗುತ್ತಾ ಯೆಹೂದ್ಯರಿಗೆ ಗೇಲಿ ಮಾಡಿ ತನ್ನ ಸಹೋದರರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ--
ಆ ದಿವಸಗಳಲ್ಲಿ ಅಮ್ಮೋನು ಮೋವಾಬು ಅಷ್ಡೋದು ಎಂಬ ದೇಶಗಳ ಸ್ತ್ರೀಯರನ್ನು ಮದುವೆ ಮಾಡಿಕೊಂಡ ಯೆಹೂದ್ಯರನ್ನು ಕಂಡೆನು.
ಇದಲ್ಲದೆ ಕಿರ್ಯತ್ಯಾರೀಮಿನವನಾದ ಶೆಮಾ ಯನ ಮಗನಾದ ಊರೀಯನೆಂಬವನು ಸಹ ಕರ್ತನ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆವಿಾಯನ ಎಲ್ಲಾ ಮಾತುಗಳ ಪ್ರಕಾರ ಈ ಪಟ್ಟಣಕ್ಕೂ ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು.
ಅಮ್ಮೋನನ ಕುಮಾರರಿಗೆ ಹೇಳು, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಹೇಳುವದೇನಂದರೆ --ನೀನು ನನ್ನ ಪರಿಶುದ್ದಸ್ಥಳವನ್ನು ಅಪವಿತ್ರಪಡಿಸಿದಾ ಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ಅಹಾ, ಅಂದವಾದದರಿಂದ ನಿನ್ನನ್ನು ಹೆಚ್ಚಿಸಿಕೊಂಡದ್ದ ರಿಂದ
ಅಷ್ಡೋ ದಿನಿಂದ ನಿವಾಸಿಯನ್ನು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ಕಡಿದುಬಿಟ್ಟು ನಾನು ಎಕ್ರೋನಿಗೆ ವಿರೋಧವಾಗಿ ನನ್ನ ಕೈಯನ್ನು ತಿರುಗಿಸುತ್ತೇನೆ. ಉಳಿದ ಫಿಲಿಪ್ಪಿಯರು ನಾಶವಾಗುವರೆಂದು ಕರ್ತನಾದ ದೇವರು ಹೇಳುತ್ತಾನೆ.
ಕರ್ತನು ಹೀಗೆ ಹೇಳುತ್ತಾನೆ--ಅಮ್ಮೋನಿನ ಮಕ್ಕಳ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ವಾಗಿ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವ ದಿಲ್ಲ; ತಮ್ಮ ಮೇರೆಯನ್ನು ವಿಸ್ತಾರ ಮಾಡುವದಕ್ಕಾಗಿ ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿದ್ದಾರೆ.
ಅಷ್ಡೋದಿನ ಅರಮನೆಗಳಲ್ಲಿ ಐಗುಪ್ತದೇಶದ ಅರಮನೆಗಳಲ್ಲಿ ಹೀಗೆ ಸಾರಿ ಹೇಳಿರಿ--ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರ ಮಧ್ಯ ದಲ್ಲಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.
ಅಷ್ಕಲೋನು ನೋಡಿ ಭಯಪಡುವದು; ಗಾಜ ಸಹ ಅದನ್ನು ನೋಡಿ ಬಹಳವಾಗಿ ವೇದನೆಪಡುವದು, ಎಕ್ರೋನು ಸಹ; ಅದರ ನಿರೀಕ್ಷೆಯು ಅದನ್ನು ನಾಚಿಕೆ ಪಡಿಸಿತು; ಗಾಜ ದೊಳಗಿಂದ ಅರಸನು ನಾಶವಾಗುವನು; ಅಷ್ಕೆಲೋನು ನಿವಾಸವಿಲ್ಲದೆ ಇರುವದು.
ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು
ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು.
ಆದದರಿಂದ ಪರಲೋಕಗಳೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಭೂಮಿಯ ಮೇಲೆ ಮತ್ತು ಸಮುದ್ರದಲ್ಲಿ ಇರುವವರಿಗೆ ಅಯ್ಯೊ! ಯಾಕಂದರೆ ಸೈತಾನನು ತನಗಿರುವ ಕಾಲವು ಸ್ವಲ್ಪವೆಂದು ತಿಳಿದು ಮಹಾರೌದ್ರವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ ಎಂಬದಾಗಿ ಹೇಳಿತು.
ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.