ಅವರೆಲ್ಲಾ ಬಹುಕೋಪಗೊಂಡು ಯೆರೂಸಲೇಮಿಗೆ ವಿರೋಧವಾಗಿ ಯುದ್ಧಮಾಡುವದಕ್ಕೂ ಅಭ್ಯಂತರಿಸು ವದಕ್ಕೂ ಬರಲು ಏಕವಾಗಿ ಒಳಸಂಚು ಮಾಡಿದರು.
Cross references
ಆಗ ನಾನು ನಿಮಗೆ--ಅಂಜಬೇಡಿರಿ; ಅವರಿಗೆ ಭಯಪಡಬೇಡಿರಿ.
ಬಲವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲಗೊ ಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು.
ಬಲಗೊಳ್ಳಿರಿ; ಧೈರ್ಯ ವಾಗಿರ್ರಿ; ಅಶ್ಶೂರಿನ ಅರಸನ ನಿಮಿತ್ತವೂ ಅವನ ಸಂಗಡ ಕೂಡಿರುವ ಮಹಾಗುಂಪಿನ ನಿಮಿತ್ತವೂ ಭಯ ಪಡಬೇಡಿರಿ; ಹೆದರಬೇಡಿರಿ. ಯಾಕಂದರೆ ಅವನ ಸಂಗಡ ಇರುವವರಿಗಿಂತ ನಮ್ಮ ಸಂಗಡ ಅನೇಕರು ಇದ್ದಾರೆ.
ಓ ಪರಲೋ ಕದ ದೇವರಾದ ಕರ್ತನೇ, ನಿನ್ನನ್ನು ಪ್ರೀತಿಮಾಡಿ ನಿನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವವನಾದ ಮತ್ತು ಭಯಂಕರವುಳ್ಳ ದೇವರೇ,
ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?
ನಿನ್ನ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿಯನ್ನು ಕಲ್ಪಿಸುತ್ತಾರೆ. ನೀನು ಅಡಗಿಸಿಟ್ಟವರಿಗೆ ವಿರೋಧಿಗಳು ಆಲೋಚಿಸಿಕೊಳ್ಳುತ್ತಾರೆ.
ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ.
ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.
ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.
ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು.