ನಾನು ಅವರಿಗೆನೀವು ಮಾಡುವುದು ಒಳ್ಳೇದಲ್ಲ; ನಮ್ಮ ಶತ್ರುಗಳಾದ ಅನ್ಯರ ನಿಂದೆಯ ನಿಮಿತ್ತ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲಾ.
Cross references
ಆಗ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.
ಅಬ್ರಹಾಮನು--ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ಅಂದುಕೊಂಡೆನು.
ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ--ಇದನ್ನು ಮಾಡಿ ಬದುಕಿರಿ, ಯಾಕಂದರೆ ನಾನು ದೇವರಿಗೆ ಭಯಪಡುವವನಾ ಗಿದ್ದೇನೆ.
ನೀನು ಅವನಿಂದ ಬಡ್ಡಿಯನ್ನಾಗಲಿ ಇಲ್ಲವೆ ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ಆದರೆ ನಿನ್ನ ಸಹೋದರನು ನಿನ್ನೊಂದಿಗೆ ಬದುಕುವಂತೆ ನಿನ್ನ ದೇವ ರಿಗೆ ಭಯಪಡು.
ನನ್ನ ಕುಮಾ ರರೇ, ಹಾಗೆ ಮಾಡಬೇಡಿರಿ; ಯಾಕಂದರೆ ನಾನು ಕೇಳುವ ವರ್ತಮಾನ ಒಳ್ಳೇದಲ್ಲ; ಕರ್ತನ ಜನರು ಆಜ್ಞೆವಿಾರಿ ನಡೆಯುವ ಹಾಗೆ ಮಾಡುತ್ತೀರಿ.
ಹೇಗಿ ದ್ದರೂ ಈ ಕಾರ್ಯದಿಂದ ನೀನು ಕರ್ತನ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ ನಿನಗೆ ಹುಟ್ಟಿದ ಮಗುವು ಸಹ ನಿಶ್ಚಯ ವಾಗಿ ಸಾಯುವದು ಅಂದನು.
ನಮ್ಮ ದೇವರೇ, ಕೇಳು; ಯಾಕಂದರೆ ನಾವು ತಿರಸ್ಕರಿಸಲ್ಪಟ್ಟವರಾಗಿದ್ದೇವೆ. ನೀನು ಅವರ ನಿಂದೆಯನ್ನು ಅವರ ತಲೆಗಳ ಮೇಲೆ ತಿರುಗುವಂತೆ ಮಾಡಿ ಸೆರೆಯ ದೇಶದಲ್ಲಿ ಅವರನ್ನು ಕೊಳ್ಳೆಯಾಗಿ ಒಪ್ಪಿಸು.
ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ.
ಬಲಾತ್ಕಾರಿಯು ನೆರೆಯವನನ್ನು ಮರುಳು ಗೊಳಿಸಿ ದುರ್ಮಾರ್ಗಕ್ಕೆ ನಡಿಸುತ್ತಾನೆ.
ನೀತಿವಂತನನ್ನು ಶಿಕ್ಷಿಸುವದು ಇಲ್ಲವೆ ಅಕ್ರಮಕ್ಕಾಗಿ ರಾಜಪುತ್ರರನ್ನು ಹೊಡೆಯುವದು ಯುಕ್ತವಲ್ಲ.
ನನ್ನ ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ ದುಷ್ಟ ರನ್ನು ಸ್ವೀಕರಿಸುವದು ಯುಕ್ತವಲ್ಲ.
ತಿಳುವಳಿಕೆಯಿಲ್ಲದ ಪ್ರಾಣವು ಯುಕ್ತವಲ್ಲ; ತನ್ನ ಪಾದಗಳಿಂದ ದುಡುಕುವ ವನು ಪಾಪಮಾಡುತ್ತಾನೆ.
ಇವು ಸಹ ಜ್ಞಾನಿಗಳಿಗೆ ಸಂಬಂಧಪಟ್ಟಿವೆ. ನ್ಯಾಯವಿಚಾರಣೆ ಯಲ್ಲಿ ಪಕ್ಷಪಾತವು ಸರಿಯಲ್ಲ.
ಅವರು ಆ ಅನ್ಯಜನಾಂಗಗಳೊಳಗೆ ಸೇರಿಕೊಂಡ ಮೇಲೆ--ಇವರೇ ಕರ್ತನ ಜನರು ಮತ್ತು ಇವರು ಆತನ ದೇಶದಿಂದ ಹೊರಟುಹೋದರು ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡುವರು.
ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
ಬರೆಯಲ್ಪಟ್ಟ ಪ್ರಕಾರ--ನಿಮ್ಮ ಮೂಲಕ ದೇವರ ಹೆಸರು ಅನ್ಯ ಜನಾಂಗಗಳಲ್ಲಿ ದೂಷಿಸಲ್ಪಡುತ್ತದೆ.
ಆದದರಿಂದ ಯೌವನಸ್ಥ ವಿಧವೆಯರು ಮದುವೆ ಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಕೆಲಸ ನಡಿಸುವದೇ ನನ್ನ ಅಪೇಕ್ಷೆ; ಹಾಗೆ ಮಾಡುವದ ರಿಂದ ವಿರೋಧಿಯ ನಿಂದೆಗೆ ಆಸ್ಪದಕೊಡದೆ ಇರುವರು.
ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು.
ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.