Home Bibles ನೆಹೆಮ್ಯ 6:11 · ಕನ್ನಡ ಬೈಬಲ್
ನೆಹೆಮ್ಯ 6:11 · ಕನ್ನಡ ಬೈಬಲ್

ಅದಕ್ಕೆ ನಾನು--ನನ್ನಂಥಾ ಮನು ಷ್ಯನು ಓಡಿಹೋಗುವನೋ? ನನ್ನಂಥವನು ಬದುಕ ಬೇಕೆಂದು ಮಂದಿರದೊಳಕ್ಕೆ ಹೋಗುವವನಾರು? ನಾನು ಒಳಗೆ ಹೋಗುವದಿಲ್ಲ ಅಂದೆನು.

Cross references

ಅಂಕೆಗಳ ಪುಸ್ತಕ 3:10

ಇದಲ್ಲದೆ ಆರೋನನನ್ನೂ ಅವನ ಕುಮಾರ ರನ್ನೂ ನೇಮಿಸಬೇಕು. ಅವರು ತಮ್ಮ ಯಾಜಕತ್ವವನ್ನು ನಡಿಸಲಿ. ಪರಕೀಯನು ಸವಿಾಪಿಸಿದರೆ ಸಾಯಬೇಕು.

ಅಂಕೆಗಳ ಪುಸ್ತಕ 32:7

ಕರ್ತನು ಅವ ರಿಗೆ ಕೊಟ್ಟ ದೇಶಕ್ಕೆ ಹೋಗುವದಕ್ಕೆ ನೀವು ಇಸ್ರಾ ಯೇಲ್‌ ಮಕ್ಕಳ ಹೃದಯಗಳನ್ನು ಅಧೈರ್ಯಪಡಿಸು ವದು ಯಾಕೆ?

1 ಸಮುವೇಲ 19:5

ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.

ನೆಹೆಮ್ಯ 6:3

ಆದ ಕಾರಣ ನಾನು ಅವರ ಬಳಿಗೆ ಸೇವಕರನ್ನೂ ಕಳು ಹಿಸಿ--ನಾನು ದೊಡ್ಡ ಕಾರ್ಯವನ್ನು ಮಾಡುತ್ತಾ ಇದ್ದೇನೆ; ಬರಲಾರೆನು; ನಾನು ಅದನ್ನು ಬಿಟ್ಟು ನಿಮ್ಮ ಬಳಿಗೆ ಬರುವಲ್ಲಿ ಆ ಕೆಲಸ ಯಾಕೆ ನಿಂತು ಹೋಗ ಬೇಕು ಎಂದು ಹೇಳಿದೆನು.

ನೆಹೆಮ್ಯ 6:9

ಯಾಕಂದರೆ--ಅದು ಆಗದ ಹಾಗೆ ಆ ಕೆಲಸ ಬಿಟ್ಟುಬಿಟ್ಟು ಅವರ ಕೈಗಳು ಬಲಹೀನವಾಗುವವು ಅಂದುಕೊಂಡು ಅವರೆಲ್ಲರೂ ನಮ್ಮನ್ನು ಭಯಪಡಿಸಿದರು.

ಯೋಬ 4:3

ಇಗೋ, ಅನೇಕರನ್ನು ಶಿಕ್ಷಿಸಿದಿ; ಬಲಹೀನವಾದ ಕೈಗಳನ್ನು ಬಲ ಪಡಿಸಿದಿ.

ಕೀರ್ತನೆಗಳು 11:1

ಕರ್ತನಲ್ಲಿ ನಾನು ಭರವಸವನ್ನು ಇಟ್ಟಿದ್ದೇನೆ; ಪಕ್ಷಿಯಂತೆ ನಿಮ್ಮ ಬೆಟ್ಟಕ್ಕೆ ಓಡು ಎಂದು ನನ್ನ ಪ್ರಾಣಕ್ಕೆ ನೀವು ಹೇಳುವದು ಹೇಗೆ?

ಕೀರ್ತನೆಗಳು 112:6

ನಿಶ್ಚಯವಾಗಿ ಅವನು ಎಂದೆಂದಿಗೂ ಕದಲನು; ನೀತಿವಂತನು ನಿತ್ಯವಾಗಿ ಜ್ಞಾಪಕದಲ್ಲಿ ಇರುವನು.

ಕೀರ್ತನೆಗಳು 112:8

ಅವನ ಹೃದಯವು ದೃಢವಾಗಿದೆ; ತನ್ನ ವೈರಿಗಳ ಮೇಲೆ ತನ್ನ ಇಷ್ಟವನ್ನು ನೋಡುವ ಮಟ್ಟಿಗೂ ಭಯಪಡನು.

ಸಾಮೇತಿಗಳು 28:1

ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.

ಸಭಾಪ್ರಸಂಗಿ 10:1

ಸತ್ತ ನೊಣಗಳು ವೈದ್ಯನ ತೈಲವನ್ನು ದುರ್ವಾಸನೆಗೊಳಿಸುತ್ತವೆ; ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮತ್ತು ಘನಗಳಿಗೆ ಪ್ರಿಯ ನಾದವನನ್ನು ಕೆಡಿಸುತ್ತದೆ.

ಯೆಶಾಯ 10:18

ಅದು ದೇಹ ಮತ್ತು ಆತ್ಮಗಳನ್ನೂ ಅವನವನ ಹಾಗೂ ಫಲವತ್ತಾದ ಹೊಲವು ಹೊಂದಿರುವ ಘನತೆಯನ್ನೂ ದಹಿಸಿಬಿಡುವದು; ಅದು ಮೂರ್ಛೆ ಹೋಗುವ ರೋಗಿಯಂತಿರುವದು.

ಲೂಕ 13:31

ಅದೇ ದಿನದಲ್ಲಿ ಫರಿಸಾಯರಲ್ಲಿ ಕೆಲವರು ಆತನ ಬಳಿಗೆ ಬಂದು--ನೀನು ಇಲ್ಲಿಂದ ಹೊರಟುಹೋಗು; ಯಾಕಂದರೆ ಹೆರೋದನು ನಿನ್ನನ್ನು ಕೊಲ್ಲುವನು ಎಂದು ಆತನಿಗೆ ಹೇಳಿದರು.

ಅಪೋಸ್ತಲರ ಕೃತ್ಯಗಳು 8:1

ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.

ಅಪೋಸ್ತಲರ ಕೃತ್ಯಗಳು 20:24

ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ

ಅಪೋಸ್ತಲರ ಕೃತ್ಯಗಳು 21:13

ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.

ಫಿಲಿಪ್ಪಿಯವರಿಗೆ 2:17

ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು.

ಫಿಲಿಪ್ಪಿಯವರಿಗೆ 2:30

ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.

ಹೆಬ್ರಿಯರಿಗೆ 11:27

ನಂಬಿಕೆ ಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತ ದೇಶವನ್ನು ತೊರೆದುಬಿಟ್ಟನು. ಯಾಕಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.

Interlinear

Choose Theme