ಅದಕ್ಕೆ ನಾನು--ನನ್ನಂಥಾ ಮನು ಷ್ಯನು ಓಡಿಹೋಗುವನೋ? ನನ್ನಂಥವನು ಬದುಕ ಬೇಕೆಂದು ಮಂದಿರದೊಳಕ್ಕೆ ಹೋಗುವವನಾರು? ನಾನು ಒಳಗೆ ಹೋಗುವದಿಲ್ಲ ಅಂದೆನು.
Cross references
ಇದಲ್ಲದೆ ಆರೋನನನ್ನೂ ಅವನ ಕುಮಾರ ರನ್ನೂ ನೇಮಿಸಬೇಕು. ಅವರು ತಮ್ಮ ಯಾಜಕತ್ವವನ್ನು ನಡಿಸಲಿ. ಪರಕೀಯನು ಸವಿಾಪಿಸಿದರೆ ಸಾಯಬೇಕು.
ಕರ್ತನು ಅವ ರಿಗೆ ಕೊಟ್ಟ ದೇಶಕ್ಕೆ ಹೋಗುವದಕ್ಕೆ ನೀವು ಇಸ್ರಾ ಯೇಲ್ ಮಕ್ಕಳ ಹೃದಯಗಳನ್ನು ಅಧೈರ್ಯಪಡಿಸು ವದು ಯಾಕೆ?
ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.
ಆದ ಕಾರಣ ನಾನು ಅವರ ಬಳಿಗೆ ಸೇವಕರನ್ನೂ ಕಳು ಹಿಸಿ--ನಾನು ದೊಡ್ಡ ಕಾರ್ಯವನ್ನು ಮಾಡುತ್ತಾ ಇದ್ದೇನೆ; ಬರಲಾರೆನು; ನಾನು ಅದನ್ನು ಬಿಟ್ಟು ನಿಮ್ಮ ಬಳಿಗೆ ಬರುವಲ್ಲಿ ಆ ಕೆಲಸ ಯಾಕೆ ನಿಂತು ಹೋಗ ಬೇಕು ಎಂದು ಹೇಳಿದೆನು.
ಯಾಕಂದರೆ--ಅದು ಆಗದ ಹಾಗೆ ಆ ಕೆಲಸ ಬಿಟ್ಟುಬಿಟ್ಟು ಅವರ ಕೈಗಳು ಬಲಹೀನವಾಗುವವು ಅಂದುಕೊಂಡು ಅವರೆಲ್ಲರೂ ನಮ್ಮನ್ನು ಭಯಪಡಿಸಿದರು.
ಇಗೋ, ಅನೇಕರನ್ನು ಶಿಕ್ಷಿಸಿದಿ; ಬಲಹೀನವಾದ ಕೈಗಳನ್ನು ಬಲ ಪಡಿಸಿದಿ.
ಕರ್ತನಲ್ಲಿ ನಾನು ಭರವಸವನ್ನು ಇಟ್ಟಿದ್ದೇನೆ; ಪಕ್ಷಿಯಂತೆ ನಿಮ್ಮ ಬೆಟ್ಟಕ್ಕೆ ಓಡು ಎಂದು ನನ್ನ ಪ್ರಾಣಕ್ಕೆ ನೀವು ಹೇಳುವದು ಹೇಗೆ?
ನಿಶ್ಚಯವಾಗಿ ಅವನು ಎಂದೆಂದಿಗೂ ಕದಲನು; ನೀತಿವಂತನು ನಿತ್ಯವಾಗಿ ಜ್ಞಾಪಕದಲ್ಲಿ ಇರುವನು.
ಅವನ ಹೃದಯವು ದೃಢವಾಗಿದೆ; ತನ್ನ ವೈರಿಗಳ ಮೇಲೆ ತನ್ನ ಇಷ್ಟವನ್ನು ನೋಡುವ ಮಟ್ಟಿಗೂ ಭಯಪಡನು.
ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.
ಸತ್ತ ನೊಣಗಳು ವೈದ್ಯನ ತೈಲವನ್ನು ದುರ್ವಾಸನೆಗೊಳಿಸುತ್ತವೆ; ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮತ್ತು ಘನಗಳಿಗೆ ಪ್ರಿಯ ನಾದವನನ್ನು ಕೆಡಿಸುತ್ತದೆ.
ಅದು ದೇಹ ಮತ್ತು ಆತ್ಮಗಳನ್ನೂ ಅವನವನ ಹಾಗೂ ಫಲವತ್ತಾದ ಹೊಲವು ಹೊಂದಿರುವ ಘನತೆಯನ್ನೂ ದಹಿಸಿಬಿಡುವದು; ಅದು ಮೂರ್ಛೆ ಹೋಗುವ ರೋಗಿಯಂತಿರುವದು.
ಅದೇ ದಿನದಲ್ಲಿ ಫರಿಸಾಯರಲ್ಲಿ ಕೆಲವರು ಆತನ ಬಳಿಗೆ ಬಂದು--ನೀನು ಇಲ್ಲಿಂದ ಹೊರಟುಹೋಗು; ಯಾಕಂದರೆ ಹೆರೋದನು ನಿನ್ನನ್ನು ಕೊಲ್ಲುವನು ಎಂದು ಆತನಿಗೆ ಹೇಳಿದರು.
ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.
ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು.
ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.
ನಂಬಿಕೆ ಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತ ದೇಶವನ್ನು ತೊರೆದುಬಿಟ್ಟನು. ಯಾಕಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.