ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.
Cross references
ನಿನ್ನ ದೇವರಾದ ಕರ್ತನು ನಿನಗೂ ನಿನ್ನ ಮನೆಗೂ ಕೊಡುವ ಎಲ್ಲಾ ಒಳ್ಳೆ ವಸ್ತುಗಳಲ್ಲಿ ನೀನೂ ಲೇವಿಯರೂ ನಿನ್ನ ಸಂಗಡ ಇರುವ ಪರವಾಸಿಯೂ ಸಂತೋಷಪಡಬೇಕು.
ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
ಮಹಿ ಮೆಯೂ ಪ್ರಭೆಯೂ ಆತನ ಮುಂದೆ ಅವೆ. ಬಲವೂ ಆನಂದವೂ ಆತನ ಸ್ಥಳದಲ್ಲಿ ಅವೆ.
ಆದಕಾರಣ ಗ್ರಾಮಗಳಲ್ಲಿಯೂ ಬೈಲು ಪ್ರಾಂತ್ಯಗಳ ಪಟ್ಟಣಗಳಲ್ಲಿಯೂ ವಾಸವಾಗಿ ರುವ ಯೆಹೂದ್ಯರು ಅಡಾರ್ ತಿಂಗಳ ಹದಿನಾಲ್ಕನೇ ದಿವಸವನ್ನು ಸಂತೋಷದ ದಿವಸವಾಗಿಯೂ ಹಬ್ಬದ ದಿವಸವಾಗಿಯೂ ಸುದಿನವಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸವಾಗಿಯೂ ಮಾಡಿದರು.
ಏನಂದರೆ, ಆ ದಿವಸಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಂದ ತಪ್ಪಿಸಿಕೊಂಡು ವಿಶ್ರಾಂತಿ ಹೊಂದಿದರು. ಆ ತಿಂಗಳು ದುಃಖದಿಂದ ಸಂತೋಷಕ್ಕೂ ಗೋಳಾಡುವಿಕೆಯಿಂದ ಸುದಿನಕ್ಕೂ ಅವರಿಗೆ ಬದಲಾಯಿತು. ಆದದರಿಂದ ಅವರು ಆ ದಿವಸಗಳನ್ನು ಹಬ್ಬದ ದಿವಸಗಳಾಗಿಯೂ ಸಂತೋಷದ ದಿವಸಗಳಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸಗಳಾಗಿಯೂ ಬಡವ ರಿಗೆ ದಾನಗಳನ್ನು ಕೊಡುವ ದಿವಸಗಳಾಗಿಯೂ ಮಾಡಬೇಕು ಎಂಬದು.
ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ,
ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು.
ಅವರ ಬಲದ ಮಹಿಮೆಯು ನೀನೇ ಮತ್ತು ನಿನ್ನ ಕಟಾಕ್ಷದಿಂದ ನಮ್ಮ ಕೊಂಬು ಉನ್ನತವಾಗುವದು.
ಇಸ್ರಾಯೇಲು ತನ್ನನ್ನು ಉಂಟುಮಾಡಿದಾತನಲ್ಲಿ ಸಂತೋಷಿಸಲಿ; ಚೀಯೋನಿನ ಮಕ್ಕಳು ತಮ್ಮ ಅರಸನಲ್ಲಿ ಉಲ್ಲಾಸಿಸಲಿ.
ಹರ್ಷ ಹೃದಯನು ಔಷಧದಂತೆ ಒಳ್ಳೇದು ಮಾಡುತ್ತಾನೆ; ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.
ತನ್ನ ಪ್ರಯಾಸದಲ್ಲಿ ತನ್ನ ಪ್ರಾಣವು ಸುಖವನ್ನು ಅನುಭವಿಸುವಂತೆ ಮಾಡುತ್ತಾ ತಿಂದು ಕುಡಿಯುವ ದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.
ಪ್ರತಿ ಯೊಬ್ಬನು ತಿಂದು, ಕುಡಿದು, ತನ್ನ ಎಲ್ಲಾ ಪ್ರಯಾಸದ ಮೇಲನ್ನು ಅನುಭವಿಸುವದು ದೇವರ ದಾನದಿಂದಲೇ.
ನಾನು ಕಂಡದ್ದನ್ನು ನೋಡು; ದೇವರು ತನಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ತಾನು ಕೈಕೊಂಡ ಪ್ರಯಾಸದ ಸುಖವನ್ನು ಅನುಭವಿಸಿ ತಿಂದು ಕುಡಿ ಯುವದು ಮನುಷ್ಯನಿಗೆ ಒಳ್ಳೆಯದೂ ಉಚಿತವಾದದ್ದೂ ಆಗಿದೆ; ಅದು ಅವನ ಪಾಲು.
ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.
ನಿನ್ನ ಭಾಗವನ್ನು ಏಳು ಮತ್ತು ಎಂಟು ಮಂದಿಗೆ ಸಹ ಕೊಡು; ಭೂಮಿಯ ಮೇಲೆ ಯಾವ ಕೇಡು ಬರುವದೋ ನಿನಗೆ ತಿಳಿಯದು.
ನನ್ನ ತೋಟಕ್ಕೆ ಬಂದೆನು, ನನ್ನ ಸಹೋದರಿಯೇ, ವಧುವೇ; ನನ್ನ ರಕ್ತಬೋಳ ವನ್ನೂ ನನ್ನ ಸುಗಂಧಗಳನ್ನೂ ಕೂಡಿಸಿದ್ದೇನೆ; ನನ್ನ ಜೇನು ಗೂಡನ್ನೂ ಜೇನು ತುಪ್ಪವನ್ನೂ ತಿಂದಿದ್ದೇನೆ; ನನ್ನ ದ್ರಾಕ್ಷಾರಸವನ್ನೂ ನನ್ನ ಹಾಲನ್ನೂ ಕುಡಿದಿದ್ದೇನೆ. ತಿನ್ನಿರಿ, ಓ ಸ್ನೇಹಿತರೇ; ಕುಡಿಯಿರಿ. ಹೌದು, ನನ್ನ ಪ್ರಿಯರೇ, ಸಮೃದ್ಧಿಯಾಗಿ ಕುಡಿಯಿರಿ.
ಅದನ್ನು ನನ್ನ ಬಾಯಲ್ಲಿ ಇಟ್ಟು--ಇಗೋ, ಇದು ನಿನ್ನ ತುಟಿಗೆ ತಗಲಿತು; ನಿನ್ನ ದೋಷವು ತೊಲಗಿ ನಿನ್ನ ಪಾಪವು ನೀಗಿ ಶುದ್ಧವಾಯಿತು ಎಂದು ಹೇಳಿದನು.
ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.
ಅರಣ್ಯವು ನಿರ್ಜನ ಪ್ರದೇಶವು ಆನಂದವಾಗಿರುವವು ಮರುಭೂಮಿಯು ಹರ್ಷಿಸಿ ಗುಲಾಬಿಯಂತೆ ಅರಳುವದು.
ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು.
ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.
ಆದರೆ ನಿಮಗೆ ಇರುವವುಗಳಲ್ಲಿ ನೀವು ದಾನಾಕೊಡಿರಿ; ಆಗ ಇಗೋ, ನಿಮಗೆ ಎಲ್ಲವು ಗಳು ಶುದ್ಧವಾಗಿರುವವು.
ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
ಈ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು.
ನಾನಾದರೋ ಶರೀರ ಸಂಬಂಧವಾದವು ಗಳಲ್ಲಿ ಭರವಸವಿಟ್ಟರೂ ಇಡಬಹುದು, ಬೇರೆ ಯಾವ ನಾದರೂ ಶರೀರ ಸಂಬಂಧವಾದವುಗಳಲ್ಲಿ ಭರವಸವಿಡ ಬಹುದೆಂದು ಯೋಚಿಸುವದಾದರೆ ನಾನು ಅವನಿ ಗಿಂತಲೂ ಹೆಚ್ಚಾಗಿ ಹಾಗೆ ಯೋಚಿಸಬಹುದು.
ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.