ಎಜ್ರನು ನ್ಯಾಯ ಪ್ರಮಾಣವನ್ನು ತಕ್ಕೊಂಡು ಬಂದು ನೀರಿನ ಬಾಗಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದ ವರೆಗೆ ಓದಿದನು. ಜನರೆ ಲ್ಲರೂ ನ್ಯಾಯಪ್ರಮಾಣಕ್ಕೆ ಕಿವಿಗೊಟ್ಟರು.
Cross references
ಇದಲ್ಲದೆ ಮೋಶೆಯು ಈ ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.
ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಇಸ್ರಾಯೇಲಿನ ಸಭೆಗೆಲ್ಲಾ ಅಂದರೆ ಸ್ತ್ರೀಯ ರಿಗೂ ಚಿಕ್ಕವರಿಗೂ ಅವರಲ್ಲಿ ಪರಿಚಯವಿರುವ ಅವರ ಪರಕೀಯರಿಗೂ ಓದಿದನು.
ಎಜ್ರನು ಮೊದಲನೇ ದಿವಸದಿಂದ ಕಡೇ ದಿವಸದವರೆಗೂ ದಿನ ದಿನವೂ ದೇವರ ನ್ಯಾಯ ಪ್ರಮಾಣದ ಪುಸ್ತಕವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೇ ದಿವಸದಲ್ಲಿ ಪದ್ಧತಿಯ ಪ್ರಕಾರ ಪರಿಶುದ್ಧ ಸಭೆಯು ಸೇರಿತ್ತು.
ಇವರು ತಮ್ಮ ಸಹೋದರರಾದ ತಮ್ಮ ಮುಖ್ಯಸ್ಥರ ಸಂಗಡ ಕೂಡಿಕೊಂಡು--ದೇವರ ಸೇವಕನಾದ ಮೋಶೆಯ ಕೈಯಿಂದ ಕೊಟ್ಟ ದೇವರ ನ್ಯಾಯಪ್ರಮಾಣದಲ್ಲಿ ನಡೆಯುತ್ತೇವೆಂದೂ ಕರ್ತ ನಾದ ನಮ್ಮ ದೇವರ ಆಜ್ಞೆಗಳನ್ನೂ ಆತನ ನ್ಯಾಯ ಗಳನ್ನೂ ಆತನ ಕಟ್ಟಳೆಗಳನ್ನೂ ಎಲ್ಲವನ್ನೂ ಕೈಕೊಂಡು ಮಾಡುತ್ತೇವೆಂದೂ;
ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು.
ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ತರುವಾಯ ಜನರು ಆತನ ಬೋಧನೆಗೆ ಆಶ್ಚರ್ಯ ಪಟ್ಟರು.ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
ಆದದರಿಂದ ದಾವೀದನು ತಾನೇ ಆತನನ್ನು ಕರ್ತ ನೆಂದು ಕರೆಯುವಾಗ ಆತನು ಅವನ ಮಗನಾಗುವದು ಹೇಗೆ ಎಂದು ಹೇಳಿದನು. ಸಾಮಾನ್ಯ ಜನರು ಸಂತೋ ಷದಿಂದ ಆತನ ಮಾತುಗಳನ್ನು ಕೇಳಿದರು.
ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಕ್ಕೆ ಹೋಗಿ ಓದುವದಕ್ಕಾಗಿ ಎದ್ದುನಿಂತನು.
ಆದದರಿಂದ ನೀವು ಕೇಳುವವುಗಳ ವಿಷಯದಲ್ಲಿ ಎಚ್ಚರಿಕೆ ತಂದುಕೊಳ್ಳಿರಿ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನಿಗೆ ತನಗೆ ಉಂಟೆಂದು ನೆನಸುವದನ್ನೂ ಅವನಿಂದ ತೆಗೆಯಲ್ಪ ಡುವದು ಎಂದು ಹೇಳಿದನು.
ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.
ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.
ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ
ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.
ವಾರದ ಮೊದಲನೆಯ ದಿವಸದಲ್ಲಿ ಶಿಷ್ಯರು ರೊಟ್ಟಿಮುರಿಯುವದಕ್ಕಾಗಿ ಕೂಡಿ ಬಂದಾಗ ಮರು ದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಪ್ರಸಂಗಿಸುತ್ತಾ ಮಧ್ಯರಾತ್ರಿಯ ವರೆಗೂ ಉಪದೇಶ ವನ್ನು ನಡಿಸಿದನು.
ಆಗ ಅವನು ಮತ್ತೆ ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹಾಗೆ ಹೊರಟು ಹೋದನು.
ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.
ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.
ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ.
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.