ಇದಲ್ಲದೆ ತಿರ್ಷತನಾದ ನೆಹೆವಿಾಯನೂ ಶಾಸ್ತ್ರಿ ಯೂ, ಯಾಜಕನೂ ಆದ ಎಜ್ರನೂ ಜನರನ್ನು ಬೋಧಿಸಿದ ಲೇವಿಯರೂ ಜನರೆಲ್ಲರಿಗೆ ಹೇಳಿದ್ದೇ ನಂದರೆ--ಈ ದಿನವು ನಿಮ್ಮ ದೇವರಾಗಿರುವ ಕರ್ತನಿಗೆ ಪರಿಶುದ್ಧವಾದದರಿಂದ ದುಃಖಿಸದೆ, ಅಳದೆ ಇರ್ರಿ. ಯಾಕಂದರೆ ಜನರೆಲ್ಲರು ನ್ಯಾಯಪ್ರಮಾಣದ ಮಾತು ಗಳನ್ನು ಕೇಳಿದಾಗ ಅತ್ತರು.
Cross references
ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ--ಏಳನೆಯ ತಿಂಗಳಿನ ಮೊದಲನೆಯ ದಿವಸ ದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥ ವಾದ ಸಬ್ಬತ್ತೂ ಪರಿಶುದ್ಧ ಸಭೆಯ ಕೂಟವೂ ಇರ ಬೇಕು.
ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿರಬೇಕು; ಕಷ್ಟಕರವಾದ ಕೆಲಸವನ್ನು ನೀವು ಮಾಡಬಾರದು; ಅದು ನಿಮಗೆ ತುತೂರಿಗಳನ್ನು ಊದುವ ದಿವಸ ವಾಗಿರುವದು.
ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.
ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು.
ಆ ಹಬ್ಬದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳಲ್ಲಿರುವ ಲೇವಿಯನೂ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ಸಂತೋಷಪಡಬೇಕು.
ದುಃಖದಲ್ಲಿರುವಾಗ ಅದರಲ್ಲಿ ತಿನ್ನಲಿಲ್ಲ, ಅದರಲ್ಲಿ ತಕ್ಕೊಂಡು ಅಶುದ್ಧವಾದದ್ದಕ್ಕೂ ಉಪಯೋಗಿಸಲಿಲ್ಲ. ಅದರಲ್ಲಿ ಸತ್ತವರಿಗೋಸ್ಕರ ಏನೂ ಕೊಡಲಿಲ್ಲ; ನನ್ನ ದೇವರಾದ ಕರ್ತನ ಮಾತನ್ನು ಕೇಳಿದ್ದೇನೆ; ನೀನು ನನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದೇನೆ.
ಅರಸನು ನ್ಯಾಯಪ್ರಮಾಣದ ಪುಸ್ತಕದ ಮಾತು ಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು.
ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ.ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
ಆತನನ್ನು ಬಿಟ್ಟುಬಿಟ್ಟರೆ ಆತನು ನಿಮ್ಮನ್ನು ಬಿಟ್ಟುಬಿಡುವನು ಅಂದನು. ಬಹುಕಾಲ ಇಸ್ರಾಯೇಲ್ಯರು ನಿಜವಾದ ದೇವರಿಲ್ಲದೆ ಬೋಧಿಸುವ ಯಾಜಕನಿಲ್ಲದೆ ನ್ಯಾಯಪ್ರಮಾಣವಿಲ್ಲದೆ ಇದ್ದರು.
ಇದಲ್ಲದೆ ಹಿಜ್ಕೀಯನು ಕರ್ತನ ಉತ್ತ ಮವಾದ ಬೋಧನೆಯನ್ನು ಬೋಧಿಸಿದ ಸಮಸ್ತ ಲೇವಿ ಯರಿಗೆ ಸಮಾಧಾನವಾಗಿ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳ ಪರ್ಯಂತರ ಭೋಜನ ಮಾಡುತ್ತಾ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅರಿಕೆಮಾಡುತ್ತಾ ಆಚರಿಸಿದ್ದರು.
ಅರಸನು ನ್ಯಾಯಪ್ರಮಾಣದ ವಾಕ್ಯಗಳನ್ನು ಕೇಳಿ ದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು.
ನೀವು ಹೋಗಿ ನನಗೋಸ್ಕ ರವೂ ಇಸ್ರಾಯೇಲಿನಲ್ಲಿಯೂ ಯೆಹೂದದಲ್ಲಿಯೂ ಉಳಿದವರಿಗೋಸ್ಕರವೂ ಸಿಕ್ಕಿದ ಪುಸ್ತಕದ ಮಾತು ಗಳನ್ನು ಕುರಿತು ಕರ್ತನನ್ನು ವಿಚಾರಿಸಿರಿ. ಯಾಕಂದರೆ ನಮ್ಮ ಪಿತೃಗಳು ಈ ಪುಸ್ತಕದಲ್ಲಿ ಬರೆದ ಎಲ್ಲಾದರ ಪ್ರಕಾರ ಮಾಡಲು ಕರ್ತನ ವಾಕ್ಯವನ್ನು ಕೈಕೊಳ್ಳದೆ ಇದ್ದದರಿಂದ ನಮ್ಮ ಮೇಲೆ ಸುರಿದ ಕರ್ತನ ಕೋಪವು ದೊಡ್ಡದಾಗಿದೆ ಎಂದು ಹೇಳಿದನು.
ಸಮಸ್ತ ಇಸ್ರಾಯೇಲ್ಯರಿಗೆ ಬೋಧಿಸತಕ್ಕ ವರೂ ಕರ್ತನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆಪರಿಶುದ್ಧವಾದ ಮಂಜೂಷವು ನಿಮ್ಮ ಭುಜಗಳ ಮೇಲೆ ಭಾರವಿಲ್ಲದ ಹಾಗೆ ನೀವು ಅದನ್ನು ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನು ಕಟ್ಟಿಸಿದ ಮನೆಯಲ್ಲಿ ಇರಿಸಿ ನಿಮ್ಮ ದೇವರಾದ ಕರ್ತನನ್ನೂ ಆತನ ಜನವಾದ ಇಸ್ರಾಯೇಲ್ಯರನ್ನೂ ಸೇವಿಸಿರಿ.
ಊರೀಮ್ ತುವ್ಮೆಾಮ್ ಇರುವ ಯಾಜಕನು ಏಳುವ ವರೆಗೂ ಮಹಾಪರಿಶುದ್ಧವಾದವುಗಳನ್ನು ತಿನ್ನ ಬಾರದೆಂದು ತರ್ಷಾತನು ಅವರಿಗೆ ಹೇಳಿದನು.
ಕರ್ತನ ಆಜ್ಞೆಗಳ ವಾಕ್ಯಗಳನ್ನೂ ಆತನು ಇಸ್ರಾ ಯೇಲಿಗೆ ಕೊಟ್ಟ ಕಟ್ಟಳೆಗಳನ್ನೂ ಬೋಧಿಸತಕ್ಕ ಶಾಸ್ತ್ರಿಯೂ ಯಾಜಕನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ಪ್ರತಿ ಏನಂದರೆ--
ಇದಲ್ಲದೆ ತಿರ್ಷತನು ಅವರಿಗೆ ಊರಿಮ್ ತುವ್ಮೆಾಮ್ ಉಳ್ಳ ಒಬ್ಬ ಯಾಜಕನು ನಿಲ್ಲುವ ವರೆಗೆ ಮಹಾಪರಿಶುದ್ಧವಾದವುಗಳನ್ನು ತಿನ್ನಬಾರದೆಂದು ಹೇಳಿದನು.
ಪಿತೃಗಳಲ್ಲಿ ಮುಖ್ಯರಾದ ಕೆಲವರು ಕೆಲಸಕ್ಕೆ ಕಾಣಿಕೆಗಳನ್ನು ಕೊಟ್ಟರು. ತಿರ್ಷತನು ಬೊಕ್ಕಸಕ್ಕೆ ಸಾವಿರ ಬಂಗಾರದ ಪವನುಗಳನ್ನು ಐವತ್ತು ಪಾತ್ರೆ ಗಳನ್ನೂ ಐನೂರ ಮೂವತ್ತು ಯಾಜಕರ ಅಂಗಿಗ ಳನ್ನೂ ಕೊಟ್ಟನು.
ಹೀಗೆಯೇ ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ಸಭೆಯ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ
ಇದಲ್ಲದೆ ಯೇಷೂವನೂ ಬಾನೀಯೂ ಶೇರೇಬ್ಯನೂ ಯಾವಿಾನನೂ ಅಕ್ಕೂ ಬನೂ ಶಬ್ಬೆತೈನೂ ಹೋದೀಯನೂ ಮಾಸೇಯನೂ ಕೆಲೀಟನೂ ಅಜರ್ಯನೂ ಯೋಜಾಬಾದನೂ ಹಾನಾನನೂ ಪೆಲಾಯನೂ ಲೇವಿಯರೂ ಜನರಿಗೆ ನ್ಯಾಯಪ್ರಮಾಣವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು.
ಮುದ್ರೆ ಹಾಕಿದವರು ಯಾರಂದರೆ--ಹಕಲ್ಯನ ಮಗನಾದ,
ಯೋಚಾದಾಕನ ಮಗ ನಾದ ಯೇಷೂವನ ಮಗನಾದ ಯೋಯಾಕೀಮನ ದಿವಸಗಳಲ್ಲಿಯೂ ಅಧಿಪತಿಯಾದ ನೆಹೆವಿಾಯನ ದಿವಸಗಳಲ್ಲಿಯೂ ಶಾಸ್ತ್ರಿಯೂ ಯಾಜಕನೂ ಆದ ಎಜ್ರನ ದಿವಸಗಳಲ್ಲಿಯೂ ಇವರು ಇದ್ದರು.
ಅಳುವದಕ್ಕೆ ಒಂದು ಸಮಯ, ನಗುವದಕ್ಕೆ ಒಂದು ಸಮಯ; ಗೋಳಾಡುವದಕ್ಕೆ ಒಂದು ಸಮಯ, ಕುಣಿದಾಡುವದಕ್ಕೆ ಒಂದು ಸಮಯ;
ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.
ನೀವು ತಿರಿಗಿ ಇದನ್ನು ಮಾಡಿ ದ್ದೀರಿ, ಕರ್ತನ ಬಲಿಪೀಠಗಳನ್ನು ಕಣ್ಣೀರುಗಳಿಂದಲೂ ಅಳುವಿಕೆಯಿಂದಲೂ ಕೂಗುವಿಕೆಯಿಂದಲೂ ಮುಚ್ಚಿ ದ್ದೀರಿ; ಆದದರಿಂದ ಆತನು ಕಾಣಿಕೆಯನ್ನು ಇನ್ನು ಮೇಲೆ ಲಕ್ಷ್ಯ ಮಾಡದೆ ಅದನ್ನು ಮೆಚ್ಚಿಕೆಯಾದದ್ದೆಂದು ನಿಮ್ಮ ಕೈಯಿಂದ ಅಂಗೀಕರಿಸುವದಿಲ್ಲ.
ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.
ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು.
ಆದರೂ ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಈಗ ಸಂತೋಷ ಪಡುತ್ತೇನೆ; ಯಾಕಂದರೆ ನೀವು ದೇವರ ಚಿತ್ತಾನುಸಾರ ವಾಗಿ ದುಃಖಿಸಿದ್ದರಿಂದ ನಮ್ಮಿಂದ ಯಾವದರಲ್ಲಿಯೂ ನೀವು ನಷ್ಟಪಡಲಿಲ್ಲವಲ್ಲಾ.