ಫರೋಹನ ಮೇಲೆಯೂ ಅವನ ಸಮಸ್ತ ಸೇವಕರ ಮೇಲೆಯೂ ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚ ಕಕಾರ್ಯಗಳನ್ನೂ ಅದ್ಭುತಗಳನ್ನೂ ತೋರಿಸಿದಿ. ಯಾಕಂದರೆ ಇವರು ಅವರಿಗೆ ಅಹಂಕಾರಿಗಳಾಗಿ ನಡೆದರೆಂದು ತಿಳಿದಿದ್ದಿ. ಈ ಪ್ರಕಾರವೇ ನೀನು ಇಂದಿನ ಹಾಗೆ ನಿನಗೆ ಹೆಸರನ್ನು ಮಾಡಿಕೊಂಡಿದ್ದೀ.
Cross references
ಹೀಗಿರುವದರಿಂದ ನನ್ನ ಕೈಯನ್ನು ಚಾಚಿ ನಾನು ಅದರೊಳಗೆ ಮಾಡುವ ಎಲ್ಲಾ ಅದ್ಭುತಗಳಿಂದ ಐಗುಪ್ತವನ್ನು ಹೊಡೆಯುವೆನು. ತರು ವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು.
ಫರೋಹನು--ನಾನು ಆತನ ಸ್ವರಕ್ಕೆ ವಿಧೇಯನಾಗಿ ಇಸ್ರಾಯೇಲ್ಯರನ್ನು ಕಳುಹಿಸಿ ಬಿಡುವಂತೆ ಆ ಕರ್ತನು ಯಾರು? ಆ ಕರ್ತನನ್ನು ನಾನರಿಯೆನು ಮತ್ತು ಇಸ್ರಾಯೇಲ್ಯರನ್ನು ಕಳುಹಿಸುವದಿಲ್ಲ ಅಂದನು.
ನೀವು ಇನ್ನು ಇಟ್ಟಿಗೆಗಳನ್ನು ಮಾಡುವದಕ್ಕೆ ಮೊದಲಿನ ಹಾಗೆ ಜನರಿಗೆ ಹುಲ್ಲನ್ನು ಕೊಡಬೇಡಿರಿ. ಅವರೇ ಹೋಗಿ ಹುಲ್ಲನ್ನು ಕೂಡಿಸಿಕೊಳ್ಳಲಿ.
ಆಗ ಕರ್ತನು ಮೋಶೆಗೆ--ಇಗೋ, ನಿನ್ನನ್ನು ಫರೋಹನಿಗೆ ದೇವರಂತೆ ಮಾಡಿದ್ದೇನೆ; ನಿನ್ನ ಸಹೋದರನಾದ ಆರೋನನ್ನು ನಿನ್ನಗೋಸ್ಕರ ಪ್ರವಾದಿಯನ್ನಾಗಿ ಮಾಡಿದ್ದೇನೆ.
ಕರ್ತನು ಮಾತನಾಡಿ ಮೋಶೆಗೆ--
ಎಲ್ಲಾ ದೇವರು ಗಳಿಗಿಂತ ಕರ್ತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಐಗುಪ್ತ್ಯರು ಗರ್ವಪಟ್ಟಿದ್ದರಿಂದ ಆತನು ಅವರನ್ನು ತಗ್ಗಿಸಿದನು ಅಂದನು.
ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?
ನಿನ್ನ ಕಣ್ಣುಗಳು ನೋಡಿದ ದೊಡ್ಡ ಉಪದ್ರವ ಗಳನ್ನೂ ನಿನ್ನ ದೇವರಾದ ಕರ್ತನು ನಿನ್ನನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ ಅದ್ಭುತ ಗಳನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ನೀನು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀನು ಯಾವ ಜನಗಳಿಗೆ ಭಯಪಡುತ್ತೀಯೋ ಆ ಜನಗಳಿ ಗೆಲ್ಲಾ ನಿನ್ನ ಕರ್ತನಾದ ದೇವರು ಹಾಗೆಯೇ ಮಾಡು ವನು.
ಆತನು ಐಗುಪ್ತದ ಮಧ್ಯದಲ್ಲಿ ಐಗುಪ್ತದ ಅರಸನಾದ ಫರೋಹನಿಗೆ ಮತ್ತು ಅವನ ಎಲ್ಲಾ ದೇಶಕ್ಕೆ ಮಾಡಿದ ಆತನ ಸೂಚಕಕಾರ್ಯಗಳನ್ನೂ ಕೃತ್ಯಗ ಳನ್ನೂ
ನೀವು ಐಗುಪ್ತದಿಂದ ಹೊರಡುವಾಗ ಕರ್ತನು ನಿಮಗೋಸ್ಕರ ಕೆಂಪು ಸಮುದ್ರದ ನೀರನ್ನು ಬತ್ತಿಹೋಗ ಮಾಡಿದ್ದನ್ನೂ ಯೊರ್ದನಿಗೆ ಆಚೆಯಲ್ಲಿದ್ದ ಅಮೋರಿ ಯರ ಇಬ್ಬರು ಅರಸುಗಳಾದ ಸೀಹೋನನನ್ನು ಓಗನನ್ನು ನೀವು ಸಂಪೂರ್ಣ ನಿರ್ಮೂಲ ಮಾಡಿದ್ದನ್ನೂ ನಾವು ಕೇಳಿದ್ದೇವೆ.
ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು.
ಅವರ ತಂದೆಗಳ ಮುಂದೆ ಐಗುಪ್ತ ದೇಶ ದಲ್ಲಿ, ಸೋನ್ ಬೈಲಿನಲ್ಲಿ ಆತನು ಅದ್ಭುತಗಳನ್ನು ಮಾಡಿದನು.
ಐಗುಪ್ತದಲ್ಲಿ ಆದ ಸೂಚಕ ಕಾರ್ಯಗಳನ್ನೂ ಸೋನ್ ಬೈಲಿನಲ್ಲಿ ನಡಿಸಿದ ಅದ್ಭುತ ಗಳನ್ನೂ ಮಾಡಿದ ದಿವಸವನ್ನೂ ಆತನ ಕೈಯನ್ನೂ ಅವರು ಜ್ಞಾಪಕಮಾಡಿಕೊಳ್ಳಲಿಲ್ಲ.
ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
ಇವರು ಆತನ ಗುರುತುಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು.
ನಮ್ಮ ತಂದೆಗಳು ಐಗುಪ್ತದಲ್ಲಿ ನಿನ್ನ ಅದ್ಭುತಗಳನ್ನು ತಿಳಿಯದೆ ನಿನ್ನ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ, ಅಂದರೆ ಕೆಂಪು ಸಮುದ್ರದ ಹತ್ತಿರ ನಿನಗೆ ತಿರುಗಿ ಬಿದ್ದರು.
ಆತನು ಐಗುಪ್ತದ ಚೊಚ್ಚಲಾದವುಗಳನ್ನು, ಮನು ಷ್ಯರು ಮೊದಲುಗೊಂಡು ಪಶುಗಳ ವರೆಗೂ ಹೊಡೆ ದನು.
ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ; ಅವನ ಕಿವಿಗಳು ತೆರೆದಿದ್ದರೂ ಕೇಳನು.
ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ?
ಪಶುವು ತಗ್ಗಿಗೆ ಇಳಿ ಯುವ ಪ್ರಕಾರ, ಕರ್ತನ ಆತ್ಮನು ಅವರಿಗೆ ವಿಶ್ರಾಂತಿ ಕೊಟ್ಟನು; ಈ ಪ್ರಕಾರ ನೀನು ನಿನಗೆ ಮಹಿಮೆ ಯುಳ್ಳ ಹೆಸರನ್ನು ಉಂಟು ಮಾಡುವ ಹಾಗೆ, ನಿನ್ನ ಜನರನ್ನು ನಡಿಸಿದಿ.
ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ
ಆದರೆ ಅವರು ಯಾರ ಮಧ್ಯದಲ್ಲಿದ್ದರೋ ನಾನು ಯಾರ ಮುಂದೆ ಅವರನ್ನು ಐಗುಪ್ತದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯ ಪಡಿಸಿದೆನೋ? ಆ ಅನ್ಯ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸ ಮಾಡಿದೆನು;
ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
ಆದರೆ ಈಗ, ಓ ನಮ್ಮ ದೇವರಾದ ಕರ್ತನೇ, ನಿನ್ನ ಭುಜಬಲವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡಾತನೇ, ನಾವು ಪಾಪಮಾಡಿ ಕೆಟ್ಟವರಾಗಿ ನಡೆದುಕೊಂಡಿದ್ದೇವೆ.
ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು.
ಬರಹವು ಫರೋ ಹನಿಗೆ--ನನ್ನ ಬಲವನ್ನು ನಿನ್ನಲ್ಲಿ ತೋರಿಸುವ ಹಾಗೆಯೂ ನನ್ನ ನಾಮವು ಭೂಮಿಯ ಎಲ್ಲಾ ಕಡೆಯಲ್ಲಿ ಪ್ರಸಿದ್ಧಿ ಹೊಂದಬೇಕೆಂಬ ಉದ್ದೇಶದಿಂದಲೂ ನಾನು ನಿನ್ನನ್ನು ಉನ್ನತ ಸ್ಥಿತಿಗೆ ತಂದಿದ್ದೇನೆ ಎಂದು ಹೇಳುತ್ತದೆ.
ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.