ಸೀನಾಯ್ ಪರ್ವ ತದ ಮೇಲಕ್ಕೆ ಇಳಿದು ಬಂದಿ; ಆಕಾಶದಿಂದ ಅವರ ಸಂಗಡ ಮಾತನಾಡಿದಿ; ಸರಿಯಾದ ನ್ಯಾಯಗಳನ್ನೂ ಸತ್ಯವಾದ ನ್ಯಾಯಪ್ರಮಾಣಗಳನ್ನೂ ಉತ್ತಮವಾದ ಕಟ್ಟಳೆ ಗಳನ್ನೂ ಆಜ್ಞೆಗಳನ್ನೂ ಅವರಿಗೆ ಕೊಟ್ಟಿ.
Cross references
ಮೂರ ನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ; ಯಾಕಂದರೆ ಮೂರನೆಯ ದಿನದಲ್ಲಿ ಕರ್ತನು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವನು.
ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು.
ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
ದೇವರು ಈ ಎಲ್ಲಾ ವಾಕ್ಯಗಳನ್ನು ಹೇಳಿದನು. ಅವು ಯಾವವಂದರೆ--
ಕರ್ತನು ಮೋಶೆಗೆ--ನೀನು ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.
ಇದಲ್ಲದೆ ನಾನು ಈಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನ್ಯಾಯಪ್ರಮಾಣದ ಪ್ರಕಾರ ನೀತಿಯುಳ್ಳ ನಿಯಮ ನ್ಯಾಯಗಳುಳ್ಳ ದೊಡ್ಡ ಜನಾಂಗ ಯಾವದು?
ನೀನು ಹೋರೇಬಿನಲ್ಲಿ ಕರ್ತನ ಮುಂದೆ ನಿಂತ ದಿವಸ ಉಂಟಲ್ಲವೇ? ಆಗ ಕರ್ತನು ನನಗೆ--ಜನರನ್ನು ನನಗಾಗಿ ಕೂಡಿಸು; ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿ ರುವದನ್ನು ಕಲಿತು ತಮ್ಮ ಮಕ್ಕಳಿಗೂ ಬೋಧಿಸುವ ಹಾಗೆ ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡು ವೆನು ಅಂದನು
ನೀನು ಕೇಳಿದಂತೆ ಬೆಂಕಿಯೊಳಗಿಂದ ಮಾತನಾಡುವ ದೇವರ ಶಬ್ದವನ್ನು ಕೇಳಿ ಬದುಕಿದ ಜನರು ಇದ್ದಾರೆಯೇ ?
ಮುಖಾಮುಖಿಯಾಗಿ ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಮಾತನಾಡಿದನು.
ಈ ಮಾತುಗಳನ್ನು ಕರ್ತನು ಬೆಂಕಿಯ ಮೇಘದ ಕಾರ್ಗತ್ತಲೆಯ ಮಧ್ಯದಿಂದಲೂ ಮಹಾಶಬ್ದ ದಿಂದಲೂ ಬೆಟ್ಟದಲ್ಲಿ ನಿಮ್ಮ ಸಭೆಗೆಲ್ಲಾ ಹೇಳಿದನು; ಹೆಚ್ಚೇನೂ ಕೂಡಿಸಲಿಲ್ಲ. ಇವುಗಳನ್ನು ಆತನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟನು.
ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ
ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.
ಇದಲ್ಲದೆ ಆತನು ನಿಮಗೆ ಬರೆದುಕೊಟ್ಟ ಕಟ್ಟಳೆಗಳನ್ನೂ ನೀತಿಗಳನ್ನೂ ನ್ಯಾಯಪ್ರಮಾಣವನ್ನೂ ಆಜ್ಞೆಯನ್ನೂ ನೀವು ನಿರಂತರವಾಗಿ ಕೈಕೊಳ್ಳಲು ಎಚ್ಚರಿಕೆ ಯಾಗಿರಬೇಕು; ಇತರ ದೇವರುಗಳಿಗೆ ಭಯಪಡ ಬೇಡಿರಿ.
ಈ ಎಜ್ರನು ಇಸ್ರಾ ಯೇಲ್ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು.
ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ.
ಆದದರಿಂದ ನಿನ್ನ ಆಜ್ಞೆಗಳನ್ನು ಬಂಗಾರ ಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಮಾಡಿದ್ದೇನೆ.
ಕರ್ತನೇ, ನೀನು ನೀತಿವಂತನು; ನಿನ್ನ ನ್ಯಾಯ ವಿಧಿಗಳು ಯಥಾರ್ಥವಾದವುಗಳೇ.
ಆದಿ ಯಿಂದಲೂ ನಿನ್ನ ವಾಕ್ಯವು ಸತ್ಯವೇ; ನಿನ್ನ ನೀತಿಯ ನ್ಯಾಯವಿಧಿಗಳೆಲ್ಲಾ ನಿತ್ಯವಾಗಿವೆ.
ಆಹಾ, ನೀನು ಆಕಾಶಗಳನ್ನು ಹರಿದು ಬಿಟ್ಟು, ಇಳಿದು ಬಂದಿದ್ದರೆ ಎಷ್ಟೋ ಚೆನ್ನಾ ಗಿತ್ತು! ಬಾ! ಬೆಟ್ಟಗಳು ನಿನ್ನ ಸಮ್ಮುಖದಲ್ಲಿ ಕರಗಲಿ! ಜನಾಂಗಗಳು ನಿನ್ನ ಸಮ್ಮುಖದಲ್ಲಿ ನಡುಗುವ ಹಾಗೆ,
ನಾವು ಎದುರು ನೋಡದೆ ಇದ್ದ ಭಯಂಕರವಾದವುಗಳನ್ನು ನೀನು ಮಾಡಿದಾಗ ಇಳಿದು ಬಂದಿ; ಬೆಟ್ಟಗಳು ನಿನ್ನ ಪ್ರಸನ್ನತೆಯಿಂದ ಕರಗಿಹೋದವು.
ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.
ದೇವರು ತೇಮಾನಿ ನಿಂದಲೂ ಪರಿಶುದ್ಧನು ಪಾರಾನ್ ಪರ್ವತದಿಂದಲೂ ಬಂದನು. ಸೆಲಾ. ಆತನ ಮಹಿಮೆ ಆಕಾಶಗಳನ್ನು ಮುಚ್ಚಿತು: ಆತನ ಸ್ತೋತ್ರವು ಭೂಮಿಯನ್ನು ತುಂಬಿ ಸಿತು.
ಹೀಗಿರಲಾಗಿ ನ್ಯಾಯಪ್ರಮಾಣವು ಪರಿ ಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದ್ದು ಸರಿ.
ಆದರೆ ನನಗೆ ಮನಸ್ಸಿಲ್ಲದ್ದನ್ನು ಮಾಡಿ ದರೆ ನ್ಯಾಯಪ್ರಮಾಣವು ಉತ್ತಮವಾದದ್ದೆಂದು ಒಪ್ಪಿ ಕೊಂಡ ಹಾಗಾಯಿತು.
ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ