ಆದರೆ ಅವರೂ ನಮ್ಮ ತಂದೆಗಳೂ ಗರ್ವಪಟ್ಟು ನಡೆದು ತಮ್ಮ ಕುತ್ತಿಗೆಯನ್ನು ಕಠಿಣಮಾಡಿ ನಿನ್ನ ಆಜ್ಞೆ ಗಳನ್ನು ಕೇಳದೆ ಹೋದರು.
Cross references
ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
ಇದಲ್ಲದೆ ಕರ್ತನು ಮೋಶೆಗೆ--ನಾನು ಈ ಜನ ರನ್ನು ನೋಡಿದ್ದೇನೆ; ಇಗೋ, ಇದು ಬೊಗ್ಗದ ಕುತ್ತಿಗೆಯುಳ್ಳ ಜನವೇ.
ಆದರೆ ನೀವು ಮೇಲೆ ಹೋಗುವದಕ್ಕೆ ಮನಸ್ಸಿಲ್ಲದೆ ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ತಿರುಗಿಬಿದ್ದು
ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.
ಹೀಗಿರುವದರಿಂದ ನಿನ್ನ ನೀತಿಗೋಸ್ಕರ ನಿನ್ನ ದೇವರಾದ ಕರ್ತನು ನಿನಗೆ ಈ ಉತ್ತಮ ದೇಶವನ್ನು ಸ್ವಾಧೀನಪಡಿಸಿಕೊಳ್ಳುವದಕ್ಕೆ ಕೊಡುವದಿಲ್ಲವೆಂದು ತಿಳಿದುಕೊಳ್ಳಬೇಕು; ನೀನು ಬಗ್ಗದ ಕುತ್ತಿಗೆಯುಳ್ಳ ಜನವೇ.
ಇದಲ್ಲದೆ ಕರ್ತನು ನನಗೆ--ನಾನು ಈ ಜನವನ್ನು ನೋಡಿದ್ದೇನೆ; ಇಗೋ, ಇದು ಬಗ್ಗದ ಕುತ್ತಿಗೆಯುಳ್ಳ ಜನವೇ.
ಇದಲ್ಲದೆ ಕರ್ತನು ನಿಮ್ಮನ್ನು ಕಾದೇಶ್ ಬರ್ನೇಯದಿಂದ ಕಳುಹಿಸುವಾಗ--ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿ ಕೊಳ್ಳಿರಿ ಎಂದು ಹೇಳಿದಾಗ ನೀವು ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಆತನನ್ನು ನಂಬಲಿಲ್ಲ, ಆತನ ಮಾತನ್ನು ಕೇಳಲಿಲ್ಲ.
ನಿನ್ನ ದಾಸರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ಜ್ಞಾಪಕಮಾಡಿಕೋ; ಈ ಜನರ ಕಾಠಿಣ್ಯದ ಮೇಲೆಯೂ ಇಲ್ಲವೆ ಅವರ ದುಷ್ಟತ್ವದ ಮೇಲೆಯೂ ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡ.
ನಿನ್ನ ದ್ರೋಹವನ್ನೂ ನಿನ್ನ ಬಗ್ಗದ ಕುತ್ತಿಗೆಯನ್ನೂ ನಾನು ಬಲ್ಲೆನು; ಇಗೋ, ಈಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರು ವಾಗಲೇ ಕರ್ತನಿಗೆ ದ್ರೋಹಮಾಡಿದವರಾದಿರಿ; ನಾನು ಸತ್ತ ಮೇಲೆ ಇನ್ನೇನ್ನಾಗುವದು?
ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
ಆದರೆ ಅವರು ಕೇಳ ದೆಯೂ ತಮ್ಮ ದೇವರಾದ ಕರ್ತನಲ್ಲಿ ನಂಬಿಕೆ ಇಡ ದೆಯೂ ತಮ್ಮ ಪಿತೃಗಳ ಕುತ್ತಿಗೆಯ ಹಾಗೆ ತಮ್ಮ ಕುತ್ತಿಗೆಯನ್ನು
ನಮ್ಮ ಪಿತೃಗಳು ಅಪರಾಧಮಾಡಿ ನಮ್ಮ ದೇವರಾದ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ ಆತನನ್ನು ಬಿಟ್ಟು ಕರ್ತನ ನಿವಾಸ ಸ್ಥಾನದ ಕಡೆಯಿಂದ ತಮ್ಮ ಮುಖಗಳನ್ನು ತಿರುಗಿಸಿ ತಮ್ಮ ಬೆನ್ನುಗಳನ್ನು ತೋರಿಸಿದ್ದಾರೆ.
ನಿಮ್ಮ ಪಿತೃ ಗಳ ಹಾಗೆ ನಿಮ್ಮ ಕುತ್ತಿಗೆಯನ್ನು ಕಠಿಣಪಡಿಸಬೇಡಿರಿ. ಕರ್ತನಿಗೆ ಕೈಕೊಟ್ಟು ಆತನು ಯುಗಯುಗಕ್ಕೂ ಪರಿಶುದ್ಧ ಮಾಡಿದ ಆತನ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಕರ್ತನನ್ನು ಸೇವಿಸಿರಿ. ಆಗ ತನ್ನ ಉಗ್ರಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವನು.
ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
ಫರೋಹನ ಮೇಲೆಯೂ ಅವನ ಸಮಸ್ತ ಸೇವಕರ ಮೇಲೆಯೂ ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚ ಕಕಾರ್ಯಗಳನ್ನೂ ಅದ್ಭುತಗಳನ್ನೂ ತೋರಿಸಿದಿ. ಯಾಕಂದರೆ ಇವರು ಅವರಿಗೆ ಅಹಂಕಾರಿಗಳಾಗಿ ನಡೆದರೆಂದು ತಿಳಿದಿದ್ದಿ. ಈ ಪ್ರಕಾರವೇ ನೀನು ಇಂದಿನ ಹಾಗೆ ನಿನಗೆ ಹೆಸರನ್ನು ಮಾಡಿಕೊಂಡಿದ್ದೀ.
ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು.
ತಮ್ಮ ತಂದೆಗಳ ಹಾಗೆ ತಮ್ಮ ಹೃದಯವನ್ನು ಸ್ಥಿರಪಡಿಸು ವಂತೆಯೂ ತಮ್ಮ ಆತ್ಮವು ದೇವರೊಂದಿಗೆ ಸ್ಥಿರವಾಗು ವಂತೆಯೂ ಗರ್ವದಿಂದ ತಿರುಗಿ ಬೀಳುವಂಥ ವಂಶ ವಾಗಿರದ ಹಾಗೆಯೂ ಅದನ್ನು ತಮ್ಮ ಮಕ್ಕಳಿಗೆ ತಿಳಿ ಯಮಾಡಬೇಕೆಂದು ನಮ್ಮ ತಂದೆಗಳಿಗೆ ಆತನು ಆಜ್ಞಾಪಿಸಿದನು.
ಓ ನನ್ನ ಜನರೇ, ಕೇಳಿರಿ; ಓ ಇಸ್ರಾಯೇಲೇ, ನೀನು ನನ್ನನ್ನು ಕೇಳಿದರೆ ನಾನು ನಿನಗೆ ಸಾಕ್ಷಿ ಕೊಡು ವೆನು.
ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ.
ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.
ಅರಣ್ಯದಲ್ಲಿ ಆದ ಶೋಧನೆಯ ದಿವಸದಲ್ಲಿ ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದ ಯವನ್ನು ಕಠಿಣಮಾಡಿಕೊಳ್ಳಬೇಡಿರಿ.
ನಮ್ಮ ತಂದೆಗಳ ಸಂಗಡ ನಾವು ಪಾಪಮಾಡಿದ್ದೇವೆ, ಅಕ್ರಮಮಾಡಿದ್ದೇವೆ, ದುಷ್ಟತ್ವವನ್ನು ನಡಿಸಿದ್ದೇವೆ.
ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ಹಿತ್ತಾಳೆ ಎಂದು ನಾನು ತಿಳಿದುಕೊಂಡಿದ್ದೇನೆ.
ಓ, ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು;
ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.
ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ.
ನನ್ನ ತಂದೆಗೆ--ನಿನಗೆ ಗಂಡು ಕೂಸು ಹುಟ್ಟಿದೆ ಎಂಬ ಸಮಾಚಾರವನ್ನು ಹೇಳಿ ಬಹಳ ಸಂತೋಷ ಉಂಟು ಮಾಡಿದವನು ಶಪಿಸಲ್ಪಡಲಿ!
ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.
ಈ ಹೊತ್ತು ನೀವು ಆತನ ಧ್ವನಿಯನ್ನು ಕೇಳಿದರೆ ಎಂದು ಹೇಳುವಾಗ (ನಿಮ್ಮ ಹಿರಿಯರು) ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದಯ ಗಳನ್ನು ಕಠಿಣಮಾಡಿಕೊಳ್ಳಬೇಡಿರಿ.