ಕೇಳದೆಯೂ ನೀನು ಅವರ ಮಧ್ಯದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕ ಮಾಡದೆಯೂ ತಮ್ಮ ಕುತ್ತಿಗೆಯನ್ನು ಕಠಿಣ ಮಾಡಿ ಎದುರುಬಿದ್ದು ತಮ್ಮ ದಾಸತ್ವಕ್ಕೆ ತಿರಿಗಿ ಹೋಗುವ ಹಾಗೆ ಅಧಿಪತಿಯನ್ನು ನೇಮಿಸಿದರು. ಆದರೆ ನೀನು ಮನ್ನಿಸುವ ದೇವರಾಗಿಯೂ ಕೃಪಾಪೂರ್ಣನೂ ಅಂತಃ ಕರಣವೂ ದೀರ್ಘಶಾಂತಿಯೂ ಮಹಾದಯೆಯೂ ಆಗಿರುವವನಾಗಿಯೂ ಇರುವದರಿಂದ ಅವರನ್ನು ಕೈ ಬಿಡಲಿಲ್ಲ.
Cross references
ಇದಲ್ಲದೆ ಕರ್ತನು ಮೋಶೆಗೆ--ನಾನು ಈ ಜನ ರನ್ನು ನೋಡಿದ್ದೇನೆ; ಇಗೋ, ಇದು ಬೊಗ್ಗದ ಕುತ್ತಿಗೆಯುಳ್ಳ ಜನವೇ.
ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ
ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ.
ನಾವು ಕತ್ತಿಯಿಂದ ಕೊಲೆಯಾಗುವಂತೆ ನಮ್ಮ ಹೆಂಡತಿ ಮಕ್ಕಳೂ ಸುಲಿಗೆಯಾಗುವ ಹಾಗೆಯೂ ಕರ್ತನು ನಮ್ಮನ್ನು ಈ ದೇಶಕ್ಕೆ ಯಾಕೆ ಬರಮಾಡಿದ್ದಾನೆ? ಐಗುಪ್ತದೇಶಕ್ಕೆ ನಾವು ತಿರಿಗಿ ಹೋಗುವದು ನಮಗೆ ಒಳ್ಳೇದಲ್ಲವೋ?
ನಾವು ನಾಯಕನೊಬ್ಬನನ್ನು ಮಾಡಿ ಕೊಂಡು ಐಗುಪ್ತದೇಶಕ್ಕೆ ಹಿಂತಿರುಗೋಣ ಬನ್ನಿರಿ ಎಂದು ಒಬ್ಬರಿಗೊಬ್ಬರು ಹೇಳಿಕೊಂಡರು.
ಆಗ ಕರ್ತನು ಮೋಶೆಗೆ--ಎಷ್ಟರ ವರೆಗೆ ಈ ಜನರು ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ನಡಿಸಿದ ಸಕಲ ಸೂಚಕಕಾರ್ಯಗಳ ದೆಸೆ ಯಿಂದ ನನ್ನನ್ನು ಎಷ್ಟು ಮಾತ್ರಕ್ಕೂ ನಂಬದೆ ಇರುವ ರಲ್ಲಾ?
ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ?
ಆಗ ಮೋಶೆಯು--ನೀವು ಈ ಪ್ರಕಾರ ಯಾಕೆ ಕರ್ತನ ಆಜ್ಞೆಯನ್ನು ವಿಾರುತ್ತೀರಿ? ಅದು ಸಫಲವಾಗು ವದಿಲ್ಲ.
ಇದಲ್ಲದೆ ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ತಕ್ಕೊಂಡು ಬರಲಿಲ್ಲ; ಇಲ್ಲವೆ ಹೊಲಗಳನ್ನೂ ದ್ರಾಕ್ಷೇ ತೋಟಗಳನ್ನೂ ನಮಗೆ ಸ್ವಾಸ್ತ್ಯವಾಗಿ ಕೊಡಲಿಲ್ಲ; ಈ ಮನುಷ್ಯರ ಕಣ್ಣುಗಳನ್ನು ಕಿತ್ತುಬಿಡುವಿಯೋ? ನಾವು ಬರುವದಿಲ್ಲ ಅಂದರು.
ನಿಮ್ಮನ್ನು ತನ್ನ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾನಲ್ಲಾ! ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ ಕರ್ತನಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ.
ನನ್ನ ಜನವಾದ ಇಸ್ರಾಯೇಲ್ಯರನ್ನು ಕೈಬಿಡದೆ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸ ವಾಗಿರುವೆನು ಅಂದನು.
ಆತನು ನಮ್ಮ ತಂದೆಗಳಿಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನೂ ತನ್ನ ನ್ಯಾಯಗಳನ್ನೂ ಕೈಕೊಳ್ಳುವಂತೆಯೂ ತನ್ನ ಸಮಸ್ತ ಮಾರ್ಗಗಳಲ್ಲಿ ನಡೆಯುವಂತೆಯೂ ನಮ್ಮ ಹೃದಯಗಳನ್ನು ತನ್ನ ಕಡೆಗೆ ತಿರುಗಿಸುವ ಹಾಗೆ
ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
ನಾವು ದಾಸರಾಗಿದ್ದೆವು; ಆದಾಗ್ಯೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮ ಕೈ ಬಿಟ್ಟುಬಿಡದೆ ನಮ್ಮನ್ನು ಉಜ್ಜೀವಿಸುವದಕ್ಕೂ ನಮ್ಮ ದೇವರ ಆಲಯವನ್ನು ಕಟ್ಟಿಸುವದಕ್ಕೂ ಅದರ ಹಾಳಾ ದವುಗಳನ್ನು ದುರಸ್ತು ಮಾಡುವದಕ್ಕೂ ಯೆಹೂದ ದಲ್ಲಿ ಮತ್ತು ಯೆರೂಸಲೇಮಿನಲ್ಲಿ ನಮಗೆ ಗೋಡೆ ಯನ್ನು ಕೊಡುವದಕ್ಕೂ ಪಾರಸಿಯ ಅರಸುಗಳ ಸಮ್ಮು ಖದಲ್ಲಿ ನಮ್ಮ ಮೇಲೆ ಕೃಪೆಯನ್ನು ಮುಂದುವರಿಸಿದ್ದಾನೆ.
ಆದರೂ ನೀನು ನಿನ್ನ ಅಧಿಕವಾದ ಕರುಣೆಯ ನಿಮಿತ್ತ ಅವರನ್ನು ಸಂಪೂರ್ಣ ನಾಶಮಾಡಿ ಬಿಡ ಲಿಲ್ಲ; ಅವರನ್ನು ಕೈಬಿಡಲೂ ಇಲ್ಲ. ಯಾಕಂದರೆ ನೀನು ಕೃಪೆಯೂ ಕರುಣೆಯುಳ್ಳ ದೇವರಾಗಿದ್ದೀ.
ಅವರು ದೇವರ ಒಡಂಬಡಿಕೆ ಯನ್ನು ಕೈಕೊಳ್ಳದೆ ಆತನ ನ್ಯಾಯಪ್ರಮಾಣದಲ್ಲಿ ನಡೆಯಲೊಲ್ಲದೆ ಇದ್ದರು.
ಆತನು ಅವರಿಗೆ ತೋರಿ ಸಿದ ಆತನ ಕೃತ್ಯಗಳನ್ನೂ ಆದ್ಭುತಗಳನ್ನೂ ಮರೆತು ಬಿಟ್ಟರು.
ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.
ಆತನು ಅವರನ್ನು ವೈರಿಯಿಂದ ವಿಮೋಚಿಸಿದ್ದನ್ನೂ
ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ.
ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ.
ಕರ್ತನು ಅಂತಃಕರಣವೂ ದಯೆಯೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳವನಾಗಿದ್ದಾನೆ.
ನಮ್ಮ ತಂದೆಗಳು ಐಗುಪ್ತದಲ್ಲಿ ನಿನ್ನ ಅದ್ಭುತಗಳನ್ನು ತಿಳಿಯದೆ ನಿನ್ನ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ, ಅಂದರೆ ಕೆಂಪು ಸಮುದ್ರದ ಹತ್ತಿರ ನಿನಗೆ ತಿರುಗಿ ಬಿದ್ದರು.
ಆತನ ಕೆಲಸಗಳನ್ನು ಬೇಗ ಮರೆತುಬಿಟ್ಟು ಆತನ ಆಲೋಚನೆಗೆ ಅವರು ಕಾದುಕೊಳ್ಳದೆ ಇದ್ದರು.
ಹೌದು, ಅವರು, ಮನೋಹರವಾದ ದೇಶ ವನ್ನು ಅಸಹ್ಯಿಸಿಬಿಟ್ಟು ಆತನ ಮಾತನ್ನು ನಂಬದೆ ಹೋದರು.
ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು.
ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
ಕರ್ತನು ಕೃಪಾಳುವೂ ಅಂತಃಕರಣವೂ ದೀರ್ಘಶಾಂತಿಯೂ ಮಹಾಕರುಣೆಯುಳ್ಳವನೂ ಆಗಿದ್ದಾನೆ.
ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ
ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.
ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ.
ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.
ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಇಲ್ಲವೆ ನಿಮಗೆ ನೆನಪಿಲ್ಲವೋ?
ಆದರೆ ನಮ ಪಿತೃಗಳು ಅವನ ಮಾತುಗಳಿಗೆ ವಿಧೇಯರಾಗದೆ ಅವನನ್ನು ತಳ್ಳಿಬಿಟ್ಟು ತಮ್ಮ ಹೃದಯಗಳಲ್ಲಿ ಹಿಂದಕ್ಕೆ ಐಗುಪ್ತದ ಕಡೆಗೆ ತಿರುಗಿಕೊಂಡು
ಆತನು ಮೋಶೆಗೆ--ಯಾವನ ಮೇಲೆ ನನಗೆ ಕರುಣೆ ಇದೆಯೋ ಅವನನ್ನು ಕರುಣಿಸುವೆನು ಮತ್ತು ಯಾವನ ಮೇಲೆ ನನಗೆ ದಯೆ ಇದೆಯೋ ಅವನಿಗೆ ದಯೆ ತೋರಿಸುವೆನು ಎಂದು ಹೇಳುತ್ತಾನೆ.
ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.