ಇದಲ್ಲದೆ ನೀನು ಅವರಿಗೆ ಬೋಧಿ ಸುವ ಹಾಗೆ ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ; ಅವರ ಬಾಯಿಗೆ ನಿನ್ನ ಮನ್ನವನ್ನು ಹಿಂದೆಗೆಯಲಿಲ್ಲ. ಅವರ ದಾಹಕ್ಕೆ ನೀರನ್ನು ಕೊಟ್ಟಿ.
Cross references
ಆಗ ಕರ್ತನು ಮೋಶೆಗೆ--ಇಗೋ, ರೊಟ್ಟಿಯನ್ನು ನಿಮಗಾಗಿ ನಾನು ಆಕಾಶದಿಂದ ಸುರಿಸುತ್ತೇನೆ; ಅವರು ನನ್ನ ನ್ಯಾಯಪ್ರಮಾಣದ ಪ್ರಕಾರ ನಡೆದುಕೊಳ್ಳುವರೋ ಇಲ್ಲವೋ ಎಂದು ನಾನು ಅವರನ್ನು ಪರೀಕ್ಷಿಸುವ ಹಾಗೆ ಜನರು ಹೊರಗೆಹೋಗಿ ಪ್ರತಿದಿನ ಆ ದಿನಕ್ಕೆ ಬೇಕಾದ ದ್ದನ್ನು ಕೂಡಿಸಲಿ.
ಇಸ್ರಾಯೇಲ್ ಮಕ್ಕಳು ಅದನ್ನು ನೋಡಿದಾಗ ಅವರು ಒಬ್ಬರಿಗೊಬ್ಬರು--ಇದು ಮನ್ನಾ ಅಂದರು. ಯಾಕಂದರೆ ಅದು ಏನಾಗಿತ್ತೆಂದು ಅವರಿಗೆ ತಿಳಿಯಲಿಲ್ಲ. ಆಗ ಮೋಶೆಯು ಅವರಿಗೆ--ಕರ್ತನು ನಿಮಗೆ ಕೊಟ್ಟಿರುವ ರೊಟ್ಟಿಯು ಇದೇ ಎಂದು ಹೇಳಿದನು.
ಇಸ್ರಾಯೇಲ್ ಮಕ್ಕಳು ವಾಸವಾಗಿರತಕ್ಕ ದೇಶಕ್ಕೆ ಬರುವ ವರೆಗೆ ನಾಲ್ವತ್ತು ವರುಷ ಮನ್ನವನ್ನು ತಿಂದರು. ಕಾನಾನ್ ದೇಶದ ಮೇರೆಗಳಿಗೆ ಬರುವ ವರೆಗೂ ಅವರು ಮನ್ನವನ್ನು ತಿಂದರು.ಓಮೆರ್ ಅಂದರೆ ಎಫದಲ್ಲಿ ಹತ್ತನೆಯ ಒಂದು ಪಾಲು.
ಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗುಣು ಗುಟ್ಟಿ--ನಮ್ಮನ್ನೂ ನಮ್ಮ ಮಕ್ಕಳನ್ನೂ ನಮ್ಮ ದನಗಳನ್ನೂ ದಾಹದಿಂದ ಕೊಲ್ಲುವದಕ್ಕಾಗಿ ಯಾಕೆ ಐಗುಪ್ತದೊಳ ಗಿಂದ ಇಲ್ಲಿಗೆ ಬರಮಾಡಿದಿ ಅಂದರು.
ಅಲ್ಲಿ ಇಗೋ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು ನೀನು ಬಂಡೆಯನ್ನು ಹೊಡೆಯ ಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವದು ಅಂದನು. ಮೋಶೆಯು ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.
ನಾನು ಇಳಿದು ಬಂದು ನಿನ್ನ ಸಂಗಡ ಮಾತನಾಡಿ ನಿನ್ನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಅವರ ಮೇಲೆ ಇಡುವೆನು; ಆಗ ನೀನು ಜನರ ಭಾರವನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಅದನ್ನು ಹೊರುವರು.
ಕರ್ತನು ಮೇಘದೊಳಗೆ ಇಳಿದು ಬಂದು ಅವನ ಸಂಗಡ ಮಾತನಾಡಿ ಅವನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟನು. ಆತ್ಮವು ಅವರ ಮೇಲೆ ನೆಲೆಯಾಗಿ ದ್ದಾಗ ಅವರು ಪ್ರವಾದಿಸಿದರು. ಅದನ್ನು ನಿಲ್ಲಿಸಲಿಲ್ಲ.
ಅವರು ಆ ದೇಶದ ಹಳೆಯ ಧಾನ್ಯವನ್ನು ತಿಂದ ಮರು ದಿನದಲ್ಲೇ ಮನ್ನವು ನಿಂತುಹೋಯಿತು; ಇಸ್ರಾಯೇಲ್ ಮಕ್ಕಳಿಗೆ ಮನ್ನ ತಿರಿಗಿ ಸಿಕ್ಕಲಿಲ್ಲ; ಆ ವರುಷದಲ್ಲೆಲ್ಲಾ ಕಾನಾನ್ ದೇಶದ ಫಲವನ್ನು ತಿಂದರು.
ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ. ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ.
ಆತನು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಒಣಗಿದ ಸ್ಥಳಗಳಲ್ಲಿ ನದಿಯಾಗಿ ಹರಿಯಿತು.
ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.
ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್ ದೇವ ರಾಗಿರುವ ನಾನು ಅವರನ್ನು ಕೈಬಿಡೆನು.
ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ನೀರು ರಭಸದಿಂದ ಹೊರಗೆ ಬಂತು;ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ.
ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.
ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?
ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.
ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಹೋರಾಟದಿಂದ ವಿಜ್ಞಾಪಿಸಿಕೊಳ್ಳಬೇಕೆಂದು ಕರ್ತ ನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.
ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.