Home Bibles ನೆಹೆಮ್ಯ 9:20 · ಕನ್ನಡ ಬೈಬಲ್
ನೆಹೆಮ್ಯ 9:20 · ಕನ್ನಡ ಬೈಬಲ್

ಇದಲ್ಲದೆ ನೀನು ಅವರಿಗೆ ಬೋಧಿ ಸುವ ಹಾಗೆ ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ; ಅವರ ಬಾಯಿಗೆ ನಿನ್ನ ಮನ್ನವನ್ನು ಹಿಂದೆಗೆಯಲಿಲ್ಲ. ಅವರ ದಾಹಕ್ಕೆ ನೀರನ್ನು ಕೊಟ್ಟಿ.

Cross references

ನಿರ್ಗಮಕಾಂಡ 16:4

ಆಗ ಕರ್ತನು ಮೋಶೆಗೆ--ಇಗೋ, ರೊಟ್ಟಿಯನ್ನು ನಿಮಗಾಗಿ ನಾನು ಆಕಾಶದಿಂದ ಸುರಿಸುತ್ತೇನೆ; ಅವರು ನನ್ನ ನ್ಯಾಯಪ್ರಮಾಣದ ಪ್ರಕಾರ ನಡೆದುಕೊಳ್ಳುವರೋ ಇಲ್ಲವೋ ಎಂದು ನಾನು ಅವರನ್ನು ಪರೀಕ್ಷಿಸುವ ಹಾಗೆ ಜನರು ಹೊರಗೆಹೋಗಿ ಪ್ರತಿದಿನ ಆ ದಿನಕ್ಕೆ ಬೇಕಾದ ದ್ದನ್ನು ಕೂಡಿಸಲಿ.

ನಿರ್ಗಮಕಾಂಡ 16:15

ಇಸ್ರಾಯೇಲ್‌ ಮಕ್ಕಳು ಅದನ್ನು ನೋಡಿದಾಗ ಅವರು ಒಬ್ಬರಿಗೊಬ್ಬರು--ಇದು ಮನ್ನಾ ಅಂದರು. ಯಾಕಂದರೆ ಅದು ಏನಾಗಿತ್ತೆಂದು ಅವರಿಗೆ ತಿಳಿಯಲಿಲ್ಲ. ಆಗ ಮೋಶೆಯು ಅವರಿಗೆ--ಕರ್ತನು ನಿಮಗೆ ಕೊಟ್ಟಿರುವ ರೊಟ್ಟಿಯು ಇದೇ ಎಂದು ಹೇಳಿದನು.

ನಿರ್ಗಮಕಾಂಡ 16:35

ಇಸ್ರಾಯೇಲ್‌ ಮಕ್ಕಳು ವಾಸವಾಗಿರತಕ್ಕ ದೇಶಕ್ಕೆ ಬರುವ ವರೆಗೆ ನಾಲ್ವತ್ತು ವರುಷ ಮನ್ನವನ್ನು ತಿಂದರು. ಕಾನಾನ್‌ ದೇಶದ ಮೇರೆಗಳಿಗೆ ಬರುವ ವರೆಗೂ ಅವರು ಮನ್ನವನ್ನು ತಿಂದರು.ಓಮೆರ್‌ ಅಂದರೆ ಎಫದಲ್ಲಿ ಹತ್ತನೆಯ ಒಂದು ಪಾಲು.

ನಿರ್ಗಮಕಾಂಡ 17:3

ಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗುಣು ಗುಟ್ಟಿ--ನಮ್ಮನ್ನೂ ನಮ್ಮ ಮಕ್ಕಳನ್ನೂ ನಮ್ಮ ದನಗಳನ್ನೂ ದಾಹದಿಂದ ಕೊಲ್ಲುವದಕ್ಕಾಗಿ ಯಾಕೆ ಐಗುಪ್ತದೊಳ ಗಿಂದ ಇಲ್ಲಿಗೆ ಬರಮಾಡಿದಿ ಅಂದರು.

ನಿರ್ಗಮಕಾಂಡ 17:6

ಅಲ್ಲಿ ಇಗೋ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು ನೀನು ಬಂಡೆಯನ್ನು ಹೊಡೆಯ ಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವದು ಅಂದನು. ಮೋಶೆಯು ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.

ಅಂಕೆಗಳ ಪುಸ್ತಕ 11:17

ನಾನು ಇಳಿದು ಬಂದು ನಿನ್ನ ಸಂಗಡ ಮಾತನಾಡಿ ನಿನ್ನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಅವರ ಮೇಲೆ ಇಡುವೆನು; ಆಗ ನೀನು ಜನರ ಭಾರವನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಅದನ್ನು ಹೊರುವರು.

ಅಂಕೆಗಳ ಪುಸ್ತಕ 11:25

ಕರ್ತನು ಮೇಘದೊಳಗೆ ಇಳಿದು ಬಂದು ಅವನ ಸಂಗಡ ಮಾತನಾಡಿ ಅವನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟನು. ಆತ್ಮವು ಅವರ ಮೇಲೆ ನೆಲೆಯಾಗಿ ದ್ದಾಗ ಅವರು ಪ್ರವಾದಿಸಿದರು. ಅದನ್ನು ನಿಲ್ಲಿಸಲಿಲ್ಲ.

ಯೆಹೋಶುವ 5:12

ಅವರು ಆ ದೇಶದ ಹಳೆಯ ಧಾನ್ಯವನ್ನು ತಿಂದ ಮರು ದಿನದಲ್ಲೇ ಮನ್ನವು ನಿಂತುಹೋಯಿತು; ಇಸ್ರಾಯೇಲ್‌ ಮಕ್ಕಳಿಗೆ ಮನ್ನ ತಿರಿಗಿ ಸಿಕ್ಕಲಿಲ್ಲ; ಆ ವರುಷದಲ್ಲೆಲ್ಲಾ ಕಾನಾನ್‌ ದೇಶದ ಫಲವನ್ನು ತಿಂದರು.

ನೆಹೆಮ್ಯ 9:30

ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ. ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ.

ಕೀರ್ತನೆಗಳು 105:41

ಆತನು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಒಣಗಿದ ಸ್ಥಳಗಳಲ್ಲಿ ನದಿಯಾಗಿ ಹರಿಯಿತು.

ಕೀರ್ತನೆಗಳು 143:10

ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.

ಯೆಶಾಯ 41:17

ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್‌ ದೇವ ರಾಗಿರುವ ನಾನು ಅವರನ್ನು ಕೈಬಿಡೆನು.

ಯೆಶಾಯ 48:21

ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ನೀರು ರಭಸದಿಂದ ಹೊರಗೆ ಬಂತು;ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ.

ಯೆಶಾಯ 49:10

ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.

ಯೆಶಾಯ 63:11

ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?

ಯೋಹಾನ 4:10

ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.

ಯೋಹಾನ 4:14

ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.

ಯೋಹಾನ 7:37

ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.

ರೋಮಾಪುರದವರಿಗೆ 15:30

ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಹೋರಾಟದಿಂದ ವಿಜ್ಞಾಪಿಸಿಕೊಳ್ಳಬೇಕೆಂದು ಕರ್ತ ನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.

ಗಲಾತ್ಯದವರಿಗೆ 5:22

ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ

ಎಫೆಸದವರಿಗೆ 5:9

ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.

2 ಪೇತ್ರ 1:21

ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.

Interlinear

Choose Theme