ಲೇವಿಯರಾದ ಯೇಷೂವನೂ ಕದ್ಮೀಯೇಲನೂ ಬಾನೀಯೂ ಹಷ ಬ್ನೆಯೂ ಶೇರೇಬ್ಯನೂ ಹೋದೀಯನೂ ಶೆಬನ್ಯನೂ ಪೆತಹ್ಯನೂ ಜನರಿಗೆ ಹೇಳಿದ್ದೇನಂದರೆ--ನೀವು ಎದ್ದು ನಿಮ್ಮ ದೇವರಾಗಿರುವ ಕರ್ತನನ್ನು ಎಂದೆಂದಿಗೂ ಸ್ತುತಿಸಿರಿ ಅಂದನು. ಹೀಗೆ ಅವರು--ಸಕಲ ಸ್ತುತಿ ಸ್ತೋತ್ರಗಳಿಗಿಂತ ಉನ್ನತವಾದ ನಿನ್ನ ಘನವುಳ್ಳ ಹೆಸರಿಗೆ ಕೊಂಡಾಟವಾಗಲಿ.
Cross references
ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು.
ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
ನಿನ್ನ ದೇವರಾದ ಕರ್ತನೆಂಬ ಈ ಘನವುಳ್ಳ ಭಯಂಕರವಾದ ಹೆಸರಿಗೆ ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನ್ಯಾಯಪ್ರಮಾಣದ ಮಾತುಗಳನ್ನು ಕಾಪಾಡದೆ, ಕೈಕೊಳ್ಳದೆ ಹೋದರೆ
ಆದರೆ ಕರ್ತನ ದೂತನು ಅವನಿಗೆ--ನನ್ನ ಹೆಸರು ಏನೆಂದು ನೀನು ಕೇಳುವದೇನು? ಆ ಹೆಸರು ರಹಸ್ಯವಾದದ್ದು ಅಂದನು.
ಅರಸನು ತನ್ನ ಮುಖವನ್ನು ತಿರುಗಿಸಿ ಇಸ್ರಾಯೇ ಲಿನ ಸಭೆಯನ್ನೆಲ್ಲಾ ಆಶೀರ್ವದಿಸಿದನು. (ಇಸ್ರಾ ಯೇಲಿನ ಸಭೆಯೆಲ್ಲಾ ನಿಂತಿರುವಾಗ)
ಆಗ ಸೊಲೊಮೋನನು ಇಸ್ರಾಯೇಲಿನ ಸಭೆ ಯವರ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ನಿಂತು ಆಕಾಶದ ಕಡೆಗೆ ತನ್ನ ಕೈಗಳನ್ನು ಎತ್ತಿ ಹೇಳಿದ್ದೇ ನಂದರೆ--
ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ?
ಇಸ್ರಾಯೇಲಿನ ಕರ್ತ ನಾದ ದೇವರು ಯುಗಯುಗಾಂತರಗಳಲ್ಲಿ ಸ್ತುತಿ ಸಲ್ಪಡಲಿ ಎಂದು ಹೇಳಿರಿ. ಸಮಸ್ತ ಜನರು ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು.
ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ.
ಆದದರಿಂದ ನಮ್ಮ ದೇವರೇ, ನಾವು ನಿನ್ನನ್ನು ಸ್ತುತಿಸಿ ನಿನ್ನ ಮಹಿಮೆ ಯುಳ್ಳ ನಾಮವನ್ನು ಕೊಂಡಾಡುತ್ತೇವೆ.
ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು.
ಹೀಗೆಯೇ ಯೆಹೂದದವರೆಲ್ಲರು ತಮ್ಮ ಹೆಂಡತಿಯರು, ಮಕ್ಕಳು, ಚಿಕ್ಕವರು ಸಹಿತವಾಗಿ ಕರ್ತನ ಮುಂದೆ ನಿಂತರು.
ಇದಲ್ಲದೆ ಕೆಹಾತ್ಯರ ಮಕ್ಕಳಲ್ಲಿಯೂ ಕೋರಹಿಯರ ಮಕ್ಕಳಲ್ಲಿಯೂ ಇರುವ ಲೇವಿಯರು ಗಟ್ಟಿಯಾಗಿ ದೊಡ್ಡ ಶಬ್ದದಿಂದ ಇಸ್ರಾಯೇಲಿನ ದೇವ ರಾದ ಕರ್ತನನ್ನು ಸ್ತುತಿಸಲು ಎದ್ದು ನಿಂತರು.
ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು.
ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು. 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
ನೀನೇ ನನ್ನ ಕರ್ತನು; ನನ್ನ ಒಳ್ಳೇತನ ನಿನಗೆ ಮಾತ್ರವಲ್ಲದೆ
ಆತನ ಹೆಸರಿನ ಘನವನ್ನು ಕೀರ್ತಿಸಿರಿ; ಆತನ ಸ್ತೋತ್ರವನ್ನು ಘನವುಳ್ಳದ್ದಾಗಿ ಮಾಡಿರಿ.
ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ.
ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
ನಿನ್ನ ಭಯಂಕರವಾದ ಹೆಸರನ್ನು ಅವರು ಕೊಂಡಾ ಡಲಿ; ಅದು ಪರಿಶುದ್ಧವಾದದ್ದೇ.
ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು.
ಕರ್ತನ ಪರಾಕ್ರಮ ಕ್ರಿಯೆಗಳನ್ನು ಪ್ರಕಟಿಸುವವನಾರು? ಆತನ ಸ್ತೋತ್ರಗಳನ್ನು ಪ್ರಸಿದ್ಧಿ ಪಡಿಸುವವನಾರು?
ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.
ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ.
ಪ್ರತಿದಿನ ನಿನ್ನನ್ನು ಸ್ತುತಿಸುವೆನು; ಎಂದೆಂದಿಗೂ ನಿನ್ನ ಹೆಸರನ್ನು ಸ್ತುತಿಸುವೆನು.
ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ
ನಿನ್ನ ರಾಜ್ಯದ ಘನವನ್ನು ಹೇಳುವರು; ನಿನ್ನ ಪರಾಕ್ರಮವನ್ನು ನುಡಿಯುವರು.
ನನ್ನ ಪ್ರಾಣವಿರುವ ವರೆಗೂ ಕರ್ತನನ್ನು ಸ್ತುತಿಸುವೆನು; ನನ್ನ ಜೀವಮಾನವೆಲ್ಲಾ ನನ್ನ ದೇವರನ್ನು ಕೀರ್ತಿ ಸುವೆನು.
ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ಒಬ್ಬೊಬ್ಬನು ತನ್ನ ತನ್ನ ದಾಸನನ್ನೂ ತನ್ನ ತನ್ನ ದಾಸಿಯನ್ನೂ ಬಿಡುಗಡೆಯಾಗಿ ಕಳುಹಿಸ ಬೇಕೆಂದೂ ಅವರಿಂದ ಸೇವೆ ತಕ್ಕೊಳ್ಳಬಾರದೆಂದೂ ಕೇಳಿದ ಮೇಲೆ ವಿಧೇಯರಾಗಿದ್ದು ಅವರನ್ನು ಕಳುಹಿಸಿ ಬಿಟ್ಟರು.
ದಾನಿಯೇ ಲನು--ದೇವರ ಹೆಸರು ಎಂದೆಂದಿಗೂ ಸ್ತುತಿಸಲ್ಪಡಲಿ; ಯಾಕಂದರೆ ಜ್ಞಾನವೂ ಬಲವೂ ಆತನದಾಗಿದೆ;
ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ