ನೀನು ಒಬ್ಬನೇ ಕರ್ತನಾಗಿದ್ದೀ. ನೀನು ಆಕಾಶವನ್ನೂ ಆಕಾಶಗಳ ಆಕಾಶವನ್ನೂ ಅವು ಗಳ ಸಮಸ್ತ ಸೈನ್ಯವನ್ನೂ ಭೂಮಿಯನ್ನೂ ಅದರ ಲ್ಲಿರುವವುಗಳನ್ನೂ ಸಮುದ್ರಗಳನ್ನೂ ಅವುಗಳೊಳ ಗಿರುವ ಸಮಸ್ತವನ್ನೂ ಉಂಟು ಮಾಡಿದ್ದಲ್ಲದೆ ಅವು ಗಳನ್ನೆಲ್ಲಾ ಕಾಪಾಡುತ್ತೀ. ಇದಲ್ಲದೆ ಆಕಾಶಗಳ ಸೈನ್ಯವು ನಿನ್ನನ್ನು ಆರಾಧಿಸುತ್ತದೆ.
Cross references
ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.
ಆಗ ದೇವರು--ಆಕಾಶದ ಕೆಳಗಿರುವ ನೀರುಗಳು ಒಂದು ಸ್ಥಳದಲ್ಲಿ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ ಅಂದನು. ಅದು ಹಾಗೆಯೇ ಆಯಿತು.
ಹೀಗೆ ಆಕಾಶಗಳೂ ಭೂಮಿಯೂ ಅವುಗಳ ಸಮಸ್ತ ಸಮೂಹವೂ ಸಂಪೂರ್ಣ ವಾದವು.
ಯಾಕೋಬನು ಅವರನ್ನು ನೋಡಿದಾಗ--ಇದು ದೇವರ ಸೈನ್ಯ ಎಂದು ಹೇಳಿ ಆ ಸ್ಥಳಕ್ಕೆ ಮಹನಯಿಮ್ ಎಂದು ಹೆಸರಿಟ್ಟನು.
ಓ ಇಸ್ರಾಯೇಲೇ, ಕೇಳು, ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನು.
ಇಗೋ, ಆಕಾಶವೂ ಆಕಾಶದಾಕಾಶವೂ ಭೂಮಿಯೂ ಅದರಲ್ಲಿ ರುವಂಥದ್ದೆಲ್ಲವೂ ನಿನ್ನ ದೇವರಾಗಿರುವ ಕರ್ತನವು ಗಳೇ.
ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ?
ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು.
ಇದಲ್ಲದೆ ಹಿಜ್ಕೀಯನು ಕರ್ತನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಕೆರೂಬಿಗಳ ಮಧ್ಯದಲ್ಲಿ ವಾಸ ವಾಗಿರುವ ಇಸ್ರಾಯೇಲಿನ ದೇವರಾದ ಕರ್ತನೇ, ನೀನೊಬ್ಬನೇ ಭೂಮಿಯ ಎಲ್ಲಾ ರಾಜ್ಯಗಳಿಗೆ ದೇವ ರಾಗಿದ್ದೀ.
ಆದದ ರಿಂದ ಅವರು ಅವುಗಳನ್ನು ನಾಶಮಾಡಿದ್ದಾರೆ. ಆದರೆ ಈಗ ನಮ್ಮ ದೇವರಾದ ಕರ್ತನೇ, ನೀನೊಬ್ಬನೇ ದೇವರಾದ ಕರ್ತನಾಗಿದ್ದೀ ಎಂದು ಭೂಮಿಯ ಎಲ್ಲಾ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸು ಎಂಬದೇ.
ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
ನಿನ್ನ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿನ್ನ ನ್ಯಾಯತೀರ್ಪುಗಳು ಮಹಾ ಅಗಾಧವೇ. ಓ ಕರ್ತನೇ, ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ.
ನೀನು ದೊಡ್ಡವನೂ ಅದ್ಭುತಗಳನ್ನು ಮಾಡುವಾತನೂ ಆಗಿದ್ದೀ; ನೀನೊಬ್ಬನೇ ದೇವರು.
ಕರ್ತನನ್ನು ಸ್ತುತಿಸಿರಿ. ಆತನ ಎಲ್ಲಾ ಸೈನ್ಯಗಳೇ, ಆತನ ಇಷ್ಟವನ್ನು ನಡಿಸುವ ಆತನ ಸೇವಕರೇ, ಕರ್ತನನ್ನು ಸ್ತುತಿಸಿರಿ.ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.
ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ.
ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.
ಆತನ ದೂತರೆಲ್ಲರೇ, ಆತನನ್ನು, ಸ್ತುತಿಸಿರಿ; ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ;
ಅದರ ಮೇಲೆ ಸೆರಾಫಿಯರು ನಿಂತಿದ್ದರು! ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.
ನೀನೇ ಭೂಮ್ಯಾಕಾಶಗಳನ್ನು ಉಂಟು ಮಾಡಿದವನು.
ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು.
ಕರ್ತನು ಹೇಳುವದೇನಂದರೆ--ನೀವು ನನ್ನ ಸಾಕ್ಷಿಗಳಾಗಿದ್ದೀರಿ; ನಾನೇ ಆತನೆಂದು ನೀವು ತಿಳಿದು ನಂಬಿ ಗ್ರಹಿಸುವ ಹಾಗೆಯೇ ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆ ಯೂ ನನ್ನ ನಂತರದಲ್ಲಿಯೂ ಯಾವ ದೇವರೂ ಇರಲಿಲ್ಲ.
ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
ಹೆದರಬೇಡಿರಿ ಇಲ್ಲವೆ ಭಯಪಡಬೇಡಿರಿ ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ? ಅದನ್ನು ಪ್ರಕಟಿಸಲಿ ಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಹೌದು, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.
ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವರು ತಪ್ಪಿಸಿಕೊಳ್ಳ ಲಾರದ ಕೇಡನ್ನು ಅವರ ಮೇಲೆ ತರುವೆನು; ಅವರು ನನ್ನನ್ನು ಕೂಗಿದರೂ ನಾನು ಅದನ್ನು ಕೇಳುವದಿಲ್ಲ,
ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ.
ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು -- ಓ ಇಸ್ರಾಯೇಲೇ, ಕೇಳು; ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನಾಗಿದ್ದಾನೆ.
ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಪ್ರತಿಯೊಂದು ಸೃಷ್ಟಿಗೆ ಜ್ಯೇಷ್ಠನೂ ಆಗಿದ್ದಾನೆ.
ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
ಇದಲ್ಲದೆ ದೇವರು ಮೊದಲು ಹುಟ್ಟಿದಾತನನ್ನು ಲೋಕದೊಳಗೆ ಬರ ಮಾಡುವಾಗ--ದೇವದೂತರೆಲ್ಲರೂ ಆತನನ್ನು ಆರಾಧಿಸಲಿ ಎಂದು ಹೇಳುತ್ತಾನೆ.
ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.
ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.