ಮೋಶೆ ತನ್ನ ಮಾವನಾದ ಮಿದ್ಯಾನಿನ ರೆಗೂ ವೇಲನ ಮಗನಾದ ಹೋಬಾಬನಿಗೆ--ನಿಮಗೆ ಕೊಡು ತ್ತೇನೆಂದು ಕರ್ತನು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ; ನಮ್ಮ ಸಂಗಡ ನೀನು ಬಾ; ನಾವು ನಿನಗೆ ಒಳ್ಳೇದನ್ನು ಮಾಡುವೆವು; ಕರ್ತನು ಇಸ್ರಾಯೇ ಲ್ಯರನ್ನು ಕುರಿತು ಒಳ್ಳೇದನ್ನು ಹೇಳಿದ್ದಾನೆ ಎಂದು ಹೇಳಿದನು.
Cross references
ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
ನಾನು --ನಿನಗೆ ಖಂಡಿತ ವಾಗಿ ಒಳ್ಳೆಯದನ್ನು ಮಾಡುವೆನು, ನಿನ್ನ ಸಂತತಿಯನ್ನು ಎಣಿಸುವದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು ಎಂದು ಹೇಳಿದಿಯಲ್ಲಾ ಎಂದು ಬೇಡಿಕೊಂಡನು.
ಅವರು ತಮ್ಮ ತಂದೆಯಾದ ರೆಗೂವೇಲನ ಬಳಿಗೆ ಬಂದಾಗ ಅವನು ಅವರಿಗೆ--ಯಾಕೆ ಈ ಹೊತ್ತು ಬೇಗ ಬಂದಿರಿ ಅಂದನು.
ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವದಕ್ಕೆ ಸಮ್ಮತಿ ಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರ ಳನ್ನು ಕೊಟ್ಟನು.
ಮೋಶೆಯು ತನ್ನ ಮಾವನಾಗಿರುವ ಮಿದ್ಯಾನಿನ ವೈದಿಕನಾದ ಇತ್ರೋವನ ಮಂದೆಯನ್ನು ಮೇಯಿಸುತ್ತಿರಲಾಗಿ ಅರಣ್ಯದ ಹಿಂಭಾ ಗಕ್ಕೆ ನಡಿಸಿಕೊಂಡುಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.
ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
ನಿಮ್ಮನ್ನು ನನ್ನ ಜನರನ್ನಾಗಿ ತಕ್ಕೊಂಡು ನಿಮಗೆ ದೇವರಾಗಿರುವೆನು; ಐಗುಪ್ತದ ಬಿಟ್ಟೀಕೆಲಸ ಗಳಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಕರ್ತ ನಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವದು.
ನಾನು ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಕೊಡುವೆನೆಂದು ನನ್ನ ಕೈಯ ನ್ನೆತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರ ಮಾಡಿ ಅದನ್ನು ನಿಮಗೆ ಸ್ವಾಸ್ಥ್ಯವಾಗಿ ಕೊಡುವೆನೆಂದು ಹೇಳಿದ ಕರ್ತನು ನಾನೇ ಎಂದು ಹೇಳು ಅಂದನು.
ದೇವರು ಮೋಶೆಗೆ ಮಾಡಿದವುಗಳೆಲ್ಲವನ್ನೂ ಕರ್ತನು ಇಸ್ರಾಯೇಲ್ಯರನ್ನು ಐಗುಪ್ತದೊಳಗಿಂದ ಹೊರಗೆ ತಂದದ್ದನ್ನೂ ಮಿದ್ಯಾ ನಿನ ವೈದಿಕನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿ
ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.
ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು ಯೂದನ ಮಕ್ಕಳ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೂದದ ಅರಣ್ಯಕ್ಕೆ ಬಂದು ಜನರ ಸಂಗಡ ವಾಸವಾಗಿದ್ದರು.
ಮೋಶೆಯ ಮಾವ ನಾದ ಹೋಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರೆಂಬವನು ಕೇನ್ಯರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿ ತನ್ನ ಗುಡಾರವನ್ನು ಕೆದೆಷಿನ ಬಳಿಯಲ್ಲಿರುವ ಚಾನನ್ನೀಮೆಂಬ ಬೈಲಿನಲ್ಲಿ ಹಾಕಿಕೊಂಡಿದ್ದನು.
ಕೇನ್ಯರಿಗೆ ಅವನು ಹೇಳಿದ್ದೇನಂದರೆ--ಇಸ್ರಾಯೇ ಲ್ಯರು ಐಗುಪ್ತದಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ ನೀವು ಅವರ ಮಧ್ಯ ದಲ್ಲಿಂದ ಹೊರಟು ಹೋಗಿರಿ ಅಂದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು.
ಕರ್ತನು ಒಳ್ಳೆಯವನೆಂದು ರುಚಿಸಿ ನೋಡಿರಿ; ಆತನಲ್ಲಿ ಆಶ್ರ ಯಿಸಿಕೊಳ್ಳುವ ಮನುಷ್ಯನು ಧನ್ಯನು.
ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
ಅವರ ದೇಶವು ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾದ ಪಾಪದಿಂದ ತುಂಬಿದ್ದಾಗ್ಯೂ ಇಸ್ರಾಯೇಲಾದರೂ ಯೆಹೂದವಾದರೂ ತನ್ನ ದೇವರಾದ ಸೈನ್ಯಗಳ ಕರ್ತನಿಂದ ಬಿಡಲ್ಪಟ್ಟದ್ದಲ್ಲ.
ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು.
ಅಲ್ಲಿ ದೇವರು ಅವನಿಗೆ ಕಾಲಿಡುವಷ್ಟು ಸ್ವಾಸ್ತ್ಯವನ್ನು ಕೊಡ ಲಿಲ್ಲ; ಆದಾಗ್ಯೂ ಅವನಿಗೆ ಇನ್ನೂ ಮಗನು ಇಲ್ಲದಿರು ವಾಗ ಆ ದೇಶವನ್ನು ಅವನಿಗೂ ತರುವಾಯ ಅವನ ಸಂತತಿಗೂ ಸ್ವಾಸ್ಥ್ಯವಾಗಿ ಕೊಡುತ್ತೇನೆಂದು ವಾಗ್ದಾನ ಮಾಡಿದನು.
ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.